8:22 AM Monday26 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಟಿಶ್ಯೂ ಥ್ರೆಟ್: ಫ್ಲೈಟ್ ನ ಟಿಶ್ಯೂ ಪೇಪರ್ ನಲ್ಲಿ ಬಾಂಬ್ ಬೆದರಿಕೆಯ ಹುಸಿ ಸಂದೇಶ

08/08/2022, 21:01

ಬೆಂಗಳೂರು(reporterkarnataka.com): ವಿಮಾನದ ಟಾಯ್ಲೆಟ್ ಟಿಶ್ಯೂ ಪೇಪರ್ ಮೇಲೆ ಬಾಂಬ್ ಇದೆ ಎಂದು ಬರೆದಿರುವುದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲಕಾಲ ಆತಂಕದ ಸ್ಥಿತಿ ನಿರ್ಮಾಣಕ್ಕೆ ಕಾರಣವಾಯಿತು.

ಬೆಂಗಳೂರಿಗೆ ಜೈಪುರದಿಂದ ಬಂದಿದ್ದ ಇಂಡಿಗೋ ವಿಮಾನ ಭಾನುವಾರ ರಾತ್ರಿ ಇಳಿಯುವ ಮುನ್ನ ವಿಮಾನದಲ್ಲಿ ಬಾಂಬ್ ಇರುವುದಾಗಿ ಟಾಯ್ಲೆಟ್‌ನಲ್ಲಿ ಟಿಶ್ಯೂ ಪೇಪರ್‌ ಮೇಲೆ ಗೀಚಿದ ಸಂದೇಶ ಪತ್ತೆಯಾಗಿತ್ತು. ಇದು ಕೆಲ ಹೊತ್ತು ಅತಂಕಕ್ಕೆ ಕಾರಣವಾಗಿತ್ತು.

ವಿಮಾನದ ಹಿಂಭಾಗದ ಶೌಚಾಲಯದಲ್ಲಿ ಟಿಶ್ಯೂ ಪೇಪರ್‌ ಬಿದ್ದಿದ್ದನ್ನು ಕ್ಯಾಬಿನ್ ಸಿಬ್ಬಂದಿ ಗಮನಿಸಿದ್ದರು. ಇದರಲ್ಲಿ ‘ಲ್ಯಾಂಡ್ ನಾ ಕರ್ನಾ, ಇಸ್ ಫ್ಲೈಟ್‌ ಮೆ ಬಾಂಬ್ ಹೈ’ (ವಿಮಾನವನ್ನು ಇಳಿಸಬೇಡಿ, ಇದರಲ್ಲಿ ಬಾಂಬ್ ಇದೆ) ಎಂದು ಬರೆದಿತ್ತು ಎಂದು ಭದ್ರತಾ ಅಧಿಕಾರಿ ತಿಳಿಸಿದ್ದಾರೆ.

ತಕ್ಷಣ ಕ್ಯಾಪ್ಟನ್, ವಿಮಾನ ನಿಲ್ದಾಣದ ಭದ್ರತಾ ಏಜೆನ್ಸಿಗಳನ್ನು ಸಂಪರ್ಕಿಸಿ, ಅನುಮತಿ ಪಡೆದು ಬಳಿಕ ವಿಮಾನವನ್ನು ಇಳಿಸಿದ್ದಾರೆ. ತನಿಖೆ ಸಂದರ್ಭ ಇದು ಹುಸಿ ಬಾಂಬ್ ಸಂದೇಶ ಎಂಬುದು ಸ್ಪಷ್ಟವಾಗಿದೆ. ಈ ವಿಮಾನದಲ್ಲಿ 175 ಪ್ರಯಾಣಿಕರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು