7:48 PM Saturday12 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಭಗವಾನ್ ಬಾಹುಬಲಿ ಬಗ್ಗೆ ವಿವಾದಾತ್ಮಕ ಹೇಳಿಕೆ: ಅಥಣಿ ಜೈನ ಸಮಾಜದ ಮುಖಂಡರಿಂದ ಖಂಡನೆ

10/02/2022, 15:19

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ವಿಶ್ವದ ಅದ್ಭುತಗಳಲ್ಲೊಂದಾದ ಶ್ರವಣಬೆಳಗೊಳದ ಏಕ ಶಿಲಾಮೂರ್ತಿ ಭಗವಾನ ಬಾಹುಬಲಿ ಸ್ವಾಮಿಯ ಬಗ್ಗೆ, ಜೈನ ಧರ್ಮದ ಬಗ್ಗೆ ಅಯೂಬ್ ಖಾನ್ ವಿವಾದಾತ್ಮಕ ಹೇಳಿಕೆ ನೀಡಿರುವುದನ್ನು ಅಥಣಿ ಜೈನ ಸಮಾಜ ಖಂಡಿಸಿದೆ. 


ಸಮಾಜದಲ್ಲಿ ಸಾಮರಸ್ಯ ಕದಡುವ ಇಂತಹ ಹೇಳಿಕೆ ನೀಡಿದವರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಅಥಣಿ ಜೈನ ಸಮಾಜದ  ಒತ್ತಾಯಿಸಿದರು.

ಜೈನ ಸಮಾಜದ ಬುಧವಾರ ತಹಶೀಲ್ದಾರ್ ದುಂಡಪ್ಪ ಕೋಮಾರ್ ಅವರಿಗೆ ಮನವಿ ಪತ್ರ ಸಲ್ಲಿಸಿ ನಂತರ ಅಥಣಿ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಕುಮಾರ್ ಹಾಡ್ಕಾರ ಅವರಿಗೆ ದೂರು ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. 

ಒಂದು ಧರ್ಮದ ಭಾವನೆಗಳ ಹಾಗೂ ನಮ್ಮ ದೇಶದ ಕೀರ್ತಿಯ ಕಳಸವಾಗಿರುವ ಗೊಮ್ಮಟೇಶನಿಗೆ ಬಟ್ಟೆ ಧರಿಸುವ ಬಗ್ಗೆ ಹೇಳಿಕೆ ನೀಡಿರುವುದು. ಜೈನ ಧರ್ಮಿಯರ ಭಾವನೆಗಳಿಗೆ ಧಕ್ಕೆ ತಂದಿರುತ್ತದೆ.  ಆಯೂಬ್ ಖಾನ್ ವಿರುದ್ದ ಶಿಸ್ತಿನ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಜೈನ ಸಮಾಜದ ಮುಖಂಡ ರಾಜು ನಾಡಗೌಡ ಮಾತನಾಡಿ, ನಮ್ಮ ಜೈನ ಧರ್ಮದ ಆರಾಧ್ಯ ದೇವರಾದ ಭಗವಾನ ಬಾಹುಬಲಿ ಸ್ವಾಮಿಯ ಕುರಿತು ಮೈಸೂರಿನ  ಅಯೂಬ್ ಖಾನ್ ಎಂಬ ಮುಸ್ಲಿಮ್ ವ್ಯಕ್ತಿ ಅವಹೇಳನಕಾರಿಯಾಗಿ ಖಾಸಗಿ ಸುದ್ದಿವಾಹಿನಿಯೊಂದರಲ್ಲಿ ಮಾತನಾಡಿರುವದು ಜೈನ ಧರ್ಮಿಯರ ಭಾವನೆಗಳಿಗೆ ಧಕ್ಕೆ ಉಂಟುಮಾಡಿದೆ. ಇಂತಹ ಘಟನೆಗಳು ಮರುಕಳಿಸಬಾರದು  ಮತ್ತು ಈ ರೀತಿ ಹೇಳಿಕೆ ನೀಡಿದ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಈ ವೇಳೆ ನ್ಯಾಯವಾದಿ ಕಲ್ಲಪ್ಪ ವಣಜೋಳ ಮಾತನಾಡಿ ಬಾಹುಬಲಿ ಮೂರ್ತಿಗೆ  ಚಡ್ಡಿ ಹಾಕಬೇಕು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ ಅಯೂಬ್ ಖಾನ್  ವಿರುದ್ಧ  ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಆತನ ವಿರುದ್ಧ  ಅಥಣಿ ಪೊಲೀಸ್ ಠಾಣೆಯಲ್ಲಿ ನೋವು ದೂರು ನೀಡಿದ್ದೇವೆ. ರಾಜ್ಯಾದ್ಯಂತ ಈ ವಿವಾದಾತ್ಮಕ ಹೇಳಿಕೆಯನ್ನು ಜೈನ ಮುಖಂಡರು ಖಂಡಿಸಿದ್ದಾರೆ.  ರಾಜ್ಯ ಸರ್ಕಾರ ಅಯೂಬ್ ಖಾನ್  ವಿರುದ್ಧ  ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.


ಈ ವೇಳೆ  ಜೈನ ಸಮಾಜದ ಮುಖಂಡರಾದ ಅರುಣ್ ಯಲಗುದ್ರಿ, ಅಮರ ದುರ್ಗಣ್ಣವರ, ದೀಪಕ್ ಕಡೋಲಿ, ಅಶೋಕ ದಾನಗೌಡರ, ಅಪ್ಪಾಸಾಬ ಪಾಟೀಲ, ಅಶೋಕ ಪಡನಾಡ, ರಾಜೇಂದ್ರ ಪಾಟೀಲ್, ಶ್ರೀಕಾಂತ್ ಅಸ್ಕಿ, ಪುಷ್ಪಕ ಪಾಟೀಲ, ವಿದ್ಯಾಧರ ಡುಮ್ಮನವರ ,  ಅಮೂಲ ಕಾಂತೆ, ರಾಘವೇಂದ್ರ ಹಳಿಂಗಳಿ, ನೇಮಿನಾಥ ನಂದಗಾವ, ಬಸಗೌಡ ಮುಗ್ಗನವರಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು