6:22 AM Thursday6 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಬೆಲೆಯೇರಿಕೆ ವಿರುದ್ಧ ಪ್ರತಿಭಟಿಸುವ ನೈತಿಕ ಹಕ್ಕು ಕಾಂಗ್ರೆಸ್‌ಗೆ ಇಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

11/04/2022, 15:53

ಬೆಂಗಳೂರು(reporterkarnataka.com): ಬೆಲೆಯೇರಿಕೆ ಕುರಿತಂತೆ ಪ್ರತಿಭಟನೆ ಮಾಡುವ ನೈತಿಕ ಹಕ್ಕು ಕಾಂಗ್ರೆಸ್ ಗೆ ಇಲ್ಲ. ದೇಶದಲ್ಲಿ ಅತಿ ಹೆಚ್ಚು ಬೆಲೆಯೇರಿಕೆ ಮಾಡಿದ ಖ್ಯಾತಿ, ಕೀರ್ತಿ, ದಾಖಲೆ ಕಾಂಗ್ರೆಸ್‌ನದ್ದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅವರು ಸೋಮವಾರ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಪಿ.ಎಫ್. ಐ. ವಿದ್ಯಾರ್ಥಿಗಳ ಪ್ರತಿಭಟನೆ ಕುರಿತಂತೆ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ರಚಿಸಿರುವ ಸಮಿತಿ ಪರಾಮರ್ಶೆ ಮಾಡುತ್ತಿದ್ದು ವರದಿ ಬಂದ ಕೂಡಲೇ ತೀರ್ಮಾನ ಮಾಡಲಾಗುವುದು ಎಂದರು.

ಮುಸ್ಕಾನ್ ಅವರಿಗೆ ಅಲ್ ಖೈದಾ ಮುಖ್ಯಸ್ಥರು ನೀಡಿರುವ ಬೆಂಬಲಕ್ಕೆ ಸಂಬಂಧಿಸಿದಂತೆ ಅನಂತ ಕುಮಾರ್ ಹೆಗಡೆ ಅವರು ಪತ್ರ ಬರೆದಿದ್ದಾರೆ. ಈ ಬಗ್ಗೆ ತನಿಖೆಯಾಗಿದೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಏನಿದೆ ಎಂದು ಗೊತ್ತಿಲ್ಲ. ಅನಂತಕುಮಾರ್ ಹೆಗಡೆ ಅವರ ಬಳಿ ಚರ್ಚೆ ಮಾಡಿ ಅವರ ಬಳಿ ಇರುವ ಮಾಹಿತಿ ಬಗ್ಗೆ ತಿಳಿದುಕೊಳ್ಳಲಾಗುವುದು. ಅದರ ಆಧಾರದ ಮೇಲೆ ಮುಂದಿನ ಕ್ರಮ ಜರಗಿಸಲಾಗುವುದು ಎಂದರು.

ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರುತ್ತಿದ್ದಾರೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಅವರ ಸಹೋದರಿಯ ಮಗಳ ಮದುವೆಗೆ ಆಹ್ವಾನಿಸಲು ಬಂದಿದ್ದರು. ಕೆಲವು ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚಿಸಲಾಯಿತು ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು