10:41 AM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಭಾರತ್ ಬಂದ್ ಗೆ ಬೆಂಬಲ: ಸೆ. 27ರಂದು ಕೂಡ್ಲಗಿ ಬಂದ್ ಗೆ ರೈತ- ಕಾರ್ಮಿಕ ಸಂಘಟನೆಗಳ ಕರೆ

22/09/2021, 19:07

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ತಾಲೂಕಿನ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಸೆ. 27ರಂದು ನಡೆಯುವ ಭಾರತ್ ಬಂದ್ ಹಿನ್ನಲೆಯಲ್ಲಿ ವಿವಿಧ ಸಂಘಟನೆಗಳಿಂದ ಕೂಡ್ಲಿಗಿ ಬಂದ್ ಕರೆ ನೀಡಲಾಗಿದೆ. 

ರೈತ ಸಂಘ ಹಾಗೂ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ನಡೆಯುವ ಬಂದ್ ಕರೆ ಯಶಸ್ವಿಗೊಳಿಸಲು ವಿವಿಧ ಸಂಘಟನೆಗಳ ಪದಾಧಿಕಾರಿಗಳು  ಪ್ರವಾಸಿ ಮಂದಿರದಲ್ಲಿ. ಸೆ22ರಂದು ಪೂರ್ವಭಾವಿ ಸಭೆ ಜರುಗಿಸಲಾಯಿತು,

ಸಭೆಯಲ್ಲಿ ಕನ್ನಡಪರ ಸಂಘಟನೆ ಹಾಗೂ ವಿವಿದ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿ ಬೆಂಬಲ ಸೂಚಿಸಿದರು. ಈ ಮೂಲಕ
ಬಂದ್ ಯಶಸ್ಸುಗೊಳಿಸಲು ಸರ್ವರು ಒಮ್ಮತದ ನಿರ್ಣಯ ಕೈಗೊಂಡರು,

ಸಾರ್ವಜನಿಕರಲ್ಲಿ ಮನವಿ: ರೈತ ಸಂಘದ ಮುಖಂಡರಾದ ಕೆ.ಕೆ. ಹಟ್ಟಿ ದೇವರಮನೆ ಮಹೇಶ್ ಮಾತನಾಡಿ, ಜನ ವಿರೋಧಿ ನೀತಿಯ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ದೆಹಲಿಯಲ್ಲಿ ಜರುಗುತ್ತಿರುವ ಪ್ರತಿಭಟನೆಗೆ.ಬೆಂಬಲ ವ್ಯಕ್ತಪಡಿಸಿ ಕರೆ ನೀಡಿರುವ ಭಾರತ ಬಂದ್ ಕರೆ 

ಹಿನ್ನೆಲೆಯಲ್ಲಿ ರೈತ ಸಂಘ ಹಾಗೂ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಯೋಗದಲ್ಲಿ ನಡೆಯುವ ಕೂಡ್ಲಿಗಿ ಬಂದ್ ಗೆ

ಸಾರ್ವಜನಿಕರು ಸಹಕರಿಸಬೇಕು ಹಾಗೂ ಅಂಗಡಿ ಮುಂಗಟ್ಟುಗಳು ಹಾಗೂ ಹೋಟೆಲ್ ಮಾಲೀಕರು ವಾಹನಗಳ ಕಾರ್ಮಿಕರು, ಬಂದ್ ನಲ್ಲಿ ಭಾಗವಹಿಸಿ ಯಶಸ್ವಿ ಗೊಳಿಸಬೇಕೆಂದು  ಅವರು ಮನವಿ ಮಾಡಿದರು.

ಎಂ. ಬಸವರಾಜ, ಕಾರ್ಮಿಕ ಮುಖಂಡ ಹಾಗೂ ವಕೀಲರಾದ ಸಿ.ವಿರುಪಾಕ್ಷಪ್ಪ.ರೈತ ಸಂಘದ ಮುಖಂಡರಾದ ವಿ ನಾಗರಾಜ,ಎಸ್.ಭಾಷಾ ಸಾಬ್, ಕಾರ್ಯಾಧ್ಯಕ್ಷ ಕೆ.ಕೃಷ್ಣ,ಬಿ.ಚನ್ನಬಸಪ್ಪ ಹಾಗೂ ಹಾಲಸ್ವಾಮಿ ಮತ್ತು ಕಾರ್ಮಿಕ ಮುಖಂಡರಾದ ಗುನ್ನಳ್ಳಿ ರಾಘವೇಂದ್ರ, ದೇವದಾಸಿ ವಿಮೋಚನ ಸಂಘದ ಅಧ್ಯಕ್ಷೆ ಕೆ.ವೆಂಕಮ್ಮ,ರೈತ ಸಂಘದ ಕಾರ್ಯಕರ್ತರಾದ ಭಾಷಾಸಾಬ್ ಕೆ., ಶೇಷಪ್ಪ,ಉಲುವತ್ತಿ ಸೋಮಣ್ಣ ಹಾಗೂ ಮತ್ತಿತರರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು