12:37 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಟಿಶ್ಯೂ ಥ್ರೆಟ್: ಫ್ಲೈಟ್ ನ ಟಿಶ್ಯೂ ಪೇಪರ್ ನಲ್ಲಿ ಬಾಂಬ್ ಬೆದರಿಕೆಯ ಹುಸಿ ಸಂದೇಶ

08/08/2022, 21:01

ಬೆಂಗಳೂರು(reporterkarnataka.com): ವಿಮಾನದ ಟಾಯ್ಲೆಟ್ ಟಿಶ್ಯೂ ಪೇಪರ್ ಮೇಲೆ ಬಾಂಬ್ ಇದೆ ಎಂದು ಬರೆದಿರುವುದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲಕಾಲ ಆತಂಕದ ಸ್ಥಿತಿ ನಿರ್ಮಾಣಕ್ಕೆ ಕಾರಣವಾಯಿತು.

ಬೆಂಗಳೂರಿಗೆ ಜೈಪುರದಿಂದ ಬಂದಿದ್ದ ಇಂಡಿಗೋ ವಿಮಾನ ಭಾನುವಾರ ರಾತ್ರಿ ಇಳಿಯುವ ಮುನ್ನ ವಿಮಾನದಲ್ಲಿ ಬಾಂಬ್ ಇರುವುದಾಗಿ ಟಾಯ್ಲೆಟ್‌ನಲ್ಲಿ ಟಿಶ್ಯೂ ಪೇಪರ್‌ ಮೇಲೆ ಗೀಚಿದ ಸಂದೇಶ ಪತ್ತೆಯಾಗಿತ್ತು. ಇದು ಕೆಲ ಹೊತ್ತು ಅತಂಕಕ್ಕೆ ಕಾರಣವಾಗಿತ್ತು.

ವಿಮಾನದ ಹಿಂಭಾಗದ ಶೌಚಾಲಯದಲ್ಲಿ ಟಿಶ್ಯೂ ಪೇಪರ್‌ ಬಿದ್ದಿದ್ದನ್ನು ಕ್ಯಾಬಿನ್ ಸಿಬ್ಬಂದಿ ಗಮನಿಸಿದ್ದರು. ಇದರಲ್ಲಿ ‘ಲ್ಯಾಂಡ್ ನಾ ಕರ್ನಾ, ಇಸ್ ಫ್ಲೈಟ್‌ ಮೆ ಬಾಂಬ್ ಹೈ’ (ವಿಮಾನವನ್ನು ಇಳಿಸಬೇಡಿ, ಇದರಲ್ಲಿ ಬಾಂಬ್ ಇದೆ) ಎಂದು ಬರೆದಿತ್ತು ಎಂದು ಭದ್ರತಾ ಅಧಿಕಾರಿ ತಿಳಿಸಿದ್ದಾರೆ.

ತಕ್ಷಣ ಕ್ಯಾಪ್ಟನ್, ವಿಮಾನ ನಿಲ್ದಾಣದ ಭದ್ರತಾ ಏಜೆನ್ಸಿಗಳನ್ನು ಸಂಪರ್ಕಿಸಿ, ಅನುಮತಿ ಪಡೆದು ಬಳಿಕ ವಿಮಾನವನ್ನು ಇಳಿಸಿದ್ದಾರೆ. ತನಿಖೆ ಸಂದರ್ಭ ಇದು ಹುಸಿ ಬಾಂಬ್ ಸಂದೇಶ ಎಂಬುದು ಸ್ಪಷ್ಟವಾಗಿದೆ. ಈ ವಿಮಾನದಲ್ಲಿ 175 ಪ್ರಯಾಣಿಕರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು