3:06 AM Monday25 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ಭಾರತವು ಮಧುಮೇಹದ ರಾಜಧಾನಿಯೇ?: ಇದರ ನಿಯಂತ್ರಣಕ್ಕೆ ಏನು ಮಾಡಬೇಕು? ಮುಂದಕ್ಕೆ ಓದಿ  

14/11/2021, 09:19

ಕಾರ್ಕಳ(reporterkarnataka.com):  ಮಧುಮೇಹ ಕಾಯಿಲೆ ಪ್ರಾರಂಭದಲ್ಲಿ ಯಾವುದೇ ಲಕ್ಷಣಗಳನ್ನು ತೋರಿಸುವುದಿಲ್ಲ, ಇದನ್ನು ಪತ್ತೆಹಚ್ಚಲು ಕಾಲಕಾಲಕ್ಕೆ ತಪಾಸಣೆ ಮಾಡಿಸಿಕೊಳ್ಳುವುದು ಅವಶ್ಯಕ. ನಿಯಮಿತವಾದ ಆಹಾರ ಸೇವನೆ,  ನಿಯಮಿತವಾದ ವ್ಯಾಯಾಮ ಮತ್ತು ಮನಸ್ಸಿನ ನಿಗ್ರಹದಿಂದ ಮಧುಮೇಹವನ್ನು ಹತೋಟಿಯಲ್ಲಿಡಬಹುದು ಎಂದು ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕಾರ್ಕಳ ಇದರ ಸಭಾಪತಿಯಾದ ಡಾ.ಕೆ. ರಾಮಚಂದ್ರ ಜೋಶಿ ಹೇಳಿದರು.

ಅವರು ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕಾರ್ಕಳ ಘಟಕ, ಭಾರತೀಯ ವೈದ್ಯಕೀಯ ಸಂಘ ಕಾರ್ಕಳ ಮತ್ತು ಶ್ರೀ ಭುವನೇಂದ್ರ ಮೆಡಿಕಲ್ ಮಿಷನ್  ಇವರ ಸಂಯುಕ್ತ ಆಶ್ರಯದಲ್ಲಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕಾರ್ಕಳ ಇದರ ಕಾರ್ಯಾಲಯದಲ್ಲಿ ನಡೆದ “ವಿಶ್ವ ಮಧುಮೇಹ ದಿನಾಚರಣೆ 2021″ಇದರ ಅಂಗವಾಗಿ ನಡೆದ ಉಚಿತ ಮಧುಮೇಹ ತಪಾಸಣಾ ಶಿಬಿರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ  ಇಸ್ರೋದ ನಿವೃತ್ತ ವಿಜ್ಞಾನಿ ಇ. ಜನಾರ್ಧನ್ ಅಧಿಕ ಮಧುಮೇಹಿಗಳಿರುವ ನಮ್ಮ ದೇಶದಲ್ಲಿ ಮಧುಮೇಹಿಗಳನ್ನು ಭೇಟಿಯಾಗಿ ಅವರ ಸಮಸ್ಯೆಗಳನ್ನು ಅರಿತು ಸೂಕ್ತ ಔಷಧಿಗಳನ್ನು ನೀಡುವ ವ್ಯವಸ್ಥೆಯಾಗಬೇಕು ಎಂದರು.

ಮುಖ್ಯಅತಿಥಿ ಭಾರತೀಯ ವೈದ್ಯಕೀಯ ಸಂಘ ಕಾರ್ಕಳ ಇದರ ಅಧ್ಯಕ್ಷರಾದ ಡಾ. ಅನಂತ ಕಾಮತ್ ಮಾತನಾಡುತ್ತಾ ಭಾರತವು ಮಧುಮೇಹದ ರಾಜಧಾನಿಯಾಗಿದೆ.  ಮಧುಮೇಹ ರೋಗಿಗಳು ಮಿತವಾದ ಮತ್ತು ಸರಿಯಾದ ಆಹಾರ ಪದ್ಧತಿಯನ್ನು ಅನುಸರಿಸಬೇಕು ಎಂದರು.

ಶ್ರೀ ಭುವನೇಂದ್ರ ವೈದ್ಯಕೀಯ ಮಿಷನ್ ಇದರ ಅಧ್ಯಕ್ಷ ಗಣೇಶ್ ಕಾಮತ್ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಆಯೋಜಿಸಲಾದ ಸ್ಪೆಷಲಿಸ್ಟ್ ವೈದ್ಯಕೀಯ ಶಿಬಿರದಲ್ಲಿ 60ಕ್ಕೂ ಹೆಚ್ಚು ಜನರು ಭಾಗವಹಿಸಿದ್ದು ಎಲ್ಲರಿಗೂ Blood sugar, Glyco Hb%,  BP, ECG, ಹಾಗೂ Serum Uric acid ಪರೀಕ್ಷೆಗಳನ್ನು ಉಚಿತವಾಗಿ ಮಾಡಲಾಯಿತು.

ಶಿವಕುಮಾರ್ ಪ್ರಾರ್ಥಿಸಿದರು. ಶೇಖರ್ ಎಚ್. ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ವಸಂತ್ ಎಂ. ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು