9:47 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಬೆಂಗಳೂರು ವಿಶ್ವವಿದ್ಯಾಲಯದ ಹಾಸ್ಟೆಲ್ ನಲ್ಲಿ ಪಿಜಿ ವಿದ್ಯಾರ್ಥಿನಿ ನೇಣಿಗೆ ಶರಣು

03/02/2025, 22:33

ಬೆಂಗಳೂರು(reporterkarnataka.com): ಸ್ನಾತಕೋತ್ತರ ವಿದ್ಯಾರ್ಥಿನಿಯೊಬ್ಬರು
ಬೆಂಗಳೂರು ವಿಶ್ವವಿದ್ಯಾಲಯದ ಹಾಸ್ಟೆಲ್​​ನಲ್ಲಿ ಆತ್ಮಹತ್ಯೆಗೆ ಮಾಡಿಕೊಂಡ ದಾರುಣ ಘಟನೆ ಸೋಮವಾರ ನಡೆದಿದೆ.
ಮೃತರನ್ನು ಮೈಸೂರು ಜಿಲ್ಲೆಯವರಾದ ಬೆಂಗಳೂರು ವಿವಿಯ ಕನ್ನಡ ವಿಭಾಗದಲ್ಲಿ ದ್ವಿತೀಯ ವರ್ಷದ ಎಂಎ ಓದುತ್ತಿದ್ದ ಎಚ್.ಎನ್. ಪಾವನ ಎಂದು ಗುರುತಿಸಲಾಗಿದೆ.
ವಿದ್ಯಾರ್ಥಿನಿ ಪಾವನ ಅವರು ಇಂದು ಮಧ್ಯಾಹ್ನ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನು ಗಮನಿಸಿದ ವಿದ್ಯಾರ್ಥಿನಿಯರು ಮಾಹಿತಿ ನೀಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ.
ಪಾವನ ಅವರು ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಹೆಬ್ಬಲಗುಪ್ಪೆ ಗ್ರಾಮದ ನಿವಾಸಿಯಾಗಿದ್ದಾರೆ. ಗೆಳೆಯನೊಬ್ಬನನ್ನು ನಂಬಿದ್ದೆ, ಆತನಿಂದ ಮೋಸವಾಗಿದೆ. ಕ್ಷಮಿಸಿ ಅಪ್ಪ, ಅಮ್ಮ.. ಐ ಲವ್ ಯೂ ಎಂದು ಡೆತ್​ನೋಟ್​​ ಬರೆದಿಟ್ಟು ಪಾವನ
ಸಾವಿಗೆ ಶರಣಾಗಿದ್ದಾರೆ.
ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿದೆ. ಪೋಷಕರು ಬೆಂಗಳೂರಿಗೆ ಬಂದ ಬಳಿಕ ಮರಣೋತ್ತರ ಪರೀಕ್ಷೆ ನಡೆಯಲಿದೆ. ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು