11:57 AM Monday28 - July 2025
ಬ್ರೇಕಿಂಗ್ ನ್ಯೂಸ್
ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;…

ಇತ್ತೀಚಿನ ಸುದ್ದಿ

ಬೆಂಗ್ರೆ ಸಾಂಡ್ಸ್ ಪಿಟ್ ಶಾಲೆ: ಭಾರತ ಸೇವಾದಳ ವತಿಯಿಂದ ಜಿಲ್ಲಾ ಮಟ್ಟದ ರಾಷ್ಟ್ರೀಯ ಭಾವ್ಯಕ್ಯತಾ ಮಕ್ಕಳ ಮೇಳ

31/01/2024, 16:52

ಚಿತ್ರ: ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.ccm): ಭಾರತ ಸೇವಾದಳ ಜಿಲ್ಲಾ ಸಮಿತಿ, ಮಂಗಳೂರು ತಾಲೂಕು ಸಮಿತಿ ಮತ್ತು ಬೆಂಗ್ರೆ ಸಾಂಡ್ಸ್ ಪಿಟ್ ಶಾಲೆಯ ಆಶ್ರಯದಲ್ಲಿ ಇಂದು ಬೆಂಗ್ರೆ ಸ್ಯಾಂಡ್ಸ್ ಪಿಟ್ ಮೈದಾನದಲ್ಲಿ ಭಾರತ ಸೇವಾದಳ ವತಿಯಿಂದ ಜಿಲ್ಲಾ ಮಟ್ಟದ ರಾಷ್ಟ್ರೀಯ ಭಾವ್ಯಕ್ಯತಾ ಮಕ್ಕಳ ಮೇಳ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟನೆಗೈದು ಮಾತನಾಡಿದ ವಿಧಾನ ಪರಿಷತ್ ಶಾಸಕ ಮಂಜುನಾಥ್ ಭಂಡಾರಿ ಅವರು, ಭಾರತ ಸೇವಾದಳ ಮಕ್ಕಳಿಗಾಗಿ ಇರುವ ಶ್ರೇಷ್ಠ ಸಂಘಟನೆ. ಇದರಲ್ಲಿ ಇರುವ ವಿದ್ಯಾರ್ಥಿಗಳು ಜೀವನದುದ್ದಕ್ಕೂ ಶಿಸ್ತನ್ನು ಅಳವಡಿಸಿಕೊಂಡು ಹೋದಾಗ,ಭವಿಷ್ಯದಲ್ಲಿ ಶ್ರೇಷ್ಠ ವ್ಯಕ್ತಿಯಾಗುವುದರಲ್ಲಿ ಸಂದೇಹವಿಲ್ಲ. ಭಾವ್ಯಕ್ಯತಾ ಮಕ್ಕಳ ಮೇಳ ಮಾಡುವುದರಲ್ಲಿ ಒಳ್ಳೆಯ ಅರ್ಥವಿದೆ. ಇದು ಇಂದಿಗೂ ಪ್ರಸ್ತುತ. ಸಾಮಾಜಿಕವಾಗಿ, ಆರ್ಥಿಕವಾಗಿ, ಸಂಸ್ಕೃತಿಕವಾಗಿ, ರಾಜಕೀಯವಾಗಿ ಎಲ್ಲರೂ ಒಟ್ಟಾಗಿ ಬದುಕುವಂತದ್ದು ಭಾವ್ಯಕ್ಯತೆಯ ಸಂದೇಶ. ಸೇವಾದಳದ ಶಿಸ್ತನ್ನು, ಸೇವಾ ಮನೋಭಾವನೆಯನ್ನು ಮತ್ತು ಪ್ರತಿಯೊಂದು ಅಂಶವನ್ನು ತಮ್ಮ ಜೀವನದುದ್ದಕ್ಕೂ ಪಾಲಿಸಿದರೆ ಅದು ಇತರರಿಗೆ ಮಾದರಿಯಾಗುವುದರಲ್ಲಿ ಸಂಶಯವಿಲ್ಲ ಎಂದರು.






ಅದಲ್ಲದೆ ನಗರದಲ್ಲಿ ಮುಂದಿನ ದಿನಗಳಲ್ಲಿ ಭಾರತ ಸೇವಾದಳದ ಕಟ್ಟಡ ನಿರ್ಮಾಣಕ್ಕೆ ಸರಕಾರದ ವತಿಯಿಂದ ಅನುದಾನ ಮಂಜೂರು ಮಾಡುವ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಶಿಕ್ಷಣ ಕ್ಷೇತ್ರದ ಉಪ ನಿರ್ದೇಶಕ ದಯಾನಂದ ರಾಮಚಂದ್ರ ನಾಯಕ್, ಬೆಂಗ್ರೆ ಮಹಾಜನ್ ಸಂಘದ ಅಧ್ಯಕ್ಷ ಚೇತನ್ ಬೆಂಗ್ರೆ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರ ಸಮಿತಿ ಸದಸ್ಯ ಬಶೀರ್ ಬೈಕಂಪಾಡಿ ವಹಿಸಿದ್ದರು. ಸೇವಾದಳ ತಾಲೂಕು ಅಧ್ಯಕ್ಷ ಪ್ರಭಾಕರ್ ಶ್ರೀಯನ್, ಜಿಲ್ಲಾ ದೈಹಿಕ ಶಿಕ್ಷಣಧಿಕಾರಿ ಭುವನೇಶ್,ಶಿಕ್ಷಣ ಇಲಾಖೆಯ ರವಿ ಶಂಕರ್, ಭರತ್, ಸೇವಾದಳದ ಮುಖ್ಯ ಸಂಘಟಕ ಮಂಜೇಗೌಡ, ಪ್ರೇಮ್ ಚಂದ್, ಲಾರೆನ್ಸ್ ಡಿಸೋಜ, ಶ್ ಸುಮಾ, ಶಾಲೆಯ ಮುಖ್ಯ್ಯೋ
ಪಾಧ್ಯಾಯಿನಿ ಉಮಾಲಕ್ಷ್ಮಿ,,ಶಾಲೆಯ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಕೇಶ್ ಸುವರ್ಣ, ಕೃತಿನ್ ಕುಮಾರ್, ಸುನಿಲ್ ದೇವಾಡಿಗ ಉಪಸ್ಥಿತರಿದ್ದರು. ಸೇವಾದಳದ ಜಿಲ್ಲಾ ಕಾರ್ಯದರ್ಶಿ ಟಿ. ಕೆ. ಸುಧೀರ್ ಸ್ವಾಗತಿಸಿ, ತಾಲೂಕು ಕಾರ್ಯದರ್ಶಿ ಉದಯ್ ಕುಂದರ್ ವಂದಿಸಿದರು. ಶಿಕ್ಷಕಿ ಪುಷ್ಪಾವತಿ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು