1:46 AM Monday9 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಬೆಂಗ್ರೆ: ಮೃತ ಮೀನುಗಾರನ ಕುಟುಂಬಕ್ಕೆ ಶಾಸಕ ವೇದವ್ಯಾಸ ಕಾಮತ್ 6 ಲಕ್ಷ ರೂ. ಚೆಕ್ ಹಸ್ತಾಂತರ

23/06/2022, 21:16

ಮಂಗಳೂರು(reporterkarnataka.com): ಮೀನುಗಾರಿಕೆಗೆ ತೆರಳಿದ್ದ ಸಂದರ್ಭದಲ್ಲಿ ಅವಘಡದಿಂದ ಮೃತಪಟ್ಟ ಮೀನುಗಾರರೊಬ್ಬರ ಕುಟುಂಬಕ್ಕೆ ಮೀನುಗಾರರ ಪರಿಹಾರ ನಿಧಿಯಿಂದ 6 ಲಕ್ಷ ಬಿಡುಗಡೆಗೊಂಡಿದ್ದು ಶಾಸಕ ವೇದವ್ಯಾಸ್ ಕಾಮತ್ ಅವರು ಸಂತ್ರಸ್ತ ಕುಟುಂಬಕ್ಕೆ ಚೆಕ್ ಹಸ್ತಾಂತರಿಸಿದರು. 

ಕಳೆದ ಬುಧವಾರದಂದು ಬೆಂಗ್ರೆ ಸ್ಯಾಂಡ್ಸ್ ಫಿಟ್ ನಿವಾಸಿ ಜಯ ಪುತ್ರನ್  ಅಳಿವೆ ಬಾಲಿನಿನ ಬಳಿ ಬೆಳಗಿನ ಜಾವ ಬೀಸು ಬಲೆಯೊಂದಿಗೆ ಮೀಗಾರಿಕೆ ಮಾಡುತಿದ್ದ ಸಂದರ್ಭದಲ್ಲಿ ಗಾಳಿ ಮಳೆಯ ರಭಸಕ್ಕೆ ನೀರಿಗೆ ಬಿದ್ದು ಮೃತಪಟ್ಟಿದ್ದರು‌. ಈ ವಿಚಾರ ತಿಳಿದ ತಕ್ಷಣ ರಾಜ್ಯ ಸರಕಾರದಿಂದ ಕುಟುಂಬದ ಸದಸ್ಯರಿಗೆ ಪರಿಹಾರ ಧನ ಬಿಡುಗಡೆಗೊಳಿಸಲು ಮನವಿ ಮಾಡಿಕೊಂಡಿದ್ದೆ. ಅದರಂತೆ ರಾಜ್ಯ ಮೀನುಗಾರರ ಸಂಕಷ್ಟ ಪರಿಹಾರ ನಿಧಿಯಿಂದ 6 ಲಕ್ಷ ಬಿಡುಗಡೆಯಾಗಿದ್ದು, ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಲಾಯಿತು ಎಂದು ಹೇಳಿದರು.

ಮೀನುಗಾರರ ಕುರಿತು ನಮ್ಮ ಸರಕಾರದ ಅವಧಿಯಲ್ಲಿ ಸಾಕಷ್ಟು ಜನೋಪಯೋಗಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಮೀನುಗಾರರ ಸಂಕಷ್ಟದ ಸಂದರ್ಭದಲ್ಲಿ ನಮ್ಮ ಆಡಳಿತ ವ್ಯವಸ್ಥೆ ತ್ವರಿತವಾಗಿ ಸಹಕಾರ ನೀಡಿದೆ‌ ಎಂದು ಹೇಳಿದ್ದಾರೆ. 

ಈ ಸಂದರ್ಭದಲ್ಲಿ ಮಾಜಿ ಕಾರ್ಪೋರೇಟರ್ ಮೀರಾ ಕರ್ಕೇರ, ಬಿಜೆಪಿ ಮುಖಂಡರಾದ ಹೇಮಚಂದ್ರ ಸಾಲ್ಯಾನ್, ಲೋಕೇಶ್ ಬೆಂಗ್ರೆ, ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು