10:46 PM Saturday14 - February 2026
ಬ್ರೇಕಿಂಗ್ ನ್ಯೂಸ್
ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ…

ಇತ್ತೀಚಿನ ಸುದ್ದಿ

ಬೆನ್ನು ಹುರಿ ಮುರಿದು ಹಾಸಿಗೆ ಹಿಡಿದ ಬಾಲಕಿ ನಿಶಿತಾ: ಬನ್ನಿ, ಈ ಪ್ರತಿಭಾವಂತ ಬಾಲೆಯ ಚಿಕಿತ್ಸೆಗೆ ನೆರವು ನೀಡಿ

23/11/2023, 22:45

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲ್ಲೂಕಿನ ಬಣಕಲ್ ಸಮೀಪದ ಹಾರ್ಗೋಡು ಗ್ರಾಮದ 5ನೇ ತರಗತಿ ಬಾಲಕಿ ನಿಶಿತಾ ಆಟವಾಡುವಾಗ ಬಿದ್ದು ಬೆನ್ನ ಹುರಿ(ಸ್ಪೈನಲ್ ಕಾರ್ಡ್)ಮುರಿದು ಹಾಸಿಗೆ ಹಿಡಿದಿರುವ ಕರಣಾಜನಕ ಘಟನೆ ಈಚೆಗೆ ನಡೆದಿದೆ.ಬಾನಳ್ಳಿಯ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದ ಬಾಲಕಿ ನಿಶಿತಾ ಪ್ರತಿಭಾವಂತೆಯಾಗಿದ್ದು, ಶಾಲೆಯಲ್ಲಿ ಓದುವುದರಲ್ಲೂ ಮುಂದಿದ್ದಳು.ಅರಳು ಹುರಿದಂತೆ ಮಾತನಾಡುವ ಬಾಲಕಿಗೆ ಶಾಲೆಯ ಒಂದು ದಿನದ ರಜೆ ತನ್ನ ಜೀವನವನ್ನೇ ಕೊರಗಿಸುವಂತೆ ಮಾಡಿದೆ. ಮನೆಯ ಪಕ್ಕದ ಮಕ್ಕಳ ಜೊತೆ ಆಟವಾಡುತ್ತಿದ್ದಾಗ ತಲೆಕೆಳಗಾಗಿ ಬಿದ್ದು ತನ್ನ ದೇಹದ ಕೈಕಾಲಿನ ಸ್ವಾಧೀನ ಕಳೆದುಕೊಂಡಿದ್ದಾಳೆ. ಬಾಲಕಿ ಹಾರ್ ಗೋಡಿನ ಕೆ.ಆರ್. ಶ್ರೀಧರ್ ಹಾಗೂ ಗೀತಾ ದಂಪತಿಯ ಪುತ್ರಿಯಾಗಿದ್ದು ಇವರು ಕೂಲಿ ಕಾರ್ಮಿಕರಾಗಿರುತ್ತಾರೆ. ದಿನದ ಒಪ್ಪತ್ತಿಗೂ ಕೂಲಿ ಕೆಲಸವನ್ನೇ ಅವಲಂಬಿಸಿದ್ದು ಒಬ್ಬಳೇ ಮಗಳ ಅನಾರೋಗ್ಯದಿಂದ ಕಂಗೆಟ್ಟು ಹೋಗಿದ್ದಾರೆ.ಬಾಲಕಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿ ಅಲ್ಲಿ ವೈದ್ಯರು ಪರೀಕ್ಷೆ ನಡೆಸಿ ಶೇ ನೂರರಷ್ಟು ಭರವಸೆ ಕೊಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಆದರೆ ಔಷಧಿಗೆ ಶೇ 50ರಷ್ಟು ಸ್ಪಂಧಿಸಿರುವ ಬಾಲಕಿ ಈಗ ಒಂದು ಕೈ ಹಾಗೂ ಕಾಲುಗಳಿಗೆ ಸ್ಪರ್ಷ ಬಂದಿದೆ.ಬಣಕಲ್ ನ ಶ್ರೀ ಕೃಷ್ಣ ಕ್ಲಿನಿಕ್ ವೈದ್ಯರು ಅವಳಿಗೆ ಪಿಸಿಯೋಥೆರಪಿ ನೀಡುತ್ತಿದ್ದಾರೆ.


ಬಾಲಕಿಯು ಗುಣವಾಗುತ್ತೇನೆಂಬ ಆತ್ಮವಿಶ್ವಾಸದಿಂದ ಮುಂದಿನ ಕನಸು ಕಾಣುತ್ತಿದ್ದಾಳೆ. ನಿಲ್ಲಲು ಆಗದ ಕೈಯನ್ನು ಎತ್ತಲು ಆಗದ ಸ್ಥಿತಿಯಿಂದ ಇರುವ ಬಾಲಕಿ ನಿಶಿತಾಗೆ ಪೋಷಕರು ಚಿಕಿತ್ಸೆಗೆ ನೆರವು ಕೋರಿ ಪತ್ರಿಕೆಯೊಂದಿಗೆ ತಮ್ಮ ಅಳಲು ತೋಡಿಕೊಂಡಿದ್ದಾರೆ. ಮಗುವಿನ ಚಿಕಿತ್ಸೆಗೆ ಸುಮಾರು 5 ಲಕ್ಷ ಖರ್ಚಿದೆ. ಸಹೃದಯಿಗಳಲ್ಲಿ ನೆರವಿನ ಹಸ್ತ ಚಾಚಿದ್ದಾರೆ. ಹೆಚ್ಚಿನ ಮಾಹಿತಿಗೆ ಪೋಷಕರ ದೂರವಾಣಿ ಸಂಖ್ಯೆ 9980430710 ಕರೆ ಮಾಡಬಹುದು.ಅಥವಾ ಧಾನಿಗಳು ಖಾತೆ ಸಂಖ್ಯೆ 0692500136635601. ಐಎಫ್ ಎಸ್ ಸಿ ಕೋಡ್ : ಕೆಎಆರ್ ಬಿ0000069. ಅವರ ಖಾತೆಗೆ ಹಣ ಹಾಕಬಹುದು ಅಥವಾ ಪೋನ್ ಪೇ ಮಾಡುವ ಮೂಲಕ ನೆರವು ನೀಡಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು