3:48 AM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಟಿಶ್ಯೂ ಥ್ರೆಟ್: ಫ್ಲೈಟ್ ನ ಟಿಶ್ಯೂ ಪೇಪರ್ ನಲ್ಲಿ ಬಾಂಬ್ ಬೆದರಿಕೆಯ ಹುಸಿ ಸಂದೇಶ

08/08/2022, 21:01

ಬೆಂಗಳೂರು(reporterkarnataka.com): ವಿಮಾನದ ಟಾಯ್ಲೆಟ್ ಟಿಶ್ಯೂ ಪೇಪರ್ ಮೇಲೆ ಬಾಂಬ್ ಇದೆ ಎಂದು ಬರೆದಿರುವುದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲಕಾಲ ಆತಂಕದ ಸ್ಥಿತಿ ನಿರ್ಮಾಣಕ್ಕೆ ಕಾರಣವಾಯಿತು.

ಬೆಂಗಳೂರಿಗೆ ಜೈಪುರದಿಂದ ಬಂದಿದ್ದ ಇಂಡಿಗೋ ವಿಮಾನ ಭಾನುವಾರ ರಾತ್ರಿ ಇಳಿಯುವ ಮುನ್ನ ವಿಮಾನದಲ್ಲಿ ಬಾಂಬ್ ಇರುವುದಾಗಿ ಟಾಯ್ಲೆಟ್‌ನಲ್ಲಿ ಟಿಶ್ಯೂ ಪೇಪರ್‌ ಮೇಲೆ ಗೀಚಿದ ಸಂದೇಶ ಪತ್ತೆಯಾಗಿತ್ತು. ಇದು ಕೆಲ ಹೊತ್ತು ಅತಂಕಕ್ಕೆ ಕಾರಣವಾಗಿತ್ತು.

ವಿಮಾನದ ಹಿಂಭಾಗದ ಶೌಚಾಲಯದಲ್ಲಿ ಟಿಶ್ಯೂ ಪೇಪರ್‌ ಬಿದ್ದಿದ್ದನ್ನು ಕ್ಯಾಬಿನ್ ಸಿಬ್ಬಂದಿ ಗಮನಿಸಿದ್ದರು. ಇದರಲ್ಲಿ ‘ಲ್ಯಾಂಡ್ ನಾ ಕರ್ನಾ, ಇಸ್ ಫ್ಲೈಟ್‌ ಮೆ ಬಾಂಬ್ ಹೈ’ (ವಿಮಾನವನ್ನು ಇಳಿಸಬೇಡಿ, ಇದರಲ್ಲಿ ಬಾಂಬ್ ಇದೆ) ಎಂದು ಬರೆದಿತ್ತು ಎಂದು ಭದ್ರತಾ ಅಧಿಕಾರಿ ತಿಳಿಸಿದ್ದಾರೆ.

ತಕ್ಷಣ ಕ್ಯಾಪ್ಟನ್, ವಿಮಾನ ನಿಲ್ದಾಣದ ಭದ್ರತಾ ಏಜೆನ್ಸಿಗಳನ್ನು ಸಂಪರ್ಕಿಸಿ, ಅನುಮತಿ ಪಡೆದು ಬಳಿಕ ವಿಮಾನವನ್ನು ಇಳಿಸಿದ್ದಾರೆ. ತನಿಖೆ ಸಂದರ್ಭ ಇದು ಹುಸಿ ಬಾಂಬ್ ಸಂದೇಶ ಎಂಬುದು ಸ್ಪಷ್ಟವಾಗಿದೆ. ಈ ವಿಮಾನದಲ್ಲಿ 175 ಪ್ರಯಾಣಿಕರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು