2:45 PM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಬೆಂಗಳೂರು: ಠಾಣೆಗೆ ಕರೆಯಲು ತೆರಳಿದ್ದ ಮಹಿಳಾ ಹೆಡ್ ಕಾನ್ಸ್ ಟೇಬಲ್ ಗೆ ರೌಡಿಶೀಟರ್ ನಿಂದ ಚೂರಿ ಇರಿತ

17/08/2022, 23:12

ಬೆಂಗಳೂರು(reporterkarnataka.com): ಆರೋಪಿಯನ್ನು ಬಂಧಿಸಲು ಹೋಗಿದ್ದ ಸಮಯದಲ್ಲಿ ಮಹಿಳಾ ಹೆಡ್ ಕಾನ್ ಸ್ಟೇಬಲ್ ಗೆ ರೌಡಿಶೀಟರ್ ಒಬ್ಬ ಚಾಕು ಇರಿದ ಘಟನೆ ಹೆಎಎಲ್ ಠಾಣೆ ವ್ಯಾಪ್ತಿಯ ಜ್ಯೋತಿ ನಗರದಲ್ಲಿ ನಡೆದಿದೆ

ಇತ್ತೀಚೆಗಷ್ಟೇ ಜಾಮೀನಿನ ಆಧಾರದ ಮೇಲೆ ಬಿಡುಗಡೆಯಾಗಿದ್ದ ಆರೋಪಿ, ವಿಚಾರಣೆ ವೇಳೆ ಹಾಜರಾಗದೆ ಇದ್ದ ಕಾರಣ ಆತನನ್ನು ಠಾಣೆಗೆ ಕರೆಯಲು ಹೆಡ್ ಕಾನ್ ಸ್ಟೇಬಲ್ ವಿನುತಾ ತಂಡ ತೆರಳಿದ್ದು, ಈ ಸಮಯದಲ್ಲಿ ಆರೋಪಿ ಮಹಿಳಾ ಸಿಬ್ಬಂದಿಗೆ ಚಾಕುವಿನಿಂದ ಇರಿದು ಪರಾರಿ ಯಾಗಲು ಯತ್ನಿಸಿದ್ದಾನೆ. ಆದರೆ ಸ್ಥಳೀಯರ ಸಹಾಯದಿಂದ ಆತನನ್ನು ಬಂಧಿಸಿ ಠಾಣೆಗೆ ಕರೆತರಲಾಗಿದೆ. ಚಾಕು ಇರಿತಕ್ಕೆ ಒಳಗಾದ ಮಹಿಳಾ ಕಾನ್ಸ್ಟೇಬಲ್ ವಿನುತ ಚೇತರಿಸಿಕೊಳ್ಳುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು