7:16 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಭಾರತವು ಮಧುಮೇಹದ ರಾಜಧಾನಿಯೇ?: ಇದರ ನಿಯಂತ್ರಣಕ್ಕೆ ಏನು ಮಾಡಬೇಕು? ಮುಂದಕ್ಕೆ ಓದಿ  

14/11/2021, 09:19

ಕಾರ್ಕಳ(reporterkarnataka.com):  ಮಧುಮೇಹ ಕಾಯಿಲೆ ಪ್ರಾರಂಭದಲ್ಲಿ ಯಾವುದೇ ಲಕ್ಷಣಗಳನ್ನು ತೋರಿಸುವುದಿಲ್ಲ, ಇದನ್ನು ಪತ್ತೆಹಚ್ಚಲು ಕಾಲಕಾಲಕ್ಕೆ ತಪಾಸಣೆ ಮಾಡಿಸಿಕೊಳ್ಳುವುದು ಅವಶ್ಯಕ. ನಿಯಮಿತವಾದ ಆಹಾರ ಸೇವನೆ,  ನಿಯಮಿತವಾದ ವ್ಯಾಯಾಮ ಮತ್ತು ಮನಸ್ಸಿನ ನಿಗ್ರಹದಿಂದ ಮಧುಮೇಹವನ್ನು ಹತೋಟಿಯಲ್ಲಿಡಬಹುದು ಎಂದು ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕಾರ್ಕಳ ಇದರ ಸಭಾಪತಿಯಾದ ಡಾ.ಕೆ. ರಾಮಚಂದ್ರ ಜೋಶಿ ಹೇಳಿದರು.

ಅವರು ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕಾರ್ಕಳ ಘಟಕ, ಭಾರತೀಯ ವೈದ್ಯಕೀಯ ಸಂಘ ಕಾರ್ಕಳ ಮತ್ತು ಶ್ರೀ ಭುವನೇಂದ್ರ ಮೆಡಿಕಲ್ ಮಿಷನ್  ಇವರ ಸಂಯುಕ್ತ ಆಶ್ರಯದಲ್ಲಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕಾರ್ಕಳ ಇದರ ಕಾರ್ಯಾಲಯದಲ್ಲಿ ನಡೆದ “ವಿಶ್ವ ಮಧುಮೇಹ ದಿನಾಚರಣೆ 2021″ಇದರ ಅಂಗವಾಗಿ ನಡೆದ ಉಚಿತ ಮಧುಮೇಹ ತಪಾಸಣಾ ಶಿಬಿರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ  ಇಸ್ರೋದ ನಿವೃತ್ತ ವಿಜ್ಞಾನಿ ಇ. ಜನಾರ್ಧನ್ ಅಧಿಕ ಮಧುಮೇಹಿಗಳಿರುವ ನಮ್ಮ ದೇಶದಲ್ಲಿ ಮಧುಮೇಹಿಗಳನ್ನು ಭೇಟಿಯಾಗಿ ಅವರ ಸಮಸ್ಯೆಗಳನ್ನು ಅರಿತು ಸೂಕ್ತ ಔಷಧಿಗಳನ್ನು ನೀಡುವ ವ್ಯವಸ್ಥೆಯಾಗಬೇಕು ಎಂದರು.

ಮುಖ್ಯಅತಿಥಿ ಭಾರತೀಯ ವೈದ್ಯಕೀಯ ಸಂಘ ಕಾರ್ಕಳ ಇದರ ಅಧ್ಯಕ್ಷರಾದ ಡಾ. ಅನಂತ ಕಾಮತ್ ಮಾತನಾಡುತ್ತಾ ಭಾರತವು ಮಧುಮೇಹದ ರಾಜಧಾನಿಯಾಗಿದೆ.  ಮಧುಮೇಹ ರೋಗಿಗಳು ಮಿತವಾದ ಮತ್ತು ಸರಿಯಾದ ಆಹಾರ ಪದ್ಧತಿಯನ್ನು ಅನುಸರಿಸಬೇಕು ಎಂದರು.

ಶ್ರೀ ಭುವನೇಂದ್ರ ವೈದ್ಯಕೀಯ ಮಿಷನ್ ಇದರ ಅಧ್ಯಕ್ಷ ಗಣೇಶ್ ಕಾಮತ್ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಆಯೋಜಿಸಲಾದ ಸ್ಪೆಷಲಿಸ್ಟ್ ವೈದ್ಯಕೀಯ ಶಿಬಿರದಲ್ಲಿ 60ಕ್ಕೂ ಹೆಚ್ಚು ಜನರು ಭಾಗವಹಿಸಿದ್ದು ಎಲ್ಲರಿಗೂ Blood sugar, Glyco Hb%,  BP, ECG, ಹಾಗೂ Serum Uric acid ಪರೀಕ್ಷೆಗಳನ್ನು ಉಚಿತವಾಗಿ ಮಾಡಲಾಯಿತು.

ಶಿವಕುಮಾರ್ ಪ್ರಾರ್ಥಿಸಿದರು. ಶೇಖರ್ ಎಚ್. ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ವಸಂತ್ ಎಂ. ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು