2:54 PM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ತಾಲಿಬಾನ್ ಹಿಂಸಾಚಾರವನ್ನು ಹೋಲಿಕೆ ಮಾಡಿದ ಸಂಸದ : ದೇಶದ್ರೋಹ ಪ್ರಕರಣ ದಾಖಲು

18/08/2021, 19:32

ಲಖನೌ(ReporteRkarnataka.com)

ಅಫ್ಘಾನಿಸ್ತಾನವನ್ನು ತಾಲಿಬಾನ್ ಕೈವಶ ಮಾಡಿಕೊಂಡಿರುವುದನ್ನು ಸಮರ್ಥಿಸಿ, ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಹೋಲಿಕೆ ಮಾಡಿದ ಸಮಾಜವಾದಿ ಪಕ್ಷದ ಸಂಸದ ಶಫಿಕುರ್‌ ರಹಮಾನ್‌ ಬರ್ಕ್‌ ವಿರುದ್ಧ ಪ್ರಕರಣ ದಾಖಲಾಗಿದೆ.

ಅಫ್ಗಾನಿಸ್ತಾನದಲ್ಲಿನ ಬೆಳವಣಿಗೆ ಕುರಿತು ಸೋಮವಾರ ವರದಿಗಾರರು ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ್ದ ಸಂಭಲ್‌ ಲೋಕಸಭಾ ಕ್ಷೇತ್ರದ ಸಂಸದ ಶಫಿಕುರ್‌, ‘ಭಾರತವು ಬ್ರಿಟಿಷ್‌ ಆಡಳಿತಕ್ಕೆ ಒಳಪಟ್ಟಿದ್ದಾಗ, ಇಡೀ ರಾಷ್ಟ್ರವೇ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿತ್ತು.
ಅವರೂ ಸಹ ಸ್ವತಂತ್ರರಾಗಲು ಇಚ್ಛಿಸಿದ್ದಾರೆ. ಇದು ಅವರ ಖಾಸಗಿ ವಿಚಾರವಾಗಿದೆ. ಇದರಲ್ಲಿ ನಾವು ಹೇಗೆ ಮೂಗು ತೂರಿಸಲು ಸಾಧ್ಯ?’ ಎಂದಿದ್ದಾರೆ.

‘ಅಫ್ಗನ್ನರು ಅವರ ರಾಷ್ಟ್ರವನ್ನು ಅವರದೇ ರೀತಿಯಲ್ಲಿ ಮುನ್ನಡೆಸಲು ಬಯಸಿದ್ದಾರೆ. ತಾಲಿಬಾನಿಗಳು ಅವರ ರಾಷ್ಟ್ರವನ್ನು ಸ್ವತಂತ್ರಗೊಳಿಸಲು ಮುಂದಾಗಿದ್ದಾರೆ ಹಾಗೂ ಇದು ಅಫ್ಗಾನಿಸ್ತಾನದ ಆಂತರಿಕ ವಿಚಾರವಾಗಿದೆ’ ಎಂದು ಶಫಿಕುರ್‌ ಹೇಳಿದ್ದರು.

ಸಂಸದ ಶಫಿಕುರ್‌ ಅವರು ತಾಲಿಬಾನಿಗಳನ್ನು ಭಾರತದ ಸ್ವಾತಂತ್ರ್ಯ ಹೋರಾಟಗಾರರೊಂದಿಗೆ ಹೋಲಿಕೆ ಮಾಡಿರುವ ಬಗ್ಗೆ ದೂರು ದಾಖಲಾಗಿದೆ. ‘ಶಫಿಕುರ್‌ ಅವರ ವಿರುದ್ಧ ದೇಶ ದ್ರೋಹ (124ಎ), 154ಎ, 295 ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ. ಫೇಸ್‌ಬುಕ್‌ ವಿಡಿಯೊದಲ್ಲೂ ಇಂಥದ್ದೇ ಹೇಳಿಕೆಗಳನ್ನು ನೀಡಿರುವ ಇಬ್ಬರು ವ್ಯಕ್ತಿಗಳ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ’ ಎಂದು ಸಂಭಲ್‌ನ ಪೊಲೀಸ್‌ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು