7:31 PM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಬೆಂಗ್ರೆ ಸ್ಯಾಂಡ್ಸ್ ಪಿಟ್ ಹಿರಿಯ ಪ್ರಾಥಮಿಕ ಶಾಲೆ ನೂತನ ಕಟ್ಟಡದ ಭೂಮಿ ಪೂಜೆ, ವಿದ್ಯಾರ್ಥಿ ಸಂಘ ಉದ್ಘಾಟನೆ

01/07/2022, 23:18

ಚಿತ್ರ/ವರದಿ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಬೆಂಗ್ರೆ ಸ್ಯಾಂಡ್ಸ್ ಪಿಟ್ ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ದ ಭೂಮಿ ಪೂಜೆ ಹಾಗೂ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ಜರುಗಿತು.

ಭೂಮಿಪೂಜೆಯನ್ನು  ಹಳೆ ವಿದ್ಯಾರ್ಥಿ ಪ್ರೊ. ಬೆಂಗ್ರೆ ನಾರಾಯಣ ಕರ್ಕೇರ ನೆರವೇರಿಸಿದರು. ಅವರು ಮಾತನಾಡಿ, ಪೇಟೆಂಟ್ ಮಾರಾಟ ಮಾಡಿದ ಹಣದಿಂದ ಹಾಗೂ ತಮ್ಮ ಕುಟುಂಬಸ್ಥರ ನೆರವಿನಿಂದ  ನಮ್ಮ  ಕೈಲಾದ ಮಟ್ಟಿನಲ್ಲಿ ಶಾಲೆಗೆ ಒಂದು ಕೊಠಡಿ ನಿರ್ಮಾಣಕ್ಕೆ ಸಹಕಾರ ನೀಡಿದ್ದೇನೆ. ಇದೇ ರೀತಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಇನ್ನಷ್ಟು ಧನ ಸಹಾಯ ಹರಿದು ಬರಲಿ ಎಂದರು.


ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿದ  ದ. ಕ ಜಿಲ್ಲಾ ಘಟಕದ ಚೇರ್ ಮೇನ್ ಶಾಂತ ರಾಮ್ ಶೆಟ್ಟಿ ಮಾತನಾಡಿದರು.


ಶಾಲಾ ಮುಖ್ಯೋಪಾಧ್ಯಾಯಿನಿ ಉಮಾಲಕ್ಷ್ಮಿ ಕುಡುಪು ಮಾತನಾಡಿ, ಶಾಲಾ ಅಭಿವೃದ್ಧಿ ಕಾರ್ಯದಲ್ಲಿ ಹಳೆ  ವಿದ್ಯಾರ್ಥಿ ಸಂಘದ ಪಾತ್ರ ಈ ಭೂಮಿ ಪೂಜೆಯ ಹಿಂದಿನ ಕೈಚಳಕ. ಇಂತಹ ಹಳೆ ವಿದ್ಯಾರ್ಥಿಗಳ ಸಂಘಗಳಿಂದ ಸರಕಾರಿ ಶಾಲೆಗಳ ಅಭಿವೃದ್ಧಿ ಸಾಧ್ಯ ಎಂದರು.


ಮುಖ್ಯ ಅತಿಥಿಗಳಾಗಿ ಮಹಾಜನ ಸಭೆ ಅಧ್ಯಕ್ಷ ಕೇಶವ ಕರ್ಕೇರ, ಮಂಗಳೂರು ಬಂದರು ಪ್ರಾಧಿಕಾರದ ಟ್ರಸ್ಟಿ ಭರತ್ ಕುಮಾರ್ ಎರ್ಮಾಳ್, ಮತ್ಸ್ತ್ಯೋದ್ಯಮಿ ಮೋಹನ್ ಬೆಂಗ್ರೆ, ಶಿಕ್ಷಣ ಇಲಾಖೆಯ ಸಿ. ಆರ್. ಪಿ. ಹೇಮಂತ್  ಕುಲಾಲ್, ಶಾಲಾ ಎಸ್. ಡಿ. ಎಂ. ಸಿ ಅಧ್ಯಕ್ಷ ರಾಕೇಶ್ ಸುವರ್ಣ, ಶಾಲಾ ಶಿಕ್ಷಕರಾದ ಅಶ್ವಿನಿ , ಸುಮಾ, ದೀಪಾ, ವರ್ಷಾ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಪ್ರೊ. ಬೆಂಗ್ರೆ ಅವರನ್ನು ಸನ್ಮಾನಿಸಲಾಯಿತು


ಶಿಕ್ಷಕಿ ಉಷಾ ಕೆ. ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು