3:35 PM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಬೆಂಗ್ರೆ ಸ್ಯಾಂಡ್ಸ್ ಪಿಟ್ ಶಾಲೆ ಯಲ್ಲಿ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ 

22/06/2022, 15:44

ಮಂಗಳೂರು(reporterkarnataka.com): ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆ, ಧರ್ಮಸ್ಥಳ ಶಾಂತಿವನ ಟ್ರಸ್ಟ್ , ಭಾರತ ಸೇವಾದಳ ಜಿಲ್ಲಾ ಸಮಿತಿ, ದ. ಕ. ಜಿಲ್ಲಾಡಳಿತ ಸಹಭಾಗಿತ್ವದಲ್ಲಿ ಬೆಂಗ್ರೆಯ ಸ್ಯಾಂಡ್ಸ್ ಪಿಟ್
ದ.ಕ.ಜಿ.ಪಂ.ಹಿ.ಪ್ರಾ. ಶಾಲೆಯಲ್ಲಿ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಜರುಗಿತು.

ಕಾರ್ಯಕ್ರಮವನ್ನು  ಬೆಂಗ್ರೆ ಮಹಾಜನ ಸಭಾ ಅಧ್ಯಕ್ಷ ಕೇಶವ ಕರ್ಕೇರ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಶಾಲಾ ಹಳೆ ವಿದ್ಯಾರ್ಥಿ ಸಂಪದ ಅಧ್ಯಕ್ಷ ಸಂಜಯ ಸುವರ್ಣ, ಭಾರತ ಸೇವಾದಳದ ಜಿಲ್ಲಾ ಸಂಘಟಕ ಟಿ.ಎಸ್‌ . ಮಂಜೇಗೌಡ ಆಗಮಿಸಿದ್ದರು.

ಅಧ್ಯಕ್ಷತೆಯನ್ನು ಶಾಲಾ ಎಸ್‌.ಡಿ.ಎಂ.ಸಿ ಅಧ್ಯಕ್ಷ ರಾಕೇಶ್ ವಿ. ಸುವರ್ಣ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಹೇಮಂತ ಕುಲಾಲ್ ಭಾಗವಹಿಸಿದ್ದರು.

ಶಾಲಾ ಶಿಕ್ಷಕಿ ಹಾಗೂ ಶಾಂತಿವನ ಟ್ರಸ್ಟ್ ಯೋಗ ಶಿಕ್ಷಕಿ   ಸುಮ  ಯೋಗ ತರಗತಿಯನ್ನು ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ  75 ನೇ ಅಮೃತ ಮಹೋತ್ಸವದ ಅಂಗವಾಗಿ ನಡೆಸಿದ 75   ಕೋಟಿ ಸೂರ್ಯ ನಮಸ್ಕಾರ ಕಾರ್ಯಕ್ರಮದಲ್ಲಿ ದಿನಕ್ಕೆ12 ರಂತೆ 21 ದಿನಗಳ  ಕಾಲ ಸೂರ್ಯ ನಮಸ್ಕಾರ ಮಾಡಿದ ವಿದ್ಯಾರ್ಥಿಗಳಿಗೆ, ಪ್ರಮಾಣ ಪತ್ರವನ್ನು ವಿತರಿಸಲಾಯಿತು.

ಶಾಲಾ ಮುಖ್ಯೋಪಾಧ್ಯಾಯಿನಿ ಉಮಾಲಕ್ಷ್ಮಿ ಕುಡುಪು ಸ್ವಾಗತಿಸಿದರು. ಶಿಕ್ಷಕಿ  ಉಷಾ.ಕೆ ವಂದಿಸಿದರು.

ಅತಿಥಿ ಶಿಕ್ಷಕಿ ಅಶ್ವಿನಿ , ಗೌರವ ಶಿಕ್ಷಕಿಯರಾದ ದೀಪಾ, ವರ್ಷಾ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು