10:57 PM Saturday22 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ

ಇತ್ತೀಚಿನ ಸುದ್ದಿ

ಬೆಲೆಯೇರಿಕೆ ವಿರುದ್ಧ ಪ್ರತಿಭಟಿಸುವ ನೈತಿಕ ಹಕ್ಕು ಕಾಂಗ್ರೆಸ್‌ಗೆ ಇಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

11/04/2022, 15:53

ಬೆಂಗಳೂರು(reporterkarnataka.com): ಬೆಲೆಯೇರಿಕೆ ಕುರಿತಂತೆ ಪ್ರತಿಭಟನೆ ಮಾಡುವ ನೈತಿಕ ಹಕ್ಕು ಕಾಂಗ್ರೆಸ್ ಗೆ ಇಲ್ಲ. ದೇಶದಲ್ಲಿ ಅತಿ ಹೆಚ್ಚು ಬೆಲೆಯೇರಿಕೆ ಮಾಡಿದ ಖ್ಯಾತಿ, ಕೀರ್ತಿ, ದಾಖಲೆ ಕಾಂಗ್ರೆಸ್‌ನದ್ದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅವರು ಸೋಮವಾರ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಪಿ.ಎಫ್. ಐ. ವಿದ್ಯಾರ್ಥಿಗಳ ಪ್ರತಿಭಟನೆ ಕುರಿತಂತೆ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ರಚಿಸಿರುವ ಸಮಿತಿ ಪರಾಮರ್ಶೆ ಮಾಡುತ್ತಿದ್ದು ವರದಿ ಬಂದ ಕೂಡಲೇ ತೀರ್ಮಾನ ಮಾಡಲಾಗುವುದು ಎಂದರು.

ಮುಸ್ಕಾನ್ ಅವರಿಗೆ ಅಲ್ ಖೈದಾ ಮುಖ್ಯಸ್ಥರು ನೀಡಿರುವ ಬೆಂಬಲಕ್ಕೆ ಸಂಬಂಧಿಸಿದಂತೆ ಅನಂತ ಕುಮಾರ್ ಹೆಗಡೆ ಅವರು ಪತ್ರ ಬರೆದಿದ್ದಾರೆ. ಈ ಬಗ್ಗೆ ತನಿಖೆಯಾಗಿದೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಏನಿದೆ ಎಂದು ಗೊತ್ತಿಲ್ಲ. ಅನಂತಕುಮಾರ್ ಹೆಗಡೆ ಅವರ ಬಳಿ ಚರ್ಚೆ ಮಾಡಿ ಅವರ ಬಳಿ ಇರುವ ಮಾಹಿತಿ ಬಗ್ಗೆ ತಿಳಿದುಕೊಳ್ಳಲಾಗುವುದು. ಅದರ ಆಧಾರದ ಮೇಲೆ ಮುಂದಿನ ಕ್ರಮ ಜರಗಿಸಲಾಗುವುದು ಎಂದರು.

ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರುತ್ತಿದ್ದಾರೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಅವರ ಸಹೋದರಿಯ ಮಗಳ ಮದುವೆಗೆ ಆಹ್ವಾನಿಸಲು ಬಂದಿದ್ದರು. ಕೆಲವು ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚಿಸಲಾಯಿತು ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು