7:34 PM Friday26 - December 2025
ಬ್ರೇಕಿಂಗ್ ನ್ಯೂಸ್
ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:… ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60… ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಇತ್ತೀಚಿನ ಸುದ್ದಿ

ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ತಾಲಿಬಾನ್ ಹಿಂಸಾಚಾರವನ್ನು ಹೋಲಿಕೆ ಮಾಡಿದ ಸಂಸದ : ದೇಶದ್ರೋಹ ಪ್ರಕರಣ ದಾಖಲು

18/08/2021, 19:32

ಲಖನೌ(ReporteRkarnataka.com)

ಅಫ್ಘಾನಿಸ್ತಾನವನ್ನು ತಾಲಿಬಾನ್ ಕೈವಶ ಮಾಡಿಕೊಂಡಿರುವುದನ್ನು ಸಮರ್ಥಿಸಿ, ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಹೋಲಿಕೆ ಮಾಡಿದ ಸಮಾಜವಾದಿ ಪಕ್ಷದ ಸಂಸದ ಶಫಿಕುರ್‌ ರಹಮಾನ್‌ ಬರ್ಕ್‌ ವಿರುದ್ಧ ಪ್ರಕರಣ ದಾಖಲಾಗಿದೆ.

ಅಫ್ಗಾನಿಸ್ತಾನದಲ್ಲಿನ ಬೆಳವಣಿಗೆ ಕುರಿತು ಸೋಮವಾರ ವರದಿಗಾರರು ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ್ದ ಸಂಭಲ್‌ ಲೋಕಸಭಾ ಕ್ಷೇತ್ರದ ಸಂಸದ ಶಫಿಕುರ್‌, ‘ಭಾರತವು ಬ್ರಿಟಿಷ್‌ ಆಡಳಿತಕ್ಕೆ ಒಳಪಟ್ಟಿದ್ದಾಗ, ಇಡೀ ರಾಷ್ಟ್ರವೇ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿತ್ತು.
ಅವರೂ ಸಹ ಸ್ವತಂತ್ರರಾಗಲು ಇಚ್ಛಿಸಿದ್ದಾರೆ. ಇದು ಅವರ ಖಾಸಗಿ ವಿಚಾರವಾಗಿದೆ. ಇದರಲ್ಲಿ ನಾವು ಹೇಗೆ ಮೂಗು ತೂರಿಸಲು ಸಾಧ್ಯ?’ ಎಂದಿದ್ದಾರೆ.

‘ಅಫ್ಗನ್ನರು ಅವರ ರಾಷ್ಟ್ರವನ್ನು ಅವರದೇ ರೀತಿಯಲ್ಲಿ ಮುನ್ನಡೆಸಲು ಬಯಸಿದ್ದಾರೆ. ತಾಲಿಬಾನಿಗಳು ಅವರ ರಾಷ್ಟ್ರವನ್ನು ಸ್ವತಂತ್ರಗೊಳಿಸಲು ಮುಂದಾಗಿದ್ದಾರೆ ಹಾಗೂ ಇದು ಅಫ್ಗಾನಿಸ್ತಾನದ ಆಂತರಿಕ ವಿಚಾರವಾಗಿದೆ’ ಎಂದು ಶಫಿಕುರ್‌ ಹೇಳಿದ್ದರು.

ಸಂಸದ ಶಫಿಕುರ್‌ ಅವರು ತಾಲಿಬಾನಿಗಳನ್ನು ಭಾರತದ ಸ್ವಾತಂತ್ರ್ಯ ಹೋರಾಟಗಾರರೊಂದಿಗೆ ಹೋಲಿಕೆ ಮಾಡಿರುವ ಬಗ್ಗೆ ದೂರು ದಾಖಲಾಗಿದೆ. ‘ಶಫಿಕುರ್‌ ಅವರ ವಿರುದ್ಧ ದೇಶ ದ್ರೋಹ (124ಎ), 154ಎ, 295 ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ. ಫೇಸ್‌ಬುಕ್‌ ವಿಡಿಯೊದಲ್ಲೂ ಇಂಥದ್ದೇ ಹೇಳಿಕೆಗಳನ್ನು ನೀಡಿರುವ ಇಬ್ಬರು ವ್ಯಕ್ತಿಗಳ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ’ ಎಂದು ಸಂಭಲ್‌ನ ಪೊಲೀಸ್‌ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು