7:47 PM Monday2 - February 2026
ಬ್ರೇಕಿಂಗ್ ನ್ಯೂಸ್
ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ

ಇತ್ತೀಚಿನ ಸುದ್ದಿ

ಬೆಂಗ್ರೆ: ಪುನರಾರಂಭಗೊಂಡ ಉಪ ಆರೋಗ್ಯ ಕೇಂದ್ರ ಶಾಸಕ ವೇದವ್ಯಾಸ್ ಕಾಮತ್ ಅವರಿಂದ ಉದ್ಘಾಟನೆ

20/05/2022, 23:38

ಮಂಗಳೂರು(reporterkarnataka.com):ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬೆಂಗ್ರೆಯಲ್ಲಿ ಪುನರಾರಂಭಗೊಂಡ ಉಪ ಆರೋಗ್ಯ ಕೇಂದ್ರವನ್ನು ಶಾಸಕ ವೇದವ್ಯಾಸ್ ಕಾಮತ್ ಉದ್ಘಾಟಿಸಿದರು. 

ಈ ಕುರಿತು ಮಾತನಾಡಿದ ಅವರು, ಬೆಂಗ್ರೆ ಭಾಗದ ಜನರ ಅನುಕೂಲಕ್ಕಾಗಿ ಈ ಹಿಂದೆ ನೀಡಿದ್ದ ಭರವಸೆಯಂತೆ ಉಪ ಆರೋಗ್ಯ ಕೇಂದ್ರ ಸ್ಥಾಪಿಸಲಾಗಿದೆ. ಎಂಸಿಎಫ್ ಸಂಸ್ಥೆಯ ಸಹಕಾರದೊಂದಿಗೆ ಆರೋಗ್ಯ ಕೇಂದ್ರವನ್ನು ಅಭಿವೃದ್ಧಿಪಡಿಸಲಾಗಿದ್ದು ಮುಕ್ಕ ಶ್ರೀನಿವಾಸ್ ಆಸ್ಪತ್ರೆಯ ಮುಖ್ಯಸ್ಥರು ವೈದ್ಯರನ್ನು ನೇಮಕಗೊಳಿಸಲು ಜಿಲ್ಲಾಡಳಿತದೊಂದಿಗೆ ಬಹಳಷ್ಟು ಸಹಕಾರ ನೀಡಿದ್ದಾರೆ. ಆರೋಗ್ಯ ಕೇಂದ್ರಕ್ಕೆ ಸದ್ಯ ಮುಕ್ಕ ಶ್ರೀನಿವಾಸ್ ಆಸ್ಪತ್ರೆಯ ವೈದ್ಯರನ್ನು ನೇಮಿಸಲಾಗಿದೆ ಎಂದರು.

ತೋಟ ಬೆಂಗ್ರೆ, ಕಸಬಾ ಬೆಂಗ್ರೆ ಹಾಗೂ ಬೊಕ್ಕಪಟ್ಣ ಬೆಂಗ್ರೆ ಪರಿಸರದ ನಾಗರಿಕರು ಚಿಕಿತ್ಸೆಗಾಗಿ ನಗರಕ್ಕೆ ಬರಬೇಕಾಗಿತ್ತು. ಬೆಂಗ್ರೆಯಲ್ಲಿ ಆರೋಗ್ಯ ಕೇಂದ್ರ ಪುನರಾರಂಭಿಸುವುದರಿಂದ ನಾಗರಿಕರಿಗೆ ಪ್ರಾಥಮಿಕ ಚಿಕಿತ್ಸೆ ಪಡೆಯುವ‌ ಸೌಲಭ್ಯ ಒದಗಿಸಲಾಗಿದೆ. ಬೆಂಗ್ರೆ ಪರಿಸರದ ಸಾರ್ವಜನಿಕರು ನಗರವನ್ನೇ ಅವಲಂಬಿಸಿರುವುದರಿಂದ ಬೇಡಿಕೆಗಳನ್ನು ಇಲ್ಲಿಯೇ ಪೂರೈಸಲು ಪ್ರಯತ್ನಿಸಲಾಗುವುದು. ಆರೋಗ್ಯ ಕೇಂದ್ರದ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡಿದ ಎಂ.ಸಿ.ಎಫ್ ಸಂಸ್ಥೆಯ ಪ್ರಮುಖರಿಗೆ ಹಾಗೂ ಶ್ರೀನಿವಾಸ್ ಆಸ್ಪತ್ರೆಯ ಪ್ರಮುಖರಿಗೆ ಧನ್ಯವಾದಗಳನ್ನು ಸಲ್ಲಿಸಿದರು.

ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಮಾತನಾಡಿ, ಬೆಂಗ್ರೆಯ ನಾಗರಿಕರು ಪ್ರತಿಯೊಂದು ವಿಚಾರಕ್ಕೂ ಸುತ್ತು ಬಳಸಿ ಬರಬೇಕಾಗಿರುವುದರಿಂದ ಇಲ್ಲಿ ಆರೋಗ್ಯ ಕೇಂದ್ರ ಸ್ಥಾಪನೆ ಬಹಳಷ್ಟು ಉಪಯೋಗಕರವಾಗಿದೆ. ಈ ನಿಟ್ಟಿನಲ್ಲಿ ಶಾಸಕರ ಪ್ರಯತ್ನ ಶ್ಲಾಘನೀಯ ಎಂದರು.

ಕಾರ್ಯಕ್ರಮದಲ್ಲಿ ರಾಜ್ಯ ಮೀನುಗಾರಿಕಾ ನಿಗಮದ ಅಧ್ಯಕ್ಷರಾದ ನಿತಿನ್ ಕುಮಾರ್, ಎಂ.ಸಿ.ಎಫ್ ಮೆಡಿಕಲ್ ಚೀಫ್ ಡಾ. ಯೋಗೀಶ್ ಭಟ್, ಪಿ.ಆರ್.ಒ ಅವಿನಂದ್, ಶ್ರೀನಿವಾಸ್ ಆಸ್ಪತ್ರೆಯ ಮುಖ್ಯಸ್ಥರಾದ ಡಾ. ಶ್ರೀನಿವಾಸ್ ರಾವ್, ಆರೋಗ್ಯಾಧಿಕಾರಿ ಕಿಶೋರ್ ಕೊಟ್ಟಾರಿ, ತಾಲೂಕು ಆರೋಗ್ಯಧಿಕಾರಿ ಸುಜಯ್ ಭಂಡಾರಿ, ಸ್ಥಳೀಯ ಕಾರ್ಪೋರೇಟರ್ ಬೆಂಗ್ರೆ, ಮಹಾಜನ ಸಭಾ ಉಪಾಧ್ಯಕ್ಷರಾದ ನರಸಿಂಹ, ಮಾಜಿ ಕಾರ್ಪೋರೇಟರ್ ಮೀರಾ ಕರ್ಕೇರ, ಮುಖಂಡರಾದ ಹೇಮಚಂದ್ರ, ಕಸಬಾ ಬೆಂಗ್ರೆ ಮಸೀದಿಯ ಅಧ್ಯಕ್ಷರಾದ ಬಿಲಾಲ್, ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು