2:42 PM Saturday11 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ…

ಇತ್ತೀಚಿನ ಸುದ್ದಿ

ಬೆಂಗ್ರೆ: ಪುನರಾರಂಭಗೊಂಡ ಉಪ ಆರೋಗ್ಯ ಕೇಂದ್ರ ಶಾಸಕ ವೇದವ್ಯಾಸ್ ಕಾಮತ್ ಅವರಿಂದ ಉದ್ಘಾಟನೆ

20/05/2022, 23:38

ಮಂಗಳೂರು(reporterkarnataka.com):ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬೆಂಗ್ರೆಯಲ್ಲಿ ಪುನರಾರಂಭಗೊಂಡ ಉಪ ಆರೋಗ್ಯ ಕೇಂದ್ರವನ್ನು ಶಾಸಕ ವೇದವ್ಯಾಸ್ ಕಾಮತ್ ಉದ್ಘಾಟಿಸಿದರು. 

ಈ ಕುರಿತು ಮಾತನಾಡಿದ ಅವರು, ಬೆಂಗ್ರೆ ಭಾಗದ ಜನರ ಅನುಕೂಲಕ್ಕಾಗಿ ಈ ಹಿಂದೆ ನೀಡಿದ್ದ ಭರವಸೆಯಂತೆ ಉಪ ಆರೋಗ್ಯ ಕೇಂದ್ರ ಸ್ಥಾಪಿಸಲಾಗಿದೆ. ಎಂಸಿಎಫ್ ಸಂಸ್ಥೆಯ ಸಹಕಾರದೊಂದಿಗೆ ಆರೋಗ್ಯ ಕೇಂದ್ರವನ್ನು ಅಭಿವೃದ್ಧಿಪಡಿಸಲಾಗಿದ್ದು ಮುಕ್ಕ ಶ್ರೀನಿವಾಸ್ ಆಸ್ಪತ್ರೆಯ ಮುಖ್ಯಸ್ಥರು ವೈದ್ಯರನ್ನು ನೇಮಕಗೊಳಿಸಲು ಜಿಲ್ಲಾಡಳಿತದೊಂದಿಗೆ ಬಹಳಷ್ಟು ಸಹಕಾರ ನೀಡಿದ್ದಾರೆ. ಆರೋಗ್ಯ ಕೇಂದ್ರಕ್ಕೆ ಸದ್ಯ ಮುಕ್ಕ ಶ್ರೀನಿವಾಸ್ ಆಸ್ಪತ್ರೆಯ ವೈದ್ಯರನ್ನು ನೇಮಿಸಲಾಗಿದೆ ಎಂದರು.

ತೋಟ ಬೆಂಗ್ರೆ, ಕಸಬಾ ಬೆಂಗ್ರೆ ಹಾಗೂ ಬೊಕ್ಕಪಟ್ಣ ಬೆಂಗ್ರೆ ಪರಿಸರದ ನಾಗರಿಕರು ಚಿಕಿತ್ಸೆಗಾಗಿ ನಗರಕ್ಕೆ ಬರಬೇಕಾಗಿತ್ತು. ಬೆಂಗ್ರೆಯಲ್ಲಿ ಆರೋಗ್ಯ ಕೇಂದ್ರ ಪುನರಾರಂಭಿಸುವುದರಿಂದ ನಾಗರಿಕರಿಗೆ ಪ್ರಾಥಮಿಕ ಚಿಕಿತ್ಸೆ ಪಡೆಯುವ‌ ಸೌಲಭ್ಯ ಒದಗಿಸಲಾಗಿದೆ. ಬೆಂಗ್ರೆ ಪರಿಸರದ ಸಾರ್ವಜನಿಕರು ನಗರವನ್ನೇ ಅವಲಂಬಿಸಿರುವುದರಿಂದ ಬೇಡಿಕೆಗಳನ್ನು ಇಲ್ಲಿಯೇ ಪೂರೈಸಲು ಪ್ರಯತ್ನಿಸಲಾಗುವುದು. ಆರೋಗ್ಯ ಕೇಂದ್ರದ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡಿದ ಎಂ.ಸಿ.ಎಫ್ ಸಂಸ್ಥೆಯ ಪ್ರಮುಖರಿಗೆ ಹಾಗೂ ಶ್ರೀನಿವಾಸ್ ಆಸ್ಪತ್ರೆಯ ಪ್ರಮುಖರಿಗೆ ಧನ್ಯವಾದಗಳನ್ನು ಸಲ್ಲಿಸಿದರು.

ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಮಾತನಾಡಿ, ಬೆಂಗ್ರೆಯ ನಾಗರಿಕರು ಪ್ರತಿಯೊಂದು ವಿಚಾರಕ್ಕೂ ಸುತ್ತು ಬಳಸಿ ಬರಬೇಕಾಗಿರುವುದರಿಂದ ಇಲ್ಲಿ ಆರೋಗ್ಯ ಕೇಂದ್ರ ಸ್ಥಾಪನೆ ಬಹಳಷ್ಟು ಉಪಯೋಗಕರವಾಗಿದೆ. ಈ ನಿಟ್ಟಿನಲ್ಲಿ ಶಾಸಕರ ಪ್ರಯತ್ನ ಶ್ಲಾಘನೀಯ ಎಂದರು.

ಕಾರ್ಯಕ್ರಮದಲ್ಲಿ ರಾಜ್ಯ ಮೀನುಗಾರಿಕಾ ನಿಗಮದ ಅಧ್ಯಕ್ಷರಾದ ನಿತಿನ್ ಕುಮಾರ್, ಎಂ.ಸಿ.ಎಫ್ ಮೆಡಿಕಲ್ ಚೀಫ್ ಡಾ. ಯೋಗೀಶ್ ಭಟ್, ಪಿ.ಆರ್.ಒ ಅವಿನಂದ್, ಶ್ರೀನಿವಾಸ್ ಆಸ್ಪತ್ರೆಯ ಮುಖ್ಯಸ್ಥರಾದ ಡಾ. ಶ್ರೀನಿವಾಸ್ ರಾವ್, ಆರೋಗ್ಯಾಧಿಕಾರಿ ಕಿಶೋರ್ ಕೊಟ್ಟಾರಿ, ತಾಲೂಕು ಆರೋಗ್ಯಧಿಕಾರಿ ಸುಜಯ್ ಭಂಡಾರಿ, ಸ್ಥಳೀಯ ಕಾರ್ಪೋರೇಟರ್ ಬೆಂಗ್ರೆ, ಮಹಾಜನ ಸಭಾ ಉಪಾಧ್ಯಕ್ಷರಾದ ನರಸಿಂಹ, ಮಾಜಿ ಕಾರ್ಪೋರೇಟರ್ ಮೀರಾ ಕರ್ಕೇರ, ಮುಖಂಡರಾದ ಹೇಮಚಂದ್ರ, ಕಸಬಾ ಬೆಂಗ್ರೆ ಮಸೀದಿಯ ಅಧ್ಯಕ್ಷರಾದ ಬಿಲಾಲ್, ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು