12:37 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಭಗವದ್ಗೀತೆ ರಾಷ್ಟ್ರೀಯ ಗ್ರಂಥವೆಂದು ಘೋಷಿಸಲು ಕೇಂದ್ರ ಸರಕಾರ ಚಿಂತನೆ: ಸಂಸದ ಗೋಪಾಲ್ ಶೆಟ್ಟಿ ಪ್ರಸ್ತಾವನೆ

09/09/2022, 20:03

ಹೊಸದಿಲ್ಲಿ(reporterkarnataka.com): ಕೇಂದ್ರ ಸರ್ಕಾರವು ಭಗವದ್ಗೀತೆಯನ್ನು ರಾಷ್ಟ್ರೀಯ ಗ್ರಂಥವೆಂದು ಘೋಷಿಸುವ ಚಿಂತನೆಯಲ್ಲಿದೆ. ಆ ಮೂಲಕ ರಾಷ್ಟ್ರಗೀತೆ, ರಾಷ್ಟ್ರಧ್ವಜದಂತೆ ದೇಶದಲ್ಲಿ ಶೀಘ್ರದಲ್ಲೇ ರಾಷ್ಟ್ರ ಪುಸ್ತಕ ಬರಲಿದೆ.

ಈ ಹಿನ್ನೆಲೆಯಲ್ಲಿ ಭಾರತ ಸರ್ಕಾರವು ವಿವಿಧ ಸಚಿವಾಲಯಗಳಿಂದ ಅಭಿಪ್ರಾಯವನ್ನು ಸಂಗ್ರಹಿಸುತ್ತಿದ್ದು, ಮಹಾರಾಷ್ಟ್ರದ ಬಿಜೆಪಿ ಸಂಸದ ಗೋಪಾಲ್ ಶೆಟ್ಟಿ ಅವರು ಕಳುಹಿಸಿದ ಪತ್ರದ ಆಧಾರದ ಮೇಲೆ ಸರ್ಕಾರ ಈ ಕಾರ್ಯವನ್ನು ಅನುಷ್ಠಾನಗೊಳಿಸುವ ಯೋಚನೆಯಲ್ಲಿದೆ.

ಜುಲೈ 5 ರಂದು ಮಹಾರಾಷ್ಟ್ರದ ಬಿಜೆಪಿ ಸಂಸದ ಗೋಪಾಲ್ ಶೆಟ್ಟಿ , ಕೇಂದ್ರ ಗೃಹ ಸಚಿವ ಅಮಿತ್ ಶಾ ಗೆ ಪತ್ರ ಬರೆದಿದ್ದು, ಶ್ರೀಮದ್ ಭಗವದ್ಗೀತೆಯನ್ನು ರಾಷ್ಟ್ರೀಯ ಧರ್ಮಗ್ರಂಥವಾಗಿ ಘೋಷಿಸುವಂತೆ ಗೃಹ ಸಚಿವರನ್ನು ಒತ್ತಾಯಿಸಿದ್ದರು. ಗೃಹ ಸಚಿವ ಶಾ ಅವರು ಜುಲೈ 18 ರಂದು ಈ ಪತ್ರಕ್ಕೆ ಉತ್ತರ ಕಳುಹಿಸಿದ್ದು, ತಮ್ಮ ಪತ್ರವನ್ನು ಅಗತ್ಯ ಕ್ರಮಕ್ಕಾಗಿ ಸಂಬಂಧಪಟ್ಟ ಸಚಿವಾಲಯಗಳಿಗೆ ಕಳುಹಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಗೃಹ ಸಚಿವಾಲಯವು ಈ ವಿಷಯದಲ್ಲಿ ಶಿಕ್ಷಣ ಸಚಿವಾಲಯದ ಅಭಿಪ್ರಾಯವನ್ನು ಕೇಳಿದೆ. ಶ್ರೀಮದ್ ಭಗವದ್ಗೀತೆಯನ್ನು ರಾಷ್ಟ್ರೀಯ ಧರ್ಮಗ್ರಂಥವಾಗಿ ಘೋಷಿಸುವ ಬಗ್ಗೆ ಶಿಕ್ಷಣ ಸಚಿವಾಲಯವು ಆಗಸ್ಟ್ 10 ರಂದು ತನ್ನ ಹೇಳಿಕೆಗಳನ್ನು ಕಳುಹಿಸಿದೆ ಎನ್ನಲಾಗಿದೆ. ಇದರ ನಂತರ, ಗೃಹ ವ್ಯವಹಾರಗಳ ಸಚಿವಾಲಯವು ಈಗ ಶ್ರೀಮದ್ ಭಗವದ್ಗೀತೆಯನ್ನು ರಾಷ್ಟ್ರೀಯ ಪುಸ್ತಕವಾಗಿ ಘೋಷಿಸುವ ಬಗ್ಗೆ ಸಂಸ್ಕೃತಿ ಸಚಿವಾಲಯದ ಅಭಿಪ್ರಾಯವನ್ನು ಕೇಳಿದ್ದು,ಅಲ್ಲಿಂದಲೂ ಸಕರಾತ್ಮಕ ಪ್ರತಿಕ್ರಿಯೆ ದೊರಕಿದೆ ಎಂಬ ಮಾಹಿತಿ ದೊರಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು