1:50 PM Thursday25 - December 2025
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:… ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60… ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ!

ಇತ್ತೀಚಿನ ಸುದ್ದಿ

ಬೆಂಗಳೂರು: ಸ್ತುತಿ ರಂಗಪ್ರವೇಶ; ಶಾಸ್ತ್ರೀಯ ಭರತನಾಟ್ಯದ ಪಯಣ ಆರಂಭ

26/08/2024, 18:58

ಬೆಂಗಳೂರು(reporterkarnataka.com):ಸಾಂಸ್ಕೃತಿಕ ಕ್ಷೇತ್ರದ ತವರು ಎಂದೇ ಬಿಂಬಿತವಾಗಿರುವ ಐಟಿ ಸಿಟಿ ಬೆಂಗಳೂರಿನಲ್ಲಿ ಪ್ರತಿದಿನ ಹತ್ತಾರು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಲೇ ಇರುತ್ತವೆ. ಹೊಸ ಹೊಸ ಕಲಾವಿದರಿಗೆ ಹಲವಾರು ವೇದಿಕೆಗಳು ಸಜ್ಜುಗೊಂಡಿರುತ್ತವೆ. ಇಂತಹ ಹೊಸ ಕಲಾವಿದೆ ಸ್ತುತಿ ಅವರಿಗೆ ಜಯನಗರದಲ್ಲಿರುವ ಜೆಎಸ್ಎಸ್ ಸಭಾಂಗಣ ಒಂದು ಉತ್ತಮ ವೇದಿಕೆಯನ್ನು ಕಲ್ಪಿಸಿಕೊಟ್ಟಿತು.
ಸ್ತುತಿ ಅವರ ಭರತನಾಟ್ಯ ರಂಗಪ್ರವೇಶಕ್ಕೆ ಈ ಸಭಾಂಗಣ ವೇದಿಕೆಯಾಯಿತು. ಅನುರಾಗ್ ಕಲಾ ಗುರುಕುಲ ಪ್ರಸ್ತುತಪಡಿಸಿದ ಕಾರ್ಯಕ್ರಮದಲ್ಲಿ ನೆರೆದಿದ್ದ ಸಾವಿರಾರು ಕಲಾ ಪೋಷಕರು ಮತ್ತು ಕಲಾಸಕ್ತರ ಸಮ್ಮುಖದಲ್ಲಿ ಸ್ತುತಿ ಅವರು ಮನೋಜ್ಞವಾದ ಭರತನಾಟ್ಯ ಪ್ರದರ್ಶನದ ಮೂಲಕ ರಂಗಪ್ರವೇಶ ಮಾಡಿ ತಾವೊಬ್ಬ ಪ್ರತಿಭಾನ್ವಿತ ಭರತನಾಟ್ಯ ಕಲಾವಿದೆ ಎಂಬುದನ್ನು ಸಾದರಪಡಿಸಿದರು.
ಗುರು ಪಲ್ಲವಿ ರಾಘವೇಂದ್ರ ಅವರಿಂದ ಭರತನಾಟ್ಯ ಕಲಿತ ಸ್ತುತಿ ಈ ಪ್ರದರ್ಶನದ ಮೂಲಕ ಶಾಸ್ತ್ರೀಯ ಭರತನಾಟ್ಯದ ಪಯಣವನ್ನು ಆರಂಭಿಸಿದರು. ಪಲ್ಲವಿ ರಾಘವೇಂದ್ರ ಅವರು ಕಳೆದ ಹಲವು ವರ್ಷಗಳಿಂದ ಕಲಿಸಿಕೊಟ್ಟ ಭರತನಾಟ್ಯದ ಅನೇಕ ಮಜಲುಗಳನ್ನು ಪ್ರದರ್ಶಿಸುವ ಮೂಲಕ ಸ್ತುತಿ ಎಲ್ಲರ ಗಮನ ಸೆಳೆದಿದ್ದೇ ಅಲ್ಲದೆ ಮೆಚ್ಚುಗೆಗೆ ಪಾತ್ರರಾದರು. ಅವರು ಹಾಕಿದ ಪ್ರತಿಯೊಂದು ಹೆಜ್ಜೆಯೂ ಶಾಸ್ತ್ರೀಯ ಕಲಾ ಪ್ರಕಾರಕ್ಕೆ ಹಿಡಿದ ಕನ್ನಡಿಯಂತಿದ್ದು, ಕಲೆಯ ಮೇಲಿನ ಅವರ ಶ್ರದ್ಧೆಯನ್ನು ತೋರಿಸಿತು.


ಮೈಸೂರಿನ ಫೈನ್ ಆರ್ಟ್ಸ್ ವಿಶ್ವವಿದ್ಯಾಲಯ ಕಾಲೇಜಿನ ನೃತ್ಯ ವಿಭಾಗದ ಮುಖ್ಯಸ್ಥರು ಮತ್ತು ಪ್ರೊಫೆಸರ್ ಡಾ.ಕೆ.ಕುಮಾರ್, ಇಂಡಿಯನ್ ಕೌನ್ಸಿಲ್ ಫಾರ್ ಕಲ್ಚರಲ್ ರಿಲೇಶನ್ಸ್ ನ ವಲಯ ನಿರ್ದೇಶಕ ಪ್ರದೀಪ್ ಕುಮಾರ್, ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಮತ್ತು ಖ್ಯಾತ ವಯೋಲಿನ್ ವಾದಕರಾದ ವಿದ್ವಾನ್ ಆರ್.ಕುಮಾರೇಶ್ ಮತ್ತು ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಹಾಗೂ ಪ್ರಖ್ಯಾತ ವೀಣಾವಾದಕಿ ಡಾ.ಜಯಂತಿ ಕುಮಾರೇಶ್ ಅವರು ಸ್ತುತಿ ಅವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಉದಯೋನ್ಮುಖ ಕಲಾವಿದೆಗೆ ಆಶೀರ್ವದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು