6:33 PM Saturday16 - August 2025
ಬ್ರೇಕಿಂಗ್ ನ್ಯೂಸ್
Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ

ಇತ್ತೀಚಿನ ಸುದ್ದಿ

ಬೆನ್ನು ಹುರಿ ಮುರಿದು ಹಾಸಿಗೆ ಹಿಡಿದ ಬಾಲಕಿ ನಿಶಿತಾ: ಬನ್ನಿ, ಈ ಪ್ರತಿಭಾವಂತ ಬಾಲೆಯ ಚಿಕಿತ್ಸೆಗೆ ನೆರವು ನೀಡಿ

23/11/2023, 22:45

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲ್ಲೂಕಿನ ಬಣಕಲ್ ಸಮೀಪದ ಹಾರ್ಗೋಡು ಗ್ರಾಮದ 5ನೇ ತರಗತಿ ಬಾಲಕಿ ನಿಶಿತಾ ಆಟವಾಡುವಾಗ ಬಿದ್ದು ಬೆನ್ನ ಹುರಿ(ಸ್ಪೈನಲ್ ಕಾರ್ಡ್)ಮುರಿದು ಹಾಸಿಗೆ ಹಿಡಿದಿರುವ ಕರಣಾಜನಕ ಘಟನೆ ಈಚೆಗೆ ನಡೆದಿದೆ.ಬಾನಳ್ಳಿಯ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದ ಬಾಲಕಿ ನಿಶಿತಾ ಪ್ರತಿಭಾವಂತೆಯಾಗಿದ್ದು, ಶಾಲೆಯಲ್ಲಿ ಓದುವುದರಲ್ಲೂ ಮುಂದಿದ್ದಳು.ಅರಳು ಹುರಿದಂತೆ ಮಾತನಾಡುವ ಬಾಲಕಿಗೆ ಶಾಲೆಯ ಒಂದು ದಿನದ ರಜೆ ತನ್ನ ಜೀವನವನ್ನೇ ಕೊರಗಿಸುವಂತೆ ಮಾಡಿದೆ. ಮನೆಯ ಪಕ್ಕದ ಮಕ್ಕಳ ಜೊತೆ ಆಟವಾಡುತ್ತಿದ್ದಾಗ ತಲೆಕೆಳಗಾಗಿ ಬಿದ್ದು ತನ್ನ ದೇಹದ ಕೈಕಾಲಿನ ಸ್ವಾಧೀನ ಕಳೆದುಕೊಂಡಿದ್ದಾಳೆ. ಬಾಲಕಿ ಹಾರ್ ಗೋಡಿನ ಕೆ.ಆರ್. ಶ್ರೀಧರ್ ಹಾಗೂ ಗೀತಾ ದಂಪತಿಯ ಪುತ್ರಿಯಾಗಿದ್ದು ಇವರು ಕೂಲಿ ಕಾರ್ಮಿಕರಾಗಿರುತ್ತಾರೆ. ದಿನದ ಒಪ್ಪತ್ತಿಗೂ ಕೂಲಿ ಕೆಲಸವನ್ನೇ ಅವಲಂಬಿಸಿದ್ದು ಒಬ್ಬಳೇ ಮಗಳ ಅನಾರೋಗ್ಯದಿಂದ ಕಂಗೆಟ್ಟು ಹೋಗಿದ್ದಾರೆ.ಬಾಲಕಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿ ಅಲ್ಲಿ ವೈದ್ಯರು ಪರೀಕ್ಷೆ ನಡೆಸಿ ಶೇ ನೂರರಷ್ಟು ಭರವಸೆ ಕೊಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಆದರೆ ಔಷಧಿಗೆ ಶೇ 50ರಷ್ಟು ಸ್ಪಂಧಿಸಿರುವ ಬಾಲಕಿ ಈಗ ಒಂದು ಕೈ ಹಾಗೂ ಕಾಲುಗಳಿಗೆ ಸ್ಪರ್ಷ ಬಂದಿದೆ.ಬಣಕಲ್ ನ ಶ್ರೀ ಕೃಷ್ಣ ಕ್ಲಿನಿಕ್ ವೈದ್ಯರು ಅವಳಿಗೆ ಪಿಸಿಯೋಥೆರಪಿ ನೀಡುತ್ತಿದ್ದಾರೆ.


ಬಾಲಕಿಯು ಗುಣವಾಗುತ್ತೇನೆಂಬ ಆತ್ಮವಿಶ್ವಾಸದಿಂದ ಮುಂದಿನ ಕನಸು ಕಾಣುತ್ತಿದ್ದಾಳೆ. ನಿಲ್ಲಲು ಆಗದ ಕೈಯನ್ನು ಎತ್ತಲು ಆಗದ ಸ್ಥಿತಿಯಿಂದ ಇರುವ ಬಾಲಕಿ ನಿಶಿತಾಗೆ ಪೋಷಕರು ಚಿಕಿತ್ಸೆಗೆ ನೆರವು ಕೋರಿ ಪತ್ರಿಕೆಯೊಂದಿಗೆ ತಮ್ಮ ಅಳಲು ತೋಡಿಕೊಂಡಿದ್ದಾರೆ. ಮಗುವಿನ ಚಿಕಿತ್ಸೆಗೆ ಸುಮಾರು 5 ಲಕ್ಷ ಖರ್ಚಿದೆ. ಸಹೃದಯಿಗಳಲ್ಲಿ ನೆರವಿನ ಹಸ್ತ ಚಾಚಿದ್ದಾರೆ. ಹೆಚ್ಚಿನ ಮಾಹಿತಿಗೆ ಪೋಷಕರ ದೂರವಾಣಿ ಸಂಖ್ಯೆ 9980430710 ಕರೆ ಮಾಡಬಹುದು.ಅಥವಾ ಧಾನಿಗಳು ಖಾತೆ ಸಂಖ್ಯೆ 0692500136635601. ಐಎಫ್ ಎಸ್ ಸಿ ಕೋಡ್ : ಕೆಎಆರ್ ಬಿ0000069. ಅವರ ಖಾತೆಗೆ ಹಣ ಹಾಕಬಹುದು ಅಥವಾ ಪೋನ್ ಪೇ ಮಾಡುವ ಮೂಲಕ ನೆರವು ನೀಡಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು