4:28 AM Thursday12 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಭಗವದ್ಗೀತೆ ರಾಷ್ಟ್ರೀಯ ಗ್ರಂಥವೆಂದು ಘೋಷಿಸಲು ಕೇಂದ್ರ ಸರಕಾರ ಚಿಂತನೆ: ಸಂಸದ ಗೋಪಾಲ್ ಶೆಟ್ಟಿ ಪ್ರಸ್ತಾವನೆ

09/09/2022, 20:03

ಹೊಸದಿಲ್ಲಿ(reporterkarnataka.com): ಕೇಂದ್ರ ಸರ್ಕಾರವು ಭಗವದ್ಗೀತೆಯನ್ನು ರಾಷ್ಟ್ರೀಯ ಗ್ರಂಥವೆಂದು ಘೋಷಿಸುವ ಚಿಂತನೆಯಲ್ಲಿದೆ. ಆ ಮೂಲಕ ರಾಷ್ಟ್ರಗೀತೆ, ರಾಷ್ಟ್ರಧ್ವಜದಂತೆ ದೇಶದಲ್ಲಿ ಶೀಘ್ರದಲ್ಲೇ ರಾಷ್ಟ್ರ ಪುಸ್ತಕ ಬರಲಿದೆ.

ಈ ಹಿನ್ನೆಲೆಯಲ್ಲಿ ಭಾರತ ಸರ್ಕಾರವು ವಿವಿಧ ಸಚಿವಾಲಯಗಳಿಂದ ಅಭಿಪ್ರಾಯವನ್ನು ಸಂಗ್ರಹಿಸುತ್ತಿದ್ದು, ಮಹಾರಾಷ್ಟ್ರದ ಬಿಜೆಪಿ ಸಂಸದ ಗೋಪಾಲ್ ಶೆಟ್ಟಿ ಅವರು ಕಳುಹಿಸಿದ ಪತ್ರದ ಆಧಾರದ ಮೇಲೆ ಸರ್ಕಾರ ಈ ಕಾರ್ಯವನ್ನು ಅನುಷ್ಠಾನಗೊಳಿಸುವ ಯೋಚನೆಯಲ್ಲಿದೆ.

ಜುಲೈ 5 ರಂದು ಮಹಾರಾಷ್ಟ್ರದ ಬಿಜೆಪಿ ಸಂಸದ ಗೋಪಾಲ್ ಶೆಟ್ಟಿ , ಕೇಂದ್ರ ಗೃಹ ಸಚಿವ ಅಮಿತ್ ಶಾ ಗೆ ಪತ್ರ ಬರೆದಿದ್ದು, ಶ್ರೀಮದ್ ಭಗವದ್ಗೀತೆಯನ್ನು ರಾಷ್ಟ್ರೀಯ ಧರ್ಮಗ್ರಂಥವಾಗಿ ಘೋಷಿಸುವಂತೆ ಗೃಹ ಸಚಿವರನ್ನು ಒತ್ತಾಯಿಸಿದ್ದರು. ಗೃಹ ಸಚಿವ ಶಾ ಅವರು ಜುಲೈ 18 ರಂದು ಈ ಪತ್ರಕ್ಕೆ ಉತ್ತರ ಕಳುಹಿಸಿದ್ದು, ತಮ್ಮ ಪತ್ರವನ್ನು ಅಗತ್ಯ ಕ್ರಮಕ್ಕಾಗಿ ಸಂಬಂಧಪಟ್ಟ ಸಚಿವಾಲಯಗಳಿಗೆ ಕಳುಹಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಗೃಹ ಸಚಿವಾಲಯವು ಈ ವಿಷಯದಲ್ಲಿ ಶಿಕ್ಷಣ ಸಚಿವಾಲಯದ ಅಭಿಪ್ರಾಯವನ್ನು ಕೇಳಿದೆ. ಶ್ರೀಮದ್ ಭಗವದ್ಗೀತೆಯನ್ನು ರಾಷ್ಟ್ರೀಯ ಧರ್ಮಗ್ರಂಥವಾಗಿ ಘೋಷಿಸುವ ಬಗ್ಗೆ ಶಿಕ್ಷಣ ಸಚಿವಾಲಯವು ಆಗಸ್ಟ್ 10 ರಂದು ತನ್ನ ಹೇಳಿಕೆಗಳನ್ನು ಕಳುಹಿಸಿದೆ ಎನ್ನಲಾಗಿದೆ. ಇದರ ನಂತರ, ಗೃಹ ವ್ಯವಹಾರಗಳ ಸಚಿವಾಲಯವು ಈಗ ಶ್ರೀಮದ್ ಭಗವದ್ಗೀತೆಯನ್ನು ರಾಷ್ಟ್ರೀಯ ಪುಸ್ತಕವಾಗಿ ಘೋಷಿಸುವ ಬಗ್ಗೆ ಸಂಸ್ಕೃತಿ ಸಚಿವಾಲಯದ ಅಭಿಪ್ರಾಯವನ್ನು ಕೇಳಿದ್ದು,ಅಲ್ಲಿಂದಲೂ ಸಕರಾತ್ಮಕ ಪ್ರತಿಕ್ರಿಯೆ ದೊರಕಿದೆ ಎಂಬ ಮಾಹಿತಿ ದೊರಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು