9:49 PM Sunday30 - November 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಭಾರತ್ ಕಿಶೋರ್ ಟೈಟಲ್ ವಿಜೇತ ದೇಹದಾರ್ಡ್ಯಪಟು ಜಲ್ಲಿಗುಡ್ಡೆಯ ಸಂತೋಷ್ ಕುಮಾರ್ ಉಳ್ಳಾಲ್ ಹೃದಯಾಘಾತಕ್ಕೆ ಬಲಿ

04/07/2025, 22:25

ಉಳ್ಳಾಲ(reporterkarnataka.com): ಭಾರತ್ ಕಿಶೋರ್ ಟೈಟಲ್ ವಿಜೇತ ದೇಹದಾರ್ಡ್ಯಪಟು ರೈಲ್ವೇ ಉದ್ಯೋಗಿ ಜಲ್ಲಿಗುಡ್ಡೆ ನಿವಾಸಿ ಸಂತೋಷ್ ಕುಮಾರ್ ಉಳ್ಳಾಲ್ (52) ಹುಬ್ಬಳ್ಳಿಯಲ್ಲಿ ಗುರುವಾರ ಹೃದಯಾಘಾತದಿಂದ ನಿಧನರಾದರು.
ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಮೂಲತಃ ಉಳ್ಳಾಲ ಉಳಿಯ ನಿವಾಸಿಯಾಗಿದ್ದ ಸಂತೋಷ್ ಕುಮಾರ್ ತೊಕ್ಕೊಟ್ಟಿನ ಶಕ್ತಿಭಾರತ್ ವ್ಯಾಯಾಮ ಶಾಲೆಯಲ್ಲಿ ತರಬೇತಿ ಪಡೆದು ರಾಜ್ಯ, ರಾಷ್ಟ್ರಮಟ್ಟದ ದೇಹದಾರ್ಡ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಪಡೆದಿದ್ದರು.
ಕರ್ನಾಟಕ ಉದಯ, ಭಾರತ್ ಕಿಶೋರ್ ಟೈಟಲ್ ವಿಜೇತರಾಗಿದ್ದರು. ರೈಲ್ವೇ ಇಲಾಖೆಯಲ್ಲಿ ಉದ್ಯೋಗದಲ್ಲಿದ್ದ ಅವರು ದೇಹದಾರ್ಡ್ಯಪಟುವಾಗಿ ರೈಲ್ವೇಯನ್ನು ಪ್ರತಿನಿಧಿಸಿದ್ದರು. ಮಂಗಳೂರು ರೈಲ್ವೇ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅವರು ಹುಬ್ಬಳ್ಳಿಯಲ್ಲಿ ಸಭೆಯಲ್ಲಿ ಭಾಗವಹಿಸಲು ತನ್ನ ಸಹೋದ್ಯೋಗಿಯೊಂದಿಗೆ ತೆರಳುತ್ತಿದ್ದಾಗ ಅವರು ಹೃದಯಾಘಾತದಿಂದ ನಿಧನ ಹೊಂದಿದರು ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು