12:38 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಲ್ಯಾಬ್ ಗಳ ಉದ್ಘಾಟನೆ

24/02/2024, 20:49

ಮಂಗಳೂರು(reporterkarnataka.com): ವಿಕಸಿತವಾಗುತ್ತಿರುವ ಭಾರತದಲ್ಲಿ ಕೈಗಾರಿಕೆ ಸೇರಿದಂತೆ ಖಾಸಗಿ ಉತ್ಪಾದನಾ ರಂಗದಲ್ಲಿ ಸಿವಿಲ್, ಮೂಲ ಸೌಕರ್ಯಗಳು ಸೇರಿದಂತೆ ಭರ್ಜರಿ ಅವಕಾಶಗಳು ಸೃಷ್ಟಿಯಾಗುತ್ತಿವೆ. ಜಾಗತಿಕ ಉದ್ಯೋಗಾವಕಾಶಗಳಿಗೆ ಹಾತೊರೆಯುತ್ತಿದ್ದ ಸ್ಥಿತಿ ಬದಲಾಗಿ ವಿದೇಶಿ ಉದ್ಯಮಗಳೂ ಭಾರತದಲ್ಲಿ ಅವಕಾಶಗಳಿಗಾಗಿ ಹಾತೊರೆಯುತ್ತಿದ್ಧಾರೆ. ವೃತ್ತಿರಂಗದಲ್ಲಿ ಜ್ಞಾನದ ಹಸಿವಿನೊಂದಿಗೆ ನಿರಂತರ ಕಲಿಕೆ, ಬದಲಾವಣೆಗೆ ಸ್ಪಂದಿಸಿ ಅಸ್ತಿತ್ವ ಉಳಿಸಿಕೊಳ್ಳುವ ಜಾಣ್ಮೆ, ವಿಶ್ವಾಸಾರ್ಹತೆಯ ಜತೆಗೆ ವೈಯಕ್ತಿಕ ಬದುಕು, ಕುಟುಂಬ,ಸಮಾಜದ ಜತೆಗೂ ಸಮತೋಲನ ಕಾಯ್ದುಕೊಂಡಾಗ ಬದುಕು ಯಶಸ್ಸು ಮತ್ತು ಸಾಧನೆಯಿಂದ ಕೂಡಿರಲು ಸಾಧ್ಯ ಎಂದು ಟಾಟಾ ಪ್ರಾಜೆಕ್ಟ್ ಲಿ. ಇದರ ಆಡಳಿತ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನಾಯಕ್ ಪೈ ಹೇಳಿದರು. ಅವರು ಶನಿವಾರ ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅತ್ಯಾಧುನಿಕ ಲ್ಯಾಬ್ ಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ದೇಶ ಜಗತ್ತಿನ ಮೂರನೇ ಅತಿ ದೊಡ್ಡ ಆರ್ಥಿಕತೆಯಾಗುವತ್ತ ಧಾವಿಸುತ್ತಿದ್ದು ಮುಂದಿನ ಪೀಳಿಗೆಗೆ ಉತ್ತಮ ವಾತಾವರಣವನ್ನು ಕೊಡುಗೆಯಾಗಿ ನೀಡುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದವರು ಹೇಳಿದರು.


ಇನ್ನೋರ್ವ ಮುಖ್ಯ ಅತಿಥಿ ಏಷ್ಯಾ ಎಟ್ ವರ್ಲಿ ಅಧ್ಯಕ್ಷ ದಿನೇಶ್ ಪಿಸುರ್ಲೇಂಕರ್ ಮಾತನಾಡಿ ಭಾರತೀಯ ಯುವ ಸಂಪನ್ಮೂಲಕ್ಕೆ ಜಾಗತಿಕ ಬೇಡಿಕೆ ಸೃಷ್ಟಿಯಾಗುತ್ತಿದೆ. ಜೀವನದಲ್ಲಿ ಶಿಸ್ತು, ಉತ್ತಮ ಮನೊಭಾವ,ಚುರುಕುತನದ ಜತೆಗೆ ಕಠಿಣ ಪರಿಶ್ರಮವಿದ್ದಾಗ ಜೀವನವನ್ನು ಆನಂದಿಸಲು ಸಾಧ್ಯ ಎಂದರು.
ಆಡಳಿತ ಮಂಡಳಿ ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಅಧ್ಯಕ್ಷ ಡಿ.ವಾಸುದೇವ ಕಾಮತ್, ಸದಸ್ಯ ಬಸ್ತಿ ಪುರುಷೋತ್ತಮ ಶೆಣೈ, ಕಾಲೇಜಿನ ಪ್ರಾಂಶುಪಾಲ ಡಾ.ನಾಗೇಶ್ ಎಚ್. ಆರ್. ಉಪಸ್ಥಿತರಿದ್ದರು.
ಕಾಲೇಜಿನ ಆಡಳಿತ ಕೌನ್ಸಿಲ್ ಸಂಚಾಲಕ ಪ್ರದೀಪ್ ಜಿ. ಪೈ ಸ್ವಾಗತಿಸಿ ಆಡಳಿತ ಮಂಡಳಿಯ ಸಹ ಕೋಶಾಧಿಕಾರಿ ಎಂ. ಜಗನ್ನಾಥ ಕಾಮತ್ ವಂದಿಸಿದರು.
ಸಹಪ್ರಾಧ್ಯಾಪಕಿ ಕ್ಯಾರಲ್ ಡಿ. ಮೆಲ್ಲೋ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು