8:07 PM Monday29 - June 2026
ಬ್ರೇಕಿಂಗ್ ನ್ಯೂಸ್
ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು

ಇತ್ತೀಚಿನ ಸುದ್ದಿ

ಬೆಂಗಳೂರು: ಸುಟ್ಟ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ಅತ್ಯಾಚಾರ ಮಾಡಿ ಕೊಲೆ ಶಂಕೆ

04/07/2022, 08:45

ಸಾಂದರ್ಭಿಕ ಚಿತ್ರ
ಬೆಂಗಳೂರು(reporterkarnataka.com): ರಾಜಧಾನಿ ಬೆಂಗಳೂರಿನಿಂದ ಮತ್ತೊಂದು ಭಯಾನಕ ಸುದ್ದಿ ಹೊರಬಿದ್ದಿದೆ. ನಗರದ ಕೆಂಗೇರಿ ರಾಮಸಂದ್ರದಲ್ಲಿ ಸಂಪೂರ್ಣವಾಗಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯೊಬ್ಬಳ ದೇಹ ಪತ್ತೆಯಾಗಿದೆ‌‌.

ಕೊಲೆಯಾದ ಮಹಿಳೆ ಯಾರು ಎಂಬ ಮಾಹಿತಿ ಇನ್ನೂ ದೊರೆತಿಲ್ಲ.ಕೊಲೆ ಮಾಡಿ ನಂತರ ಬೆಂಕಿ ಹಚ್ಚಿರಬೇಕೆಂದು ಶಂಕಿಸಲಾಗಿದೆ. ಹತ್ಯೆಗೂ ಮೊದಲು ಅತ್ಯಾಚಾರ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಇಂದು ಬೆಳಗ್ಗೆ ಸ್ಥಳೀಯರೊಬ್ಬರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು.

ಒಂದು ಮೃತದೇಹ ಸುಟ್ಟ ಸ್ಥಿತಿಯಲ್ಲಿ ರಾಮಸಂದ್ರ ನೈಸ್ ರಸ್ತೆ ಪಕ್ಕದಲ್ಲಿ ಬಿದ್ದಿದೆ ಅಂತಾ ಹೇಳಿದರು. ತಕ್ಷಣ ಸ್ಥಳಕ್ಕೆ ಬಂದ ಕೆಂಗೇರಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ‌.

ಈ ವೇಳೆ ಅಲ್ಲಿ ಹೆಣವಾಗಿದ್ದು 25 ರಿಂದ 30 ವರ್ಷದ ಮಹಿಳೆ ಅನ್ನೋದು ಗೊತ್ತಾಗಿದೆ.24 ಗಂಟೆಗೂ ಮೊದಲು ಬೆಂಕಿ ಹಚ್ಚಿರೊ ಕಿಡಿಗೇಡಿಗಳು ಪರಾರಿಯಾಗಿದ್ದಾರೆ.ಮೃತದೇಹ ಪತ್ತೆಯಾದ ಜಾಗದಲ್ಲಿ ಸಿಕ್ಕ ಮದ್ಯದ ಬಾಟಲಿಗಳು, ಚಪ್ಪಲಿಗಳನ್ನೆಲ್ಲ ವಶಕ್ಕೆ ಪಡೆದಿರುವ ಕೆಂಗೇರಿ ಪೊಲೀಸರು ತನಿಖೆ ನಡೆಸ್ತಿದ್ದಾರೆ .

ಇನ್ನೂ ಮೃತದೇಹ ಸಿಕ್ಕ 50 ಮೀಟರ್ ದೂರದಲ್ಲಿ ಒಂದು ನಿರ್ಮಾಣ ಹಂತದ ಪಾಳು ಕಟ್ಟಡ ಇದ್ದು,ಅಲ್ಲಿಯೂ ಸುಟ್ಟ ಕುರುಹುಗಳು ಇದ್ದು ಇಲ್ಲಿ ಬೆಂಕಿ ಹಚ್ಚಿ ನಂತರ ಮರದ ಕೆಳಗೆ ಸುಟ್ಟಾಕಿರೊ ಅನುಮಾನ ಇದೆ. ಅಷ್ಟೇ ಅಲ್ಲ ಬೇರೆ ಕಡೆ ಕೊಲೆ ಮಾಡಿ ಇಲ್ಲಿ ತಂದು ನಿರ್ಜನ ಪ್ರದೇಶದಲ್ಲಿ ಬಿಸಾಡಿಹೋಗಿರುವ ಅನುಮಾನ ಕೂಡ ಇದೆ.ಟೆಕ್ನಿಕಲ್ ಎವಿಡೆನ್ಸ್ ಆಧಾರದ ಮೇಲೆ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು