1:31 AM Saturday5 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ತಾಲಿಬಾನ್ ಹಿಂಸಾಚಾರವನ್ನು ಹೋಲಿಕೆ ಮಾಡಿದ ಸಂಸದ : ದೇಶದ್ರೋಹ ಪ್ರಕರಣ ದಾಖಲು

18/08/2021, 19:32

ಲಖನೌ(ReporteRkarnataka.com)

ಅಫ್ಘಾನಿಸ್ತಾನವನ್ನು ತಾಲಿಬಾನ್ ಕೈವಶ ಮಾಡಿಕೊಂಡಿರುವುದನ್ನು ಸಮರ್ಥಿಸಿ, ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಹೋಲಿಕೆ ಮಾಡಿದ ಸಮಾಜವಾದಿ ಪಕ್ಷದ ಸಂಸದ ಶಫಿಕುರ್‌ ರಹಮಾನ್‌ ಬರ್ಕ್‌ ವಿರುದ್ಧ ಪ್ರಕರಣ ದಾಖಲಾಗಿದೆ.

ಅಫ್ಗಾನಿಸ್ತಾನದಲ್ಲಿನ ಬೆಳವಣಿಗೆ ಕುರಿತು ಸೋಮವಾರ ವರದಿಗಾರರು ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ್ದ ಸಂಭಲ್‌ ಲೋಕಸಭಾ ಕ್ಷೇತ್ರದ ಸಂಸದ ಶಫಿಕುರ್‌, ‘ಭಾರತವು ಬ್ರಿಟಿಷ್‌ ಆಡಳಿತಕ್ಕೆ ಒಳಪಟ್ಟಿದ್ದಾಗ, ಇಡೀ ರಾಷ್ಟ್ರವೇ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿತ್ತು.
ಅವರೂ ಸಹ ಸ್ವತಂತ್ರರಾಗಲು ಇಚ್ಛಿಸಿದ್ದಾರೆ. ಇದು ಅವರ ಖಾಸಗಿ ವಿಚಾರವಾಗಿದೆ. ಇದರಲ್ಲಿ ನಾವು ಹೇಗೆ ಮೂಗು ತೂರಿಸಲು ಸಾಧ್ಯ?’ ಎಂದಿದ್ದಾರೆ.

‘ಅಫ್ಗನ್ನರು ಅವರ ರಾಷ್ಟ್ರವನ್ನು ಅವರದೇ ರೀತಿಯಲ್ಲಿ ಮುನ್ನಡೆಸಲು ಬಯಸಿದ್ದಾರೆ. ತಾಲಿಬಾನಿಗಳು ಅವರ ರಾಷ್ಟ್ರವನ್ನು ಸ್ವತಂತ್ರಗೊಳಿಸಲು ಮುಂದಾಗಿದ್ದಾರೆ ಹಾಗೂ ಇದು ಅಫ್ಗಾನಿಸ್ತಾನದ ಆಂತರಿಕ ವಿಚಾರವಾಗಿದೆ’ ಎಂದು ಶಫಿಕುರ್‌ ಹೇಳಿದ್ದರು.

ಸಂಸದ ಶಫಿಕುರ್‌ ಅವರು ತಾಲಿಬಾನಿಗಳನ್ನು ಭಾರತದ ಸ್ವಾತಂತ್ರ್ಯ ಹೋರಾಟಗಾರರೊಂದಿಗೆ ಹೋಲಿಕೆ ಮಾಡಿರುವ ಬಗ್ಗೆ ದೂರು ದಾಖಲಾಗಿದೆ. ‘ಶಫಿಕುರ್‌ ಅವರ ವಿರುದ್ಧ ದೇಶ ದ್ರೋಹ (124ಎ), 154ಎ, 295 ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ. ಫೇಸ್‌ಬುಕ್‌ ವಿಡಿಯೊದಲ್ಲೂ ಇಂಥದ್ದೇ ಹೇಳಿಕೆಗಳನ್ನು ನೀಡಿರುವ ಇಬ್ಬರು ವ್ಯಕ್ತಿಗಳ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ’ ಎಂದು ಸಂಭಲ್‌ನ ಪೊಲೀಸ್‌ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು