2:29 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಬೆನ್ನು ಹುರಿ ಮುರಿದು ಹಾಸಿಗೆ ಹಿಡಿದ ಬಾಲಕಿ ನಿಶಿತಾ: ಬನ್ನಿ, ಈ ಪ್ರತಿಭಾವಂತ ಬಾಲೆಯ ಚಿಕಿತ್ಸೆಗೆ ನೆರವು ನೀಡಿ

23/11/2023, 22:45

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲ್ಲೂಕಿನ ಬಣಕಲ್ ಸಮೀಪದ ಹಾರ್ಗೋಡು ಗ್ರಾಮದ 5ನೇ ತರಗತಿ ಬಾಲಕಿ ನಿಶಿತಾ ಆಟವಾಡುವಾಗ ಬಿದ್ದು ಬೆನ್ನ ಹುರಿ(ಸ್ಪೈನಲ್ ಕಾರ್ಡ್)ಮುರಿದು ಹಾಸಿಗೆ ಹಿಡಿದಿರುವ ಕರಣಾಜನಕ ಘಟನೆ ಈಚೆಗೆ ನಡೆದಿದೆ.ಬಾನಳ್ಳಿಯ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದ ಬಾಲಕಿ ನಿಶಿತಾ ಪ್ರತಿಭಾವಂತೆಯಾಗಿದ್ದು, ಶಾಲೆಯಲ್ಲಿ ಓದುವುದರಲ್ಲೂ ಮುಂದಿದ್ದಳು.ಅರಳು ಹುರಿದಂತೆ ಮಾತನಾಡುವ ಬಾಲಕಿಗೆ ಶಾಲೆಯ ಒಂದು ದಿನದ ರಜೆ ತನ್ನ ಜೀವನವನ್ನೇ ಕೊರಗಿಸುವಂತೆ ಮಾಡಿದೆ. ಮನೆಯ ಪಕ್ಕದ ಮಕ್ಕಳ ಜೊತೆ ಆಟವಾಡುತ್ತಿದ್ದಾಗ ತಲೆಕೆಳಗಾಗಿ ಬಿದ್ದು ತನ್ನ ದೇಹದ ಕೈಕಾಲಿನ ಸ್ವಾಧೀನ ಕಳೆದುಕೊಂಡಿದ್ದಾಳೆ. ಬಾಲಕಿ ಹಾರ್ ಗೋಡಿನ ಕೆ.ಆರ್. ಶ್ರೀಧರ್ ಹಾಗೂ ಗೀತಾ ದಂಪತಿಯ ಪುತ್ರಿಯಾಗಿದ್ದು ಇವರು ಕೂಲಿ ಕಾರ್ಮಿಕರಾಗಿರುತ್ತಾರೆ. ದಿನದ ಒಪ್ಪತ್ತಿಗೂ ಕೂಲಿ ಕೆಲಸವನ್ನೇ ಅವಲಂಬಿಸಿದ್ದು ಒಬ್ಬಳೇ ಮಗಳ ಅನಾರೋಗ್ಯದಿಂದ ಕಂಗೆಟ್ಟು ಹೋಗಿದ್ದಾರೆ.ಬಾಲಕಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿ ಅಲ್ಲಿ ವೈದ್ಯರು ಪರೀಕ್ಷೆ ನಡೆಸಿ ಶೇ ನೂರರಷ್ಟು ಭರವಸೆ ಕೊಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಆದರೆ ಔಷಧಿಗೆ ಶೇ 50ರಷ್ಟು ಸ್ಪಂಧಿಸಿರುವ ಬಾಲಕಿ ಈಗ ಒಂದು ಕೈ ಹಾಗೂ ಕಾಲುಗಳಿಗೆ ಸ್ಪರ್ಷ ಬಂದಿದೆ.ಬಣಕಲ್ ನ ಶ್ರೀ ಕೃಷ್ಣ ಕ್ಲಿನಿಕ್ ವೈದ್ಯರು ಅವಳಿಗೆ ಪಿಸಿಯೋಥೆರಪಿ ನೀಡುತ್ತಿದ್ದಾರೆ.


ಬಾಲಕಿಯು ಗುಣವಾಗುತ್ತೇನೆಂಬ ಆತ್ಮವಿಶ್ವಾಸದಿಂದ ಮುಂದಿನ ಕನಸು ಕಾಣುತ್ತಿದ್ದಾಳೆ. ನಿಲ್ಲಲು ಆಗದ ಕೈಯನ್ನು ಎತ್ತಲು ಆಗದ ಸ್ಥಿತಿಯಿಂದ ಇರುವ ಬಾಲಕಿ ನಿಶಿತಾಗೆ ಪೋಷಕರು ಚಿಕಿತ್ಸೆಗೆ ನೆರವು ಕೋರಿ ಪತ್ರಿಕೆಯೊಂದಿಗೆ ತಮ್ಮ ಅಳಲು ತೋಡಿಕೊಂಡಿದ್ದಾರೆ. ಮಗುವಿನ ಚಿಕಿತ್ಸೆಗೆ ಸುಮಾರು 5 ಲಕ್ಷ ಖರ್ಚಿದೆ. ಸಹೃದಯಿಗಳಲ್ಲಿ ನೆರವಿನ ಹಸ್ತ ಚಾಚಿದ್ದಾರೆ. ಹೆಚ್ಚಿನ ಮಾಹಿತಿಗೆ ಪೋಷಕರ ದೂರವಾಣಿ ಸಂಖ್ಯೆ 9980430710 ಕರೆ ಮಾಡಬಹುದು.ಅಥವಾ ಧಾನಿಗಳು ಖಾತೆ ಸಂಖ್ಯೆ 0692500136635601. ಐಎಫ್ ಎಸ್ ಸಿ ಕೋಡ್ : ಕೆಎಆರ್ ಬಿ0000069. ಅವರ ಖಾತೆಗೆ ಹಣ ಹಾಕಬಹುದು ಅಥವಾ ಪೋನ್ ಪೇ ಮಾಡುವ ಮೂಲಕ ನೆರವು ನೀಡಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು