5:30 PM Sunday19 - April 2026
ಬ್ರೇಕಿಂಗ್ ನ್ಯೂಸ್
ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು Udupi | ಕಾಪು ಬಳಿ ಭೀಕರ ಲಾರಿ-ಕಾರು ಅಪಘಾತ: ಓರ್ವ ಸಾವು; ಇಬ್ಬರು… ಮಂತ್ರಾಲಯದ ಬಳಿ ಭೀಕರ ಅಪಘಾತ: 8 ಮಂದಿ ಸಾವು, ತರೀಕೆರೆ ತಾಲೂಕಿನ ಇಬ್ಬರು… ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ, ಸಂಪುಟ ಪುನರ್ ರಚನೆ ಆಗಲಿ: ಆರೋಗ್ಯ… ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ 17 ಮಂದಿಗೆ ಜೀವಾವಧಿ…

ಇತ್ತೀಚಿನ ಸುದ್ದಿ

ಬೆಂಗಳೂರು: ಸ್ತುತಿ ರಂಗಪ್ರವೇಶ; ಶಾಸ್ತ್ರೀಯ ಭರತನಾಟ್ಯದ ಪಯಣ ಆರಂಭ

26/08/2024, 18:58

ಬೆಂಗಳೂರು(reporterkarnataka.com):ಸಾಂಸ್ಕೃತಿಕ ಕ್ಷೇತ್ರದ ತವರು ಎಂದೇ ಬಿಂಬಿತವಾಗಿರುವ ಐಟಿ ಸಿಟಿ ಬೆಂಗಳೂರಿನಲ್ಲಿ ಪ್ರತಿದಿನ ಹತ್ತಾರು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಲೇ ಇರುತ್ತವೆ. ಹೊಸ ಹೊಸ ಕಲಾವಿದರಿಗೆ ಹಲವಾರು ವೇದಿಕೆಗಳು ಸಜ್ಜುಗೊಂಡಿರುತ್ತವೆ. ಇಂತಹ ಹೊಸ ಕಲಾವಿದೆ ಸ್ತುತಿ ಅವರಿಗೆ ಜಯನಗರದಲ್ಲಿರುವ ಜೆಎಸ್ಎಸ್ ಸಭಾಂಗಣ ಒಂದು ಉತ್ತಮ ವೇದಿಕೆಯನ್ನು ಕಲ್ಪಿಸಿಕೊಟ್ಟಿತು.
ಸ್ತುತಿ ಅವರ ಭರತನಾಟ್ಯ ರಂಗಪ್ರವೇಶಕ್ಕೆ ಈ ಸಭಾಂಗಣ ವೇದಿಕೆಯಾಯಿತು. ಅನುರಾಗ್ ಕಲಾ ಗುರುಕುಲ ಪ್ರಸ್ತುತಪಡಿಸಿದ ಕಾರ್ಯಕ್ರಮದಲ್ಲಿ ನೆರೆದಿದ್ದ ಸಾವಿರಾರು ಕಲಾ ಪೋಷಕರು ಮತ್ತು ಕಲಾಸಕ್ತರ ಸಮ್ಮುಖದಲ್ಲಿ ಸ್ತುತಿ ಅವರು ಮನೋಜ್ಞವಾದ ಭರತನಾಟ್ಯ ಪ್ರದರ್ಶನದ ಮೂಲಕ ರಂಗಪ್ರವೇಶ ಮಾಡಿ ತಾವೊಬ್ಬ ಪ್ರತಿಭಾನ್ವಿತ ಭರತನಾಟ್ಯ ಕಲಾವಿದೆ ಎಂಬುದನ್ನು ಸಾದರಪಡಿಸಿದರು.
ಗುರು ಪಲ್ಲವಿ ರಾಘವೇಂದ್ರ ಅವರಿಂದ ಭರತನಾಟ್ಯ ಕಲಿತ ಸ್ತುತಿ ಈ ಪ್ರದರ್ಶನದ ಮೂಲಕ ಶಾಸ್ತ್ರೀಯ ಭರತನಾಟ್ಯದ ಪಯಣವನ್ನು ಆರಂಭಿಸಿದರು. ಪಲ್ಲವಿ ರಾಘವೇಂದ್ರ ಅವರು ಕಳೆದ ಹಲವು ವರ್ಷಗಳಿಂದ ಕಲಿಸಿಕೊಟ್ಟ ಭರತನಾಟ್ಯದ ಅನೇಕ ಮಜಲುಗಳನ್ನು ಪ್ರದರ್ಶಿಸುವ ಮೂಲಕ ಸ್ತುತಿ ಎಲ್ಲರ ಗಮನ ಸೆಳೆದಿದ್ದೇ ಅಲ್ಲದೆ ಮೆಚ್ಚುಗೆಗೆ ಪಾತ್ರರಾದರು. ಅವರು ಹಾಕಿದ ಪ್ರತಿಯೊಂದು ಹೆಜ್ಜೆಯೂ ಶಾಸ್ತ್ರೀಯ ಕಲಾ ಪ್ರಕಾರಕ್ಕೆ ಹಿಡಿದ ಕನ್ನಡಿಯಂತಿದ್ದು, ಕಲೆಯ ಮೇಲಿನ ಅವರ ಶ್ರದ್ಧೆಯನ್ನು ತೋರಿಸಿತು.


ಮೈಸೂರಿನ ಫೈನ್ ಆರ್ಟ್ಸ್ ವಿಶ್ವವಿದ್ಯಾಲಯ ಕಾಲೇಜಿನ ನೃತ್ಯ ವಿಭಾಗದ ಮುಖ್ಯಸ್ಥರು ಮತ್ತು ಪ್ರೊಫೆಸರ್ ಡಾ.ಕೆ.ಕುಮಾರ್, ಇಂಡಿಯನ್ ಕೌನ್ಸಿಲ್ ಫಾರ್ ಕಲ್ಚರಲ್ ರಿಲೇಶನ್ಸ್ ನ ವಲಯ ನಿರ್ದೇಶಕ ಪ್ರದೀಪ್ ಕುಮಾರ್, ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಮತ್ತು ಖ್ಯಾತ ವಯೋಲಿನ್ ವಾದಕರಾದ ವಿದ್ವಾನ್ ಆರ್.ಕುಮಾರೇಶ್ ಮತ್ತು ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಹಾಗೂ ಪ್ರಖ್ಯಾತ ವೀಣಾವಾದಕಿ ಡಾ.ಜಯಂತಿ ಕುಮಾರೇಶ್ ಅವರು ಸ್ತುತಿ ಅವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಉದಯೋನ್ಮುಖ ಕಲಾವಿದೆಗೆ ಆಶೀರ್ವದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು