5:24 AM Friday12 - December 2025
ಬ್ರೇಕಿಂಗ್ ನ್ಯೂಸ್
ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ… ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ

ಇತ್ತೀಚಿನ ಸುದ್ದಿ

ಭಗವದ್ಗೀತೆ ರಾಷ್ಟ್ರೀಯ ಗ್ರಂಥವೆಂದು ಘೋಷಿಸಲು ಕೇಂದ್ರ ಸರಕಾರ ಚಿಂತನೆ: ಸಂಸದ ಗೋಪಾಲ್ ಶೆಟ್ಟಿ ಪ್ರಸ್ತಾವನೆ

09/09/2022, 20:03

ಹೊಸದಿಲ್ಲಿ(reporterkarnataka.com): ಕೇಂದ್ರ ಸರ್ಕಾರವು ಭಗವದ್ಗೀತೆಯನ್ನು ರಾಷ್ಟ್ರೀಯ ಗ್ರಂಥವೆಂದು ಘೋಷಿಸುವ ಚಿಂತನೆಯಲ್ಲಿದೆ. ಆ ಮೂಲಕ ರಾಷ್ಟ್ರಗೀತೆ, ರಾಷ್ಟ್ರಧ್ವಜದಂತೆ ದೇಶದಲ್ಲಿ ಶೀಘ್ರದಲ್ಲೇ ರಾಷ್ಟ್ರ ಪುಸ್ತಕ ಬರಲಿದೆ.

ಈ ಹಿನ್ನೆಲೆಯಲ್ಲಿ ಭಾರತ ಸರ್ಕಾರವು ವಿವಿಧ ಸಚಿವಾಲಯಗಳಿಂದ ಅಭಿಪ್ರಾಯವನ್ನು ಸಂಗ್ರಹಿಸುತ್ತಿದ್ದು, ಮಹಾರಾಷ್ಟ್ರದ ಬಿಜೆಪಿ ಸಂಸದ ಗೋಪಾಲ್ ಶೆಟ್ಟಿ ಅವರು ಕಳುಹಿಸಿದ ಪತ್ರದ ಆಧಾರದ ಮೇಲೆ ಸರ್ಕಾರ ಈ ಕಾರ್ಯವನ್ನು ಅನುಷ್ಠಾನಗೊಳಿಸುವ ಯೋಚನೆಯಲ್ಲಿದೆ.

ಜುಲೈ 5 ರಂದು ಮಹಾರಾಷ್ಟ್ರದ ಬಿಜೆಪಿ ಸಂಸದ ಗೋಪಾಲ್ ಶೆಟ್ಟಿ , ಕೇಂದ್ರ ಗೃಹ ಸಚಿವ ಅಮಿತ್ ಶಾ ಗೆ ಪತ್ರ ಬರೆದಿದ್ದು, ಶ್ರೀಮದ್ ಭಗವದ್ಗೀತೆಯನ್ನು ರಾಷ್ಟ್ರೀಯ ಧರ್ಮಗ್ರಂಥವಾಗಿ ಘೋಷಿಸುವಂತೆ ಗೃಹ ಸಚಿವರನ್ನು ಒತ್ತಾಯಿಸಿದ್ದರು. ಗೃಹ ಸಚಿವ ಶಾ ಅವರು ಜುಲೈ 18 ರಂದು ಈ ಪತ್ರಕ್ಕೆ ಉತ್ತರ ಕಳುಹಿಸಿದ್ದು, ತಮ್ಮ ಪತ್ರವನ್ನು ಅಗತ್ಯ ಕ್ರಮಕ್ಕಾಗಿ ಸಂಬಂಧಪಟ್ಟ ಸಚಿವಾಲಯಗಳಿಗೆ ಕಳುಹಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಗೃಹ ಸಚಿವಾಲಯವು ಈ ವಿಷಯದಲ್ಲಿ ಶಿಕ್ಷಣ ಸಚಿವಾಲಯದ ಅಭಿಪ್ರಾಯವನ್ನು ಕೇಳಿದೆ. ಶ್ರೀಮದ್ ಭಗವದ್ಗೀತೆಯನ್ನು ರಾಷ್ಟ್ರೀಯ ಧರ್ಮಗ್ರಂಥವಾಗಿ ಘೋಷಿಸುವ ಬಗ್ಗೆ ಶಿಕ್ಷಣ ಸಚಿವಾಲಯವು ಆಗಸ್ಟ್ 10 ರಂದು ತನ್ನ ಹೇಳಿಕೆಗಳನ್ನು ಕಳುಹಿಸಿದೆ ಎನ್ನಲಾಗಿದೆ. ಇದರ ನಂತರ, ಗೃಹ ವ್ಯವಹಾರಗಳ ಸಚಿವಾಲಯವು ಈಗ ಶ್ರೀಮದ್ ಭಗವದ್ಗೀತೆಯನ್ನು ರಾಷ್ಟ್ರೀಯ ಪುಸ್ತಕವಾಗಿ ಘೋಷಿಸುವ ಬಗ್ಗೆ ಸಂಸ್ಕೃತಿ ಸಚಿವಾಲಯದ ಅಭಿಪ್ರಾಯವನ್ನು ಕೇಳಿದ್ದು,ಅಲ್ಲಿಂದಲೂ ಸಕರಾತ್ಮಕ ಪ್ರತಿಕ್ರಿಯೆ ದೊರಕಿದೆ ಎಂಬ ಮಾಹಿತಿ ದೊರಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು