4:43 PM Monday6 - October 2025
ಬ್ರೇಕಿಂಗ್ ನ್ಯೂಸ್
ಹರ್ಷಿಕಾ ಪೂಣಚ್ಚ – ಭುವನ್ ದಂಪತಿ ಮಗುವಿನ ಮೊದಲ ವರ್ಷದ ಹುಟ್ಟುಹಬ್ಬ: ಹರಿದು… Madikeri | ವಿರಾಜಪೇಟೆ: ಹೆಂಡತಿ ಜತೆ ಜಗಳವಾಡಿ ಮನೆಬಿಟ್ಟು ತೆರಳಿದ್ದ ವ್ಯಕ್ತಿ ಶವವಾಗಿ… ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ

ಇತ್ತೀಚಿನ ಸುದ್ದಿ

ಬೆಸೆಂಟ್ ಸಂಧ್ಯಾ ಕಾಲೇಜು: ಎಂಕಾಂನಲ್ಲಿ ಪ್ರಥಮ ರ‍್ಯಾಂಕ್ ಪಡೆದ ಶೀತಲ್ ನಾಯಕ್ ಗೆ ಸನ್ಮಾನ 

13/05/2022, 22:02

ಮಂಗಳೂರು(reporterkarnataka.com); ಬೆಸೆಂಟ್ ಸಂಧ್ಯಾ ಕಾಲೇಜಿನ ಸ್ನಾತಕೋತ್ತರ (ಎಂ.ಕಾಂ) ವಿಭಾಗದ ಶೀತಲ್ ನಾಯಕ್ ಅವರು ಮಂಗಳೂರು ವಿಶ್ವವಿದ್ಯಾನಿಲಯ ೨೦೨೧ ರ ಅಕ್ಟೋಬರ್‌ನಲ್ಲಿ ನಡೆಸಿದ ಎಂ.ಕಾಂ ಪರೀಕ್ಷೆಯಲ್ಲಿ ಪ್ರಥಮ ರ‍್ಯಾಂಕ್‌ನೊಂದಿಗೆ ಎರಡು ಚಿನ್ನದ ಪದಕ ಪಡೆದಿದ್ದು, ಈ ಹೆಮ್ಮೆಯ ಸಾಧನೆಗಾಗಿ ಕಾಲೇಜಿನ ವತಿಯಿಂದ ಅವರನ್ನು  ಸನ್ಮಾನಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಲಕ್ಷ್ಮೀನಾರಾಯಣ ಭಟ್  ಅವರು ಅತಿಥಿಗಳನ್ನು ಹಾಗೂ ಆಹ್ವಾನಿತರನ್ನು ಕಾರ್ಯಕ್ರಮಕ್ಕೆ ಸ್ವಾಗತಿಸಿದರು. 


ಸ್ನಾತಕೋತ್ತರ ವಿಭಾಗದ ಉಪನ್ಯಾಸಕಿ ತಾರಾ ಶೆಟ್ಟಿ  ಅವರು ಶೀತಲ್ ಅವರ ಶೈಕ್ಷಣಿಕ ಹಾಗೂ ಶೈಕ್ಷಣಿಕೇತರ ಸಾಧನೆಗಳನ್ನು ಪರಿಚಯಿಸುತ್ತಾ ಅವರು ಶಿಕ್ಷಣದಲ್ಲಿ ಮಾತ್ರವಲ್ಲದೆ ತುಳು ಚಲನಚಿತ್ರಗಳಾದ “ದಬಕ್ ದಬಕ್  ಐಸಾ” ದಲ್ಲಿ ನಾಯಕಿಯಾಗಿ, “ಕುದುಕನ ಮದಿಮೆ”, “ಭೋಜರಾಜ್ ಎಂ.ಬಿ.ಬಿ.ಎಸ್” ಇವುಗಳಲ್ಲಿ ನಟಿಸಿದ್ದಾರೆ ಹಾಗೂ ಅವರು ಮೆಹಂದಿ ಕಲೆಯನ್ನು ಕರಗತ ಮಾಡಿಕೊಂಡಿದ್ದಾರೆಂಬ ಅಂಶವನ್ನು ತಿಳಿಸಿದರು.

ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿದ್ದ ಸುರೇಶ್ ಪೈ (ಕಾರ್ಯದರ್ಶಿ, ಡಬ್ಲ್ಯು.ಎನ್.ಇ.ಎಸ್)  ಅವರು ಮಾತನಾಡಿ ಶೀತಲ್‌ನ ಸಾಧನೆಯನ್ನು ಅಭಿನಂದಿಸಿದರು. ಮತ್ತೊಬ್ಬ ಅತಿಥಿಗಳಾದ  ಮಣೆಲ್ ಅಣ್ಣಪ್ಪ ನಾಯಕ್,  (ಉಪಾಧ್ಯಕ್ಷರು, ಡಬ್ಲ್ಯು.ಎನ್.ಇ.ಎಸ್)ಮಾತನಾಡಿ, ಶೀತಲ್‌ನ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷರಾಗಿದ್ದ ಕುಡ್ಪಿ ಜಗದೀಶ್ ಶೆಣೈ (ಅಧ್ಯಕ್ಷರು ಡಬ್ಲ್ಯು.ಎನ್.ಇ.ಎಸ್) ಅವರು ಮಾತನಾಡಿ, ಬೆಸೆಂಟ್ ಸಂಧ್ಯಾ ಕಾಲೇಜಿಗೆ ಕೀರ್ತಿಯನ್ನು ತಂದುಕೂಟ್ಟ ಶೀತಲ್ ರವರ ಸಾಧನೆಗೆ ಅಭಿನಂದಿಸಿ ಹರಸಿದರು. ಮಾತ್ರವಲ್ಲದೆ ಹಗಲು ಹೊತ್ತು ಕೆಲಸ ಕಾರ್ಯಗಳನ್ನು ಮಾಡಿ  ಸಂಜೆ ಕಾಲೇಜಿನಲ್ಲಿ ಓದು ಮುಂದುವರೆಸಿ ವಿಶ್ವವಿದ್ಯಾನಿಲಯದಲ್ಲೇ  ರ‍್ಯಾಂಕ್ ಪಡೆಯುವುದೆಂದರೆ ಬಹಳ ಹೆಮ್ಮೆಯ ವಿಚಾರ ಎಂದು ತಿಳಿಸಿದರು. 

ಸ್ನಾತಕೋತ್ತರ ವಿಭಾಗದ ಹಿಂದಿನ ಮುಖ್ಯಸ್ಥರಾಗಿದ್ದ ಡಾ. ಶ್ರೀಧರ್ ಜೋಯಿಸರು ಹಾಗೂ ಗ್ರಂಥಪಾಲಕರಾದ ಡಾ. ವಾಸಪ್ಪ ಗೌಡರು ಮಾತನಾಡಿ ಶೀತಲ್‌ರವರನ್ನು ಅಭಿನಂದಿಸಿದರು.



ಕಾರ್ಯಕ್ರಮದಲ್ಲಿ ಶ್ರೀ ಎಂ.ಪಿ.ಭಟ್ (ಖಜಾಂಚಿ,
ಡಬ್ಲ್ಯು.ಎನ್.ಇ.ಎಸ್),ಸಂಧ್ಯಾ ಕಾಲೇಜಿನ ಸಂಚಾಲಕಗಣೇಶ ಕೃಷ್ಣಭಟ್
ಜೀವನ್‌ದಾಸ್ ನಾರಾಯಣ್ , ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು, ಹಳೆ ವಿದ್ಯಾರ್ಥಿಗಳು ಹಾಗೂ ಸ್ನಾತಕ-ಸ್ನಾತಕೋತ್ತರ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸ್ನಾತಕೋತ್ತರ ವಿಭಾಗದ ಮುಖ್ಯಸ್ಥರಾಗಿದ್ದ ಡಾ. ಶ್ರೀಧರ್  ಮಣಿಯಾಣಿ ಇವರು ವಂದಿಸಿದರು.ಸಾತ್ವಿಕಾ ಶೆಟ್ಟಿ, (ಸ್ನಾತಕೋತ್ತರ ವಿಭಾಗದ ಉಪನ್ಯಾಸಕಿ) ಅವರು ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು