9:59 PM Sunday28 - June 2026
ಬ್ರೇಕಿಂಗ್ ನ್ಯೂಸ್
ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ…

ಇತ್ತೀಚಿನ ಸುದ್ದಿ

ಬಿಟಿಎಂ ಬಡಾವಣೆಯಲ್ಲಿ ಬೆಸ್ಕಾಂ ಉಪವಿಭಾಗ ಕಚೇರಿ ಉದ್ಘಾಟಿಸಿದ ಇಂಧನ ಸಚಿವ ಜಾರ್ಜ್

30/06/2025, 23:41

ಬೆಂಗಳೂರು(reporterkarnataka.com): ಕೋರಮಂಗಲ ವಿಭಾಗದ ಬೆಸ್ಕಾಂನ ಎಸ್-16 ಮಡಿವಾಳ ಉಪ ವಿಭಾಗ ಕಚೇರಿಯ ನೂತನ ಕಟ್ಟಡವನ್ನು ಇಂಧನ ಸಚಿವ ಕೆ.ಜೆ.ಜಾರ್ಜ್ ಸೋಮವಾರ ಉದ್ಘಾಟಿಸಿದರು.
ಇದುವರೆಗೆ ಎಸ್-16 ಮಡಿವಾಳ ಉಪ ವಿಭಾಗ ಕಚೇರಿ ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿತ್ತು. ಇದೀಗ ಬಿಟಿಎಂ ಬಡಾವಣೆಯಲ್ಲಿ 3.17 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕಟ್ಟಡದಿಂದಲೇ ಕಾರ್ಯನಿರ್ವಹಿಸಲಿದೆ.
ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಇಂಧನ ಸಚಿವ ಕೆ.ಜೆ.ಜಾರ್ಜ್, “ನಗರದ ಪ್ರಮುಖ ಬಡಾವಣೆ ಬಿಟಿಎಂ ಲೇಔಟ್‌ ಉಪ ವಿಭಾಗದಲ್ಲಿ 83,000 ಕ್ಕೂ ಹೆಚ್ಚಿನ ಸಂಪರ್ಕಗಳಿವೆ. ಸಾರ್ವಜನಿಕರಿಗೆ ನೂತನ ಉಪವಿಭಾಗ ಕೇಂದ್ರವು ಬೆಸ್ಕಾಂನ ಹತ್ತು ಹಲವು ಸೇವೆಗಳನ್ನು ತ್ವರಿತವಾಗಿ ಒದಗಿಸಲು ನೆರವಾಗಲಿದೆ,” ಎಂದು ಹೇಳಿದರು.
“ಬೆಸ್ಕಾಂ ವಿದ್ಯುತ್ ಪೂರೈಕೆ ಜತೆಗೆ ಸ್ವಂತವಾಗಿ ಮೂಲಸೌಕರ್ಯ ಕಲ್ಪಿಸಿಕೊಳ್ಳುವುದಕ್ಕೂ ಒತ್ತು ನೀಡುತ್ತಿದ್ದು, ಇದರಿಂದ ಭವಿಷ್ಯದಲ್ಲಿ ಆರ್ಥಿಕವಾಗಿಯೂ ಹೊರೆ ತಗ್ಗಲಿದೆ. ಎಲ್ಲಾ ಮೂಲ ಸೌಕರ್ಯಗಳಿರುವುದರಿಂದ ಸಾರ್ವಜನಿಕರಿಗೆ ಇನ್ನಷ್ಟು ತ್ವರಿತವಾಗಿ ಸೇವೆ ಲಭ್ಯವಾಗಲಿದೆ,” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್.ಶಿವಶಂಕರ್ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.

*ಕಟ್ಟಡದ ವಿಶೇಷತೆ:*
ಬೆಸ್ಕಾಂನ ಎಸ್-16 ಮಡಿವಾಳ ಉಪ ವಿಭಾಗ ಕಚೇರಿಯ ನೂತನ ಕಟ್ಟಡವನ್ನು ಬಿಟಿಎಂ ಬಡಾವಣೆಯಲ್ಲಿ ಸುಮಾರು 3.17 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದು, 7431.50 ಚದರ ಅಡಿಯಲ್ಲಿ ಮೂರು ಅಂತಸ್ತನ್ನು ಒಳಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು