3:13 PM Sunday30 - June 2024
ಬ್ರೇಕಿಂಗ್ ನ್ಯೂಸ್
ಪಿಎಂ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ: ಕಲ್ಯಾಣ ಕರ್ನಾಟಕ ಅಭಿವೃದ್ದಿ, ಬೆಂಗಳೂರಿನಲ್ಲಿ ಸುರಂಗ… 1.80 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಬೆಳಗೇರಾ ಸೇತುವೆ ಸಂಚಾರಕ್ಕೆ ರೆಡಿ: ಹೋರಾಟಕ್ಕೆ ಸಂದ… ಶಹಪುರ್ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಲಯದ ಬದನೆ ಸಾಂಬಾರಿನಲ್ಲಿ ಹುಳ… ನಿಮ್ಮ ಕನಸಿನ ಮನೆಯನ್ನು ಬಹುಮಾಮವಾಗಿ ಗೆಲ್ಲಬೇಕೆ ? ಹಾಗಿದ್ದರೆ ಇಲ್ಲಿದೆ ಸುವರ್ಣಾವಕಾಶ ಫುಟ್ ಪಾತ್ ಇರುವುದು ಸಾರ್ವಜನಿಕರಿಗೆ; ಅನಧಿಕೃತ ಗೂಡಂಗಡಿಗಳ ತೆರವಿಗೆ ಕ್ರಮ: ಮೇಯರ್ ಸುಧೀರ್… ಜಪ್ಪಿನಮೊಗರು ನೆರೆ ಸಮಸ್ಯೆ ಮಳೆಯಿಂದಲ್ಲ, ಅವೈಜ್ಞಾನಿಕ ಲೇಔಟ್ ನಿಂದ!!: ಪಾಲಿಕೆ, ಮುಡಾ ಇನ್ನಾದರೂ… ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ತುಂಬಿ ಹರಿಯುತ್ತಿರುವ ತುಂಗಾ- ಭದ್ರಾ: ಹೆಬ್ಬಾಳೆ ಸೇತುವೆಗೆ… ಪುತ್ತೂರು: ಮನೆ ಮೇಲೆ ತಡೆಗೋಡೆ ಕುಸಿತ; ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳ ರಕ್ಷಿಸಿದ… ಬೆಟ್ಟದ ಇಳಿಜಾರು ಪ್ರದೇಶಗಳಲ್ಲಿರುವ ಮನೆಗಳ ತಕ್ಷಣ ಸರ್ವೆ: ದ.ಕ. ಜಿಲ್ಲಾಡಳಿತಕ್ಕೆ ಕಂದಾಯ ಸಚಿವ… ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ: ರೆಡ್ ಅಲರ್ಟ್ ಘೋಷಣೆ; ನಾಳೆ ಶಾಲೆಗಳಿಗೆ ರಜೆ

ಇತ್ತೀಚಿನ ಸುದ್ದಿ

ಬೆಟ್ಟದ ಇಳಿಜಾರು ಪ್ರದೇಶಗಳಲ್ಲಿರುವ ಮನೆಗಳ ತಕ್ಷಣ ಸರ್ವೆ: ದ.ಕ. ಜಿಲ್ಲಾಡಳಿತಕ್ಕೆ ಕಂದಾಯ ಸಚಿವ ಕೃಷ್ಣೇಭೈರೇಗೌಡ ಸೂಚನೆ

26/06/2024, 20:59

ಉಳ್ಳಾಲ(reporterkarnataka.com): ಬೆಟ್ಟದ ಇಳಿಜಾರು ಪ್ರದೇಶಗಳಲ್ಲಿರುವ ಮನೆಗಳ ಕುರಿತು ಪ್ರತಿ ಗ್ರಾಮದಲ್ಲಿ ತಕ್ಷಣ ಸರ್ವೇ ಮಾಡಿಸಿ ಮಳೆಗಾಲದಲ್ಲಿ ಸಮಸ್ಯೆಗೆ ಸಿಕ್ಕಿಕೊಳ್ಳಬಹುದಾದ ಮನೆಗಳನ್ನು ಗುರುತಿಸಿ ಕ್ರಮಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣೇಭೈರೇಗೌಡ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲೂಕು ಮುನ್ನೂರು ಗ್ರಾಮದಲ್ಲಿ ಆವರಣ ಗೋಡೆ ಕುಸಿದು ಬಿದ್ದು ಒಂದೇ ಕುಟುಂಬದ ನಾಲ್ವರ ಸಾವಿಗೆ ಗುರಿಯಾದ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಅವರು ಮಾಧ್ಯಮ ಜತೆ ಮಾತನಾಡಿದರು.



ನಿನ್ನೆ ರಾತ್ರಿಯಾದ ಮಳೆಗೆ ಮನೆಯೊಂದರ ತಡೆಗೋಡೆ ಕುಸಿದಿದೆ. ಆ ತಡೆಗೋಡೆ ಮತ್ತೊಂದು ಮನೆಯ ಮೇಲೆ ಬಿದ್ದು, ಒಂದೇ ಕುಟುಂಬದ ನಾಲ್ಕು ಜನ ಮೃತರಾಗಿದ್ದಾರೆ. ಇದೊಂದು ವಿಷಾದನೀಯ ದುರ್ಘಟನೆ ಹಾಗೂ ಎಲ್ಲರಿಗೂ ನೋವನ್ನು ನೀಡುವ ದುರಂತ. ಈ ದುರ್ಘಟನೆಯಲ್ಲಿ ಪ್ರಾಣಹಾನಿ ಉಂಟಾಗಿರುವುದು ಸರ್ಕಾರದ ಮನಸ್ಸನ್ನೂ ಕದಲುವಂತೆ ಮಾಡಿದೆ.
ಒಂದೇ ಕುಟುಂಬದ ನಾಲ್ಕು ಜನರ ಪ್ರಾಣಹಾನಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ವಿಷಾದ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿಗಳು ಸ್ವತಃ ನನ್ನ ಜೊತೆ ಈ ದುರ್ಘಟನೆ ಬಗ್ಗೆ ಮಾತನಾಡಿ, ಸ್ಥಳಕ್ಕೆ ತೆರಳುವಂತೆ ಸೂಚಿಸಿದರು. ಅಲ್ಲದೆ, ತಮ್ಮವರನ್ನು ಕಳೆದುಕೊಂಡ ಪರಿವಾರಕ್ಕೆ ಸರ್ಕಾರದಿಂದ ಮಾಡಬಹುದಾದ ಸಹಾಯವನ್ನು ಮಾಡಿ ಎಂದು ತಿಳಿಸಿದರು. ಅಲ್ಲದೆ ಇಂತಹ ದುರ್ಘಟನೆಗಳನ್ನು ಆದಷ್ಟು ತಡೆಗಟ್ಟಲು ಸಿಎಂ ಸೂಚಿಸಿದ್ದಾರೆ.
ರಾತ್ರಿ ಮಲಗುವಾಗ ಗೋಡೆ ಕುಸಿಯುವ ಬಗ್ಗೆ ಪಾಪ ಅವರಿಗೂ ಗೊತ್ತಿರಲು ಸಾಧ್ಯವಿಲ್ಲ. ನಿದ್ದೆಯಲ್ಲೇ ಪ್ರಾಣಬಿಟ್ಟಿದ್ದಾರೆ. ಪ್ರಕೃತಿಯಿಂದ ಆಗುವ ವಿಕೋಪಗಳನ್ನು ನಾವು ತಡೆಯಲು ಸಾಧ್ಯವಿಲ್ಲ. ಈ ಇಳಿಜಾರು ಪ್ರದೇಶದಲ್ಲಿ ಬೆಟ್ಟ ಕಡಿದು ಮನೆಗಳನ್ನು ನಿರ್ಮಿಸಿಕೊಂಡಿದ್ದಾರೆ. ಇದು ಮೊದಲಿನಿಂದಲೂ ಆತಂಕದ ವಿಚಾರವೇ. ಇಂತಹ ಘಟನೆಗಳು ಆಗಾಗ್ಗೆ ಆಗ್ತಾನೆ ಇದೆ. ಆದ್ರೂ ಜನ ಬೆಟ್ಟ ಪ್ರದೇಶದಲ್ಲಿ ಬೆಟ್ಟಗಳನ್ನು ತೀಷ್ಣವಾಗಿ ಕಡಿದು ಮನೆಗಳನ್ನು ನಿರ್ಮಿಸಿಕೊಳ್ಳುತ್ತಿದ್ದಾರೆ.
ಜನಕ್ಕೆ ಜಾಗದ ಕೊರತೆ ಇರುವುದರಿಂದ ಇದು ಅನಿರ್ವಾಯ. ಆದ್ರೆ ಇದಕ್ಕೆ ರಕ್ಷಣಾ ಕ್ರಮಗಳನ್ನೂ ತೆಗೆದುಕೊಳ್ಳುತ್ತಿಲ್ಲ. ಹೀಗಾಗಿ ಪ್ರತಿ ಪಂಚಾಯಿತಿಯಲ್ಲೂ ನಾಳೆಯ ದಿನಗಳಲ್ಲಿ ಈ ರೀತಿಯ ಸಮಸ್ಯೆಗಳಿಗೆ ಸಿಕ್ಕಿಕೊಳ್ಳಬಹುದಾದ ಮನೆಗಳನ್ನು ಸರ್ವೇ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಇಂತಹ ಮನೆಗಳಿಗೆ ಸರ್ಕಾರದಿಂದ ಎಚ್ಚರಿಕೆ ನೀಡುವ ಕೆಲಸವನ್ನೂ ಮಾಡಲಾಗುವುದು.
ದಕ್ಷಿಣ ಕನ್ನಡ ಜಿಲ್ಲೆ ಒಂದರಲ್ಲೇ ಸಾವಿರಾರು ಮನೆಗಳನ್ನು ಬೆಟ್ಟದ ಇಳಿಜಾರು ಪ್ರದೇಶಗಳಲ್ಲಿ ನಿರ್ಮಿಸಿಕೊಂಡಿದ್ದಾರೆ. ಕೆಲವರು ತಡೆಗೋಡೆಗಳನ್ನು ಕಟ್ಟಿಕೊಳ್ಳುವುದಕ್ಕೂ ಜಾಗಗಳನ್ನು ಬಿಟ್ಟಿಲ್ಲ. ಹೀಗಾಗಿ ಇದೊಂದು ಸಂಕೀರ್ಣ ಸಮಸ್ಯೆಯಾಗಿದ್ದು, ಆದರೂ, ತತಕ್ಷಣ ಸರ್ವೇ ಮಾಡಿಸಿ ಮಳೆಗಾಲದಲ್ಲಿ ಸಮಸ್ಯೆಗೆ ಸಿಕ್ಕಿಕೊಳ್ಳಬಹುದಾದ ಮನೆಗಳನ್ನು ಗುರುತಿಸಿ ಆ ಮನೆಯಲ್ಲಿ ವಾಸವಿರುವವರಿಗೆ ಆ ಮನೆಯಲ್ಲಿ ಇರದಂತೆ ನೋಡಿಕೊಳ್ಳಲು ಜಿಲ್ಲಾಡಳಿತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ.
ಇಂದೇ ಕಂದಾಯ ಇಲಾಖೆ ಅಧಿಕಾರಿಗಳ ಸಭೆ ಕರೆದು ತತಕ್ಷಣ ಸರ್ವೇ ನಡೆಸಲು ಸೂಚಿಸುತ್ತೇನೆ. ಸರ್ವೇಯಲ್ಲಿ ಆಪತ್ತನ್ನು ಎದುರಿಸಬಹುದಾದ ಮನಗೆಗಳ ಪಟ್ಟಿ ಸಿದ್ದಪಡಿಸಿ ಜನರಿಗೆ ಎಚ್ಚರಿಕೆ ನೀಡಬೇಕು, ಅಲ್ಲದೆ, ಮಳೆ ಸಂದರ್ಭದಲ್ಲಿ ನಿವಾಸಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದೂ ಸೂಚಿಸುತ್ತೇನೆ.
ಅವಘಡದಲ್ಲಿ ನಾಲ್ಕು ಜನ ಮೃತಪಟ್ಟಿದ್ದು, ಆ ಇಡೀ ಕುಟುಂಬದ ಪೈಕಿ ಓರ್ವ ಸಹೋದರಿ ಮಾತ್ರ ಬದುಕುಳಿದಿದ್ದಾರೆ. ಅವರಿಗೆ ಆಗಿರುವ ನಷ್ಟಕ್ಕೆ ಸರ್ಕಾರದ ಪರವಾಗಿ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಹಾಗೂ ಜಿಲ್ಲಾಧಿಕಾರಿಗಳು ಹಾಗೂ ಸ್ಪೀಕರ್‌ ಯುಟಿ ಖಾದರ್‌ ಅವರ ಮಾರ್ಗದರ್ಶನದಲ್ಲಿ ಅವರಿಗೆ ಶೀಘ್ರ ಪರಿಹಾರವನ್ನು ನೀಡಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು