12:44 PM Sunday5 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ತಾಲಿಬಾನ್ ಹಿಂಸಾಚಾರವನ್ನು ಹೋಲಿಕೆ ಮಾಡಿದ ಸಂಸದ : ದೇಶದ್ರೋಹ ಪ್ರಕರಣ ದಾಖಲು

18/08/2021, 19:32

ಲಖನೌ(ReporteRkarnataka.com)

ಅಫ್ಘಾನಿಸ್ತಾನವನ್ನು ತಾಲಿಬಾನ್ ಕೈವಶ ಮಾಡಿಕೊಂಡಿರುವುದನ್ನು ಸಮರ್ಥಿಸಿ, ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಹೋಲಿಕೆ ಮಾಡಿದ ಸಮಾಜವಾದಿ ಪಕ್ಷದ ಸಂಸದ ಶಫಿಕುರ್‌ ರಹಮಾನ್‌ ಬರ್ಕ್‌ ವಿರುದ್ಧ ಪ್ರಕರಣ ದಾಖಲಾಗಿದೆ.

ಅಫ್ಗಾನಿಸ್ತಾನದಲ್ಲಿನ ಬೆಳವಣಿಗೆ ಕುರಿತು ಸೋಮವಾರ ವರದಿಗಾರರು ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ್ದ ಸಂಭಲ್‌ ಲೋಕಸಭಾ ಕ್ಷೇತ್ರದ ಸಂಸದ ಶಫಿಕುರ್‌, ‘ಭಾರತವು ಬ್ರಿಟಿಷ್‌ ಆಡಳಿತಕ್ಕೆ ಒಳಪಟ್ಟಿದ್ದಾಗ, ಇಡೀ ರಾಷ್ಟ್ರವೇ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿತ್ತು.
ಅವರೂ ಸಹ ಸ್ವತಂತ್ರರಾಗಲು ಇಚ್ಛಿಸಿದ್ದಾರೆ. ಇದು ಅವರ ಖಾಸಗಿ ವಿಚಾರವಾಗಿದೆ. ಇದರಲ್ಲಿ ನಾವು ಹೇಗೆ ಮೂಗು ತೂರಿಸಲು ಸಾಧ್ಯ?’ ಎಂದಿದ್ದಾರೆ.

‘ಅಫ್ಗನ್ನರು ಅವರ ರಾಷ್ಟ್ರವನ್ನು ಅವರದೇ ರೀತಿಯಲ್ಲಿ ಮುನ್ನಡೆಸಲು ಬಯಸಿದ್ದಾರೆ. ತಾಲಿಬಾನಿಗಳು ಅವರ ರಾಷ್ಟ್ರವನ್ನು ಸ್ವತಂತ್ರಗೊಳಿಸಲು ಮುಂದಾಗಿದ್ದಾರೆ ಹಾಗೂ ಇದು ಅಫ್ಗಾನಿಸ್ತಾನದ ಆಂತರಿಕ ವಿಚಾರವಾಗಿದೆ’ ಎಂದು ಶಫಿಕುರ್‌ ಹೇಳಿದ್ದರು.

ಸಂಸದ ಶಫಿಕುರ್‌ ಅವರು ತಾಲಿಬಾನಿಗಳನ್ನು ಭಾರತದ ಸ್ವಾತಂತ್ರ್ಯ ಹೋರಾಟಗಾರರೊಂದಿಗೆ ಹೋಲಿಕೆ ಮಾಡಿರುವ ಬಗ್ಗೆ ದೂರು ದಾಖಲಾಗಿದೆ. ‘ಶಫಿಕುರ್‌ ಅವರ ವಿರುದ್ಧ ದೇಶ ದ್ರೋಹ (124ಎ), 154ಎ, 295 ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ. ಫೇಸ್‌ಬುಕ್‌ ವಿಡಿಯೊದಲ್ಲೂ ಇಂಥದ್ದೇ ಹೇಳಿಕೆಗಳನ್ನು ನೀಡಿರುವ ಇಬ್ಬರು ವ್ಯಕ್ತಿಗಳ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ’ ಎಂದು ಸಂಭಲ್‌ನ ಪೊಲೀಸ್‌ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು