7:27 PM Tuesday8 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಭಾರತೀಯ ವೈದ್ಯಕೀಯ ಸಂಘ ದ.ಕ.ಜಿಲ್ಲಾ ಶಾಖೆ ವೈದ್ಯರ ದಿನಾಚರಣೆ ; ಸಾಧಕ ವೈದ್ಯರಿಗೆ ಪ್ರಶಸ್ತಿ ಪ್ರದಾನ

09/07/2024, 22:23

 

ಮಂಗಳೂರು(reporterkarnataka.com): ವೈದ್ಯಕೀಯ ವೃತ್ತಿ ಒಂದು ಗೌರವಾನ್ವಿತ ವೃತ್ತಿಯಾಗಿದ್ದು, ವೈದ್ಯರು ಸಮಾಜದಲ್ಲಿ ಉನ್ನತ ಸ್ಥಾನವನ್ನು ಪಡೆದಿದ್ದಾರೆ ಎಂದು ನಿಟ್ಟೆ ವಿಶ್ವ ವಿದ್ಯಾಲಯದ ಕುಲಪತಿ ಡಾ.ಶಾಂತರಾಮ್ ಶೆಟ್ಟಿ ಹೇಳಿದರು.

ಅವರು ಭಾರತೀಯ ವೈದ್ಯಕೀಯ ಸಂಘ ದ.ಕ. ಜಿಲ್ಲಾ ಶಾಖೆಯ ಆಶ್ರಯದಲ್ಲಿ ಇತ್ತೀಚೆಗೆ ಸಂಸ್ಥೆಯ ಸಭಾಂಗಣದಲ್ಲಿ ಜರಗಿದ ವೈದ್ಯರ ದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಭಾಗವಹಿಸಿ ಮಾತನಾಡಿದರು.

ವೈದ್ಯಕೀಯ ವೃತ್ತಿ ಮತ್ತು ಸೇವೆಯ ವಿರುದ್ಧ ಸರಕಾರ ವಿಶೇಷ ಕಾನೂನನ್ನು ಹೊರಡಿಸಿದೆ ಎಂದು ಖೇದ ವ್ಯಕ್ತಪಡಿಸಿ ಅದನ್ನು ವೈದ್ಯಕೀಯ ವೃಂದದವರು ವಿರೋಧಿಸಬೇಕು ಮತ್ತು ಪ್ರತಿಭಟಿಸಬೇಕೆಂದು ಕರೆ ನೀಡಿದರು.

ಭಾರತೀಯ ವೈದ್ಯಕೀಯ ದ.ಕ. ಜಿಲ್ಲಾ ಶಾಖೆಯ ಅಧ್ಯಕ್ಷ ಡಾ.ರಂಜನ್‌ ಅಧ್ಯಕ್ಷೀಯ ಭಾಷಣದಲ್ಲಿ ವೈದ್ಯರ ದಿನಾಚರಣೆಯ ಉದ್ದೇಶ ಮತ್ತು ಮಹತ್ವವನ್ನು ವಿವರಿಸಿ ಸಂಸ್ಥೆಯ ಭವಿಷ್ಯದ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಡಾ.ಎಲ್.ಎಲ್.ಜೋಶ್ವಾ (ವೈದ್ಯಕೀಯಶಾಸ್ತ್ರ ತಜ್ಞ), ಡಾ.ಜೀವರಾಜ್ ಸೊರಕೆ (ಶಸ್ತ್ರ ಚಿಕಿತ್ಸಕರು), ಡಾ.ಇಂದುಮತಿ ಮಲ್ಯ (ಸ್ತ್ರಿ ಆರೋಗ್ಯ ಮತ್ತು ಪ್ರಸೂತಿ ತಜ್ಞರು), ಡಾ.ಸುಬೀರ್ ರೆಬೆಲ್ಲೋ (ಕುಟುಂಬ ವೈದ್ಯರು) ಅವರು ವೈದ್ಯಕೀಯ ಕ್ಷೇತ್ರಕ್ಕೆ ಸಲ್ಲಿಸಿದ ಸುದೀರ್ಘ ಅನುಪಮ ಸೇವೆ ಮತ್ತು ಕೊಡುಗೆಯನ್ನು ಪರಿಗಣಿಸಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸಂಸ್ಥೆಯ ನಿರಂತರ ವೈದ್ಯಕೀಯ ಶಿಕ್ಷಣ ಅಂಗವಾಗಿ ನಗರದ ಯೆನಪೋಯ ಆಸ್ಪತ್ರೆಯ ಕೀಲು ಮೂಳೆ ಶಾಸ್ತ್ರ ವಿಭಾಗದ ತಜ್ಞ ಡಾ.ದೀಪಕ್ ರೈ ಮಂಡಿ ಬದಲಾವಣೆಗೆ ಆಧುನಿಕ ರೊಬೋಟಿಕ್ ಶಸ್ತ್ರ ಚಿಕಿತ್ಸೆ ಬಗ್ಗೆ ಉಪನ್ಯಾಸ ನೀಡಿದರು.

ಸಂಸ್ಥೆಯ ಚುನಾಯಿತ ಅಧ್ಯಕ್ಷರಾದ ಡಾ.ಜೆಸ್ಸಿ ಮರಿಯಾ ಡಿ’ಸೋಜಾ, ಕೋಶಾಧಿಕಾರಿ ಡಾ.ಪ್ರಶಾಂತ್, ಸಂಸ್ಥೆಯ ಪ್ರತಿಷ್ಠಾನದ ಅಧ್ಯಕ್ಷ ಡಾ.ದಿವಾಕರ್ ರಾವ್, ಕೋಶಾಧಿಕಾರಿ ಕೆ.ಆರ್.ಕಾಮತ್ ಉಪಸ್ಥಿತರಿದ್ದರು. ಕಾರ್ಯದರ್ಶಿ ಡಾ. ಅವಿನ್ ಆಳ್ವ ವಂದಿಸಿದರು. ಅಕ್ಷತಾ ಸುಧೀರ್ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.

ಇತ್ತೀಚಿನ ಸುದ್ದಿ

ಜಾಹೀರಾತು