2:52 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಬೆಂಗ್ರೆ ಸ್ಯಾಂಡ್ಸ್ ಪಿಟ್ ಶಾಲೆ ಯಲ್ಲಿ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ 

22/06/2022, 15:44

ಮಂಗಳೂರು(reporterkarnataka.com): ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆ, ಧರ್ಮಸ್ಥಳ ಶಾಂತಿವನ ಟ್ರಸ್ಟ್ , ಭಾರತ ಸೇವಾದಳ ಜಿಲ್ಲಾ ಸಮಿತಿ, ದ. ಕ. ಜಿಲ್ಲಾಡಳಿತ ಸಹಭಾಗಿತ್ವದಲ್ಲಿ ಬೆಂಗ್ರೆಯ ಸ್ಯಾಂಡ್ಸ್ ಪಿಟ್
ದ.ಕ.ಜಿ.ಪಂ.ಹಿ.ಪ್ರಾ. ಶಾಲೆಯಲ್ಲಿ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಜರುಗಿತು.

ಕಾರ್ಯಕ್ರಮವನ್ನು  ಬೆಂಗ್ರೆ ಮಹಾಜನ ಸಭಾ ಅಧ್ಯಕ್ಷ ಕೇಶವ ಕರ್ಕೇರ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಶಾಲಾ ಹಳೆ ವಿದ್ಯಾರ್ಥಿ ಸಂಪದ ಅಧ್ಯಕ್ಷ ಸಂಜಯ ಸುವರ್ಣ, ಭಾರತ ಸೇವಾದಳದ ಜಿಲ್ಲಾ ಸಂಘಟಕ ಟಿ.ಎಸ್‌ . ಮಂಜೇಗೌಡ ಆಗಮಿಸಿದ್ದರು.

ಅಧ್ಯಕ್ಷತೆಯನ್ನು ಶಾಲಾ ಎಸ್‌.ಡಿ.ಎಂ.ಸಿ ಅಧ್ಯಕ್ಷ ರಾಕೇಶ್ ವಿ. ಸುವರ್ಣ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಹೇಮಂತ ಕುಲಾಲ್ ಭಾಗವಹಿಸಿದ್ದರು.

ಶಾಲಾ ಶಿಕ್ಷಕಿ ಹಾಗೂ ಶಾಂತಿವನ ಟ್ರಸ್ಟ್ ಯೋಗ ಶಿಕ್ಷಕಿ   ಸುಮ  ಯೋಗ ತರಗತಿಯನ್ನು ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ  75 ನೇ ಅಮೃತ ಮಹೋತ್ಸವದ ಅಂಗವಾಗಿ ನಡೆಸಿದ 75   ಕೋಟಿ ಸೂರ್ಯ ನಮಸ್ಕಾರ ಕಾರ್ಯಕ್ರಮದಲ್ಲಿ ದಿನಕ್ಕೆ12 ರಂತೆ 21 ದಿನಗಳ  ಕಾಲ ಸೂರ್ಯ ನಮಸ್ಕಾರ ಮಾಡಿದ ವಿದ್ಯಾರ್ಥಿಗಳಿಗೆ, ಪ್ರಮಾಣ ಪತ್ರವನ್ನು ವಿತರಿಸಲಾಯಿತು.

ಶಾಲಾ ಮುಖ್ಯೋಪಾಧ್ಯಾಯಿನಿ ಉಮಾಲಕ್ಷ್ಮಿ ಕುಡುಪು ಸ್ವಾಗತಿಸಿದರು. ಶಿಕ್ಷಕಿ  ಉಷಾ.ಕೆ ವಂದಿಸಿದರು.

ಅತಿಥಿ ಶಿಕ್ಷಕಿ ಅಶ್ವಿನಿ , ಗೌರವ ಶಿಕ್ಷಕಿಯರಾದ ದೀಪಾ, ವರ್ಷಾ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು