2:05 AM Thursday20 - November 2025
ಬ್ರೇಕಿಂಗ್ ನ್ಯೂಸ್
ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ

ಇತ್ತೀಚಿನ ಸುದ್ದಿ

ಬೆಂಗಳೂರು: ಸ್ತುತಿ ರಂಗಪ್ರವೇಶ; ಶಾಸ್ತ್ರೀಯ ಭರತನಾಟ್ಯದ ಪಯಣ ಆರಂಭ

26/08/2024, 18:58

ಬೆಂಗಳೂರು(reporterkarnataka.com):ಸಾಂಸ್ಕೃತಿಕ ಕ್ಷೇತ್ರದ ತವರು ಎಂದೇ ಬಿಂಬಿತವಾಗಿರುವ ಐಟಿ ಸಿಟಿ ಬೆಂಗಳೂರಿನಲ್ಲಿ ಪ್ರತಿದಿನ ಹತ್ತಾರು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಲೇ ಇರುತ್ತವೆ. ಹೊಸ ಹೊಸ ಕಲಾವಿದರಿಗೆ ಹಲವಾರು ವೇದಿಕೆಗಳು ಸಜ್ಜುಗೊಂಡಿರುತ್ತವೆ. ಇಂತಹ ಹೊಸ ಕಲಾವಿದೆ ಸ್ತುತಿ ಅವರಿಗೆ ಜಯನಗರದಲ್ಲಿರುವ ಜೆಎಸ್ಎಸ್ ಸಭಾಂಗಣ ಒಂದು ಉತ್ತಮ ವೇದಿಕೆಯನ್ನು ಕಲ್ಪಿಸಿಕೊಟ್ಟಿತು.
ಸ್ತುತಿ ಅವರ ಭರತನಾಟ್ಯ ರಂಗಪ್ರವೇಶಕ್ಕೆ ಈ ಸಭಾಂಗಣ ವೇದಿಕೆಯಾಯಿತು. ಅನುರಾಗ್ ಕಲಾ ಗುರುಕುಲ ಪ್ರಸ್ತುತಪಡಿಸಿದ ಕಾರ್ಯಕ್ರಮದಲ್ಲಿ ನೆರೆದಿದ್ದ ಸಾವಿರಾರು ಕಲಾ ಪೋಷಕರು ಮತ್ತು ಕಲಾಸಕ್ತರ ಸಮ್ಮುಖದಲ್ಲಿ ಸ್ತುತಿ ಅವರು ಮನೋಜ್ಞವಾದ ಭರತನಾಟ್ಯ ಪ್ರದರ್ಶನದ ಮೂಲಕ ರಂಗಪ್ರವೇಶ ಮಾಡಿ ತಾವೊಬ್ಬ ಪ್ರತಿಭಾನ್ವಿತ ಭರತನಾಟ್ಯ ಕಲಾವಿದೆ ಎಂಬುದನ್ನು ಸಾದರಪಡಿಸಿದರು.
ಗುರು ಪಲ್ಲವಿ ರಾಘವೇಂದ್ರ ಅವರಿಂದ ಭರತನಾಟ್ಯ ಕಲಿತ ಸ್ತುತಿ ಈ ಪ್ರದರ್ಶನದ ಮೂಲಕ ಶಾಸ್ತ್ರೀಯ ಭರತನಾಟ್ಯದ ಪಯಣವನ್ನು ಆರಂಭಿಸಿದರು. ಪಲ್ಲವಿ ರಾಘವೇಂದ್ರ ಅವರು ಕಳೆದ ಹಲವು ವರ್ಷಗಳಿಂದ ಕಲಿಸಿಕೊಟ್ಟ ಭರತನಾಟ್ಯದ ಅನೇಕ ಮಜಲುಗಳನ್ನು ಪ್ರದರ್ಶಿಸುವ ಮೂಲಕ ಸ್ತುತಿ ಎಲ್ಲರ ಗಮನ ಸೆಳೆದಿದ್ದೇ ಅಲ್ಲದೆ ಮೆಚ್ಚುಗೆಗೆ ಪಾತ್ರರಾದರು. ಅವರು ಹಾಕಿದ ಪ್ರತಿಯೊಂದು ಹೆಜ್ಜೆಯೂ ಶಾಸ್ತ್ರೀಯ ಕಲಾ ಪ್ರಕಾರಕ್ಕೆ ಹಿಡಿದ ಕನ್ನಡಿಯಂತಿದ್ದು, ಕಲೆಯ ಮೇಲಿನ ಅವರ ಶ್ರದ್ಧೆಯನ್ನು ತೋರಿಸಿತು.


ಮೈಸೂರಿನ ಫೈನ್ ಆರ್ಟ್ಸ್ ವಿಶ್ವವಿದ್ಯಾಲಯ ಕಾಲೇಜಿನ ನೃತ್ಯ ವಿಭಾಗದ ಮುಖ್ಯಸ್ಥರು ಮತ್ತು ಪ್ರೊಫೆಸರ್ ಡಾ.ಕೆ.ಕುಮಾರ್, ಇಂಡಿಯನ್ ಕೌನ್ಸಿಲ್ ಫಾರ್ ಕಲ್ಚರಲ್ ರಿಲೇಶನ್ಸ್ ನ ವಲಯ ನಿರ್ದೇಶಕ ಪ್ರದೀಪ್ ಕುಮಾರ್, ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಮತ್ತು ಖ್ಯಾತ ವಯೋಲಿನ್ ವಾದಕರಾದ ವಿದ್ವಾನ್ ಆರ್.ಕುಮಾರೇಶ್ ಮತ್ತು ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಹಾಗೂ ಪ್ರಖ್ಯಾತ ವೀಣಾವಾದಕಿ ಡಾ.ಜಯಂತಿ ಕುಮಾರೇಶ್ ಅವರು ಸ್ತುತಿ ಅವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಉದಯೋನ್ಮುಖ ಕಲಾವಿದೆಗೆ ಆಶೀರ್ವದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು