2:32 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಬಿಟಿಎಂ ಬಡಾವಣೆಯಲ್ಲಿ ಬೆಸ್ಕಾಂ ಉಪವಿಭಾಗ ಕಚೇರಿ ಉದ್ಘಾಟಿಸಿದ ಇಂಧನ ಸಚಿವ ಜಾರ್ಜ್

30/06/2025, 23:41

ಬೆಂಗಳೂರು(reporterkarnataka.com): ಕೋರಮಂಗಲ ವಿಭಾಗದ ಬೆಸ್ಕಾಂನ ಎಸ್-16 ಮಡಿವಾಳ ಉಪ ವಿಭಾಗ ಕಚೇರಿಯ ನೂತನ ಕಟ್ಟಡವನ್ನು ಇಂಧನ ಸಚಿವ ಕೆ.ಜೆ.ಜಾರ್ಜ್ ಸೋಮವಾರ ಉದ್ಘಾಟಿಸಿದರು.
ಇದುವರೆಗೆ ಎಸ್-16 ಮಡಿವಾಳ ಉಪ ವಿಭಾಗ ಕಚೇರಿ ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿತ್ತು. ಇದೀಗ ಬಿಟಿಎಂ ಬಡಾವಣೆಯಲ್ಲಿ 3.17 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕಟ್ಟಡದಿಂದಲೇ ಕಾರ್ಯನಿರ್ವಹಿಸಲಿದೆ.
ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಇಂಧನ ಸಚಿವ ಕೆ.ಜೆ.ಜಾರ್ಜ್, “ನಗರದ ಪ್ರಮುಖ ಬಡಾವಣೆ ಬಿಟಿಎಂ ಲೇಔಟ್‌ ಉಪ ವಿಭಾಗದಲ್ಲಿ 83,000 ಕ್ಕೂ ಹೆಚ್ಚಿನ ಸಂಪರ್ಕಗಳಿವೆ. ಸಾರ್ವಜನಿಕರಿಗೆ ನೂತನ ಉಪವಿಭಾಗ ಕೇಂದ್ರವು ಬೆಸ್ಕಾಂನ ಹತ್ತು ಹಲವು ಸೇವೆಗಳನ್ನು ತ್ವರಿತವಾಗಿ ಒದಗಿಸಲು ನೆರವಾಗಲಿದೆ,” ಎಂದು ಹೇಳಿದರು.
“ಬೆಸ್ಕಾಂ ವಿದ್ಯುತ್ ಪೂರೈಕೆ ಜತೆಗೆ ಸ್ವಂತವಾಗಿ ಮೂಲಸೌಕರ್ಯ ಕಲ್ಪಿಸಿಕೊಳ್ಳುವುದಕ್ಕೂ ಒತ್ತು ನೀಡುತ್ತಿದ್ದು, ಇದರಿಂದ ಭವಿಷ್ಯದಲ್ಲಿ ಆರ್ಥಿಕವಾಗಿಯೂ ಹೊರೆ ತಗ್ಗಲಿದೆ. ಎಲ್ಲಾ ಮೂಲ ಸೌಕರ್ಯಗಳಿರುವುದರಿಂದ ಸಾರ್ವಜನಿಕರಿಗೆ ಇನ್ನಷ್ಟು ತ್ವರಿತವಾಗಿ ಸೇವೆ ಲಭ್ಯವಾಗಲಿದೆ,” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್.ಶಿವಶಂಕರ್ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.

*ಕಟ್ಟಡದ ವಿಶೇಷತೆ:*
ಬೆಸ್ಕಾಂನ ಎಸ್-16 ಮಡಿವಾಳ ಉಪ ವಿಭಾಗ ಕಚೇರಿಯ ನೂತನ ಕಟ್ಟಡವನ್ನು ಬಿಟಿಎಂ ಬಡಾವಣೆಯಲ್ಲಿ ಸುಮಾರು 3.17 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದು, 7431.50 ಚದರ ಅಡಿಯಲ್ಲಿ ಮೂರು ಅಂತಸ್ತನ್ನು ಒಳಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು