4:52 AM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಭಾರತವು ಮಧುಮೇಹದ ರಾಜಧಾನಿಯೇ?: ಇದರ ನಿಯಂತ್ರಣಕ್ಕೆ ಏನು ಮಾಡಬೇಕು? ಮುಂದಕ್ಕೆ ಓದಿ  

14/11/2021, 09:19

ಕಾರ್ಕಳ(reporterkarnataka.com):  ಮಧುಮೇಹ ಕಾಯಿಲೆ ಪ್ರಾರಂಭದಲ್ಲಿ ಯಾವುದೇ ಲಕ್ಷಣಗಳನ್ನು ತೋರಿಸುವುದಿಲ್ಲ, ಇದನ್ನು ಪತ್ತೆಹಚ್ಚಲು ಕಾಲಕಾಲಕ್ಕೆ ತಪಾಸಣೆ ಮಾಡಿಸಿಕೊಳ್ಳುವುದು ಅವಶ್ಯಕ. ನಿಯಮಿತವಾದ ಆಹಾರ ಸೇವನೆ,  ನಿಯಮಿತವಾದ ವ್ಯಾಯಾಮ ಮತ್ತು ಮನಸ್ಸಿನ ನಿಗ್ರಹದಿಂದ ಮಧುಮೇಹವನ್ನು ಹತೋಟಿಯಲ್ಲಿಡಬಹುದು ಎಂದು ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕಾರ್ಕಳ ಇದರ ಸಭಾಪತಿಯಾದ ಡಾ.ಕೆ. ರಾಮಚಂದ್ರ ಜೋಶಿ ಹೇಳಿದರು.

ಅವರು ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕಾರ್ಕಳ ಘಟಕ, ಭಾರತೀಯ ವೈದ್ಯಕೀಯ ಸಂಘ ಕಾರ್ಕಳ ಮತ್ತು ಶ್ರೀ ಭುವನೇಂದ್ರ ಮೆಡಿಕಲ್ ಮಿಷನ್  ಇವರ ಸಂಯುಕ್ತ ಆಶ್ರಯದಲ್ಲಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕಾರ್ಕಳ ಇದರ ಕಾರ್ಯಾಲಯದಲ್ಲಿ ನಡೆದ “ವಿಶ್ವ ಮಧುಮೇಹ ದಿನಾಚರಣೆ 2021″ಇದರ ಅಂಗವಾಗಿ ನಡೆದ ಉಚಿತ ಮಧುಮೇಹ ತಪಾಸಣಾ ಶಿಬಿರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ  ಇಸ್ರೋದ ನಿವೃತ್ತ ವಿಜ್ಞಾನಿ ಇ. ಜನಾರ್ಧನ್ ಅಧಿಕ ಮಧುಮೇಹಿಗಳಿರುವ ನಮ್ಮ ದೇಶದಲ್ಲಿ ಮಧುಮೇಹಿಗಳನ್ನು ಭೇಟಿಯಾಗಿ ಅವರ ಸಮಸ್ಯೆಗಳನ್ನು ಅರಿತು ಸೂಕ್ತ ಔಷಧಿಗಳನ್ನು ನೀಡುವ ವ್ಯವಸ್ಥೆಯಾಗಬೇಕು ಎಂದರು.

ಮುಖ್ಯಅತಿಥಿ ಭಾರತೀಯ ವೈದ್ಯಕೀಯ ಸಂಘ ಕಾರ್ಕಳ ಇದರ ಅಧ್ಯಕ್ಷರಾದ ಡಾ. ಅನಂತ ಕಾಮತ್ ಮಾತನಾಡುತ್ತಾ ಭಾರತವು ಮಧುಮೇಹದ ರಾಜಧಾನಿಯಾಗಿದೆ.  ಮಧುಮೇಹ ರೋಗಿಗಳು ಮಿತವಾದ ಮತ್ತು ಸರಿಯಾದ ಆಹಾರ ಪದ್ಧತಿಯನ್ನು ಅನುಸರಿಸಬೇಕು ಎಂದರು.

ಶ್ರೀ ಭುವನೇಂದ್ರ ವೈದ್ಯಕೀಯ ಮಿಷನ್ ಇದರ ಅಧ್ಯಕ್ಷ ಗಣೇಶ್ ಕಾಮತ್ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಆಯೋಜಿಸಲಾದ ಸ್ಪೆಷಲಿಸ್ಟ್ ವೈದ್ಯಕೀಯ ಶಿಬಿರದಲ್ಲಿ 60ಕ್ಕೂ ಹೆಚ್ಚು ಜನರು ಭಾಗವಹಿಸಿದ್ದು ಎಲ್ಲರಿಗೂ Blood sugar, Glyco Hb%,  BP, ECG, ಹಾಗೂ Serum Uric acid ಪರೀಕ್ಷೆಗಳನ್ನು ಉಚಿತವಾಗಿ ಮಾಡಲಾಯಿತು.

ಶಿವಕುಮಾರ್ ಪ್ರಾರ್ಥಿಸಿದರು. ಶೇಖರ್ ಎಚ್. ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ವಸಂತ್ ಎಂ. ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು