6:21 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಭಾರತ್ ಬಂದ್ ಗೆ ಬೆಂಬಲ: ಸೆ. 27ರಂದು ಕೂಡ್ಲಗಿ ಬಂದ್ ಗೆ ರೈತ- ಕಾರ್ಮಿಕ ಸಂಘಟನೆಗಳ ಕರೆ

22/09/2021, 19:07

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ತಾಲೂಕಿನ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಸೆ. 27ರಂದು ನಡೆಯುವ ಭಾರತ್ ಬಂದ್ ಹಿನ್ನಲೆಯಲ್ಲಿ ವಿವಿಧ ಸಂಘಟನೆಗಳಿಂದ ಕೂಡ್ಲಿಗಿ ಬಂದ್ ಕರೆ ನೀಡಲಾಗಿದೆ. 

ರೈತ ಸಂಘ ಹಾಗೂ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ನಡೆಯುವ ಬಂದ್ ಕರೆ ಯಶಸ್ವಿಗೊಳಿಸಲು ವಿವಿಧ ಸಂಘಟನೆಗಳ ಪದಾಧಿಕಾರಿಗಳು  ಪ್ರವಾಸಿ ಮಂದಿರದಲ್ಲಿ. ಸೆ22ರಂದು ಪೂರ್ವಭಾವಿ ಸಭೆ ಜರುಗಿಸಲಾಯಿತು,

ಸಭೆಯಲ್ಲಿ ಕನ್ನಡಪರ ಸಂಘಟನೆ ಹಾಗೂ ವಿವಿದ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿ ಬೆಂಬಲ ಸೂಚಿಸಿದರು. ಈ ಮೂಲಕ
ಬಂದ್ ಯಶಸ್ಸುಗೊಳಿಸಲು ಸರ್ವರು ಒಮ್ಮತದ ನಿರ್ಣಯ ಕೈಗೊಂಡರು,

ಸಾರ್ವಜನಿಕರಲ್ಲಿ ಮನವಿ: ರೈತ ಸಂಘದ ಮುಖಂಡರಾದ ಕೆ.ಕೆ. ಹಟ್ಟಿ ದೇವರಮನೆ ಮಹೇಶ್ ಮಾತನಾಡಿ, ಜನ ವಿರೋಧಿ ನೀತಿಯ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ದೆಹಲಿಯಲ್ಲಿ ಜರುಗುತ್ತಿರುವ ಪ್ರತಿಭಟನೆಗೆ.ಬೆಂಬಲ ವ್ಯಕ್ತಪಡಿಸಿ ಕರೆ ನೀಡಿರುವ ಭಾರತ ಬಂದ್ ಕರೆ 

ಹಿನ್ನೆಲೆಯಲ್ಲಿ ರೈತ ಸಂಘ ಹಾಗೂ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಯೋಗದಲ್ಲಿ ನಡೆಯುವ ಕೂಡ್ಲಿಗಿ ಬಂದ್ ಗೆ

ಸಾರ್ವಜನಿಕರು ಸಹಕರಿಸಬೇಕು ಹಾಗೂ ಅಂಗಡಿ ಮುಂಗಟ್ಟುಗಳು ಹಾಗೂ ಹೋಟೆಲ್ ಮಾಲೀಕರು ವಾಹನಗಳ ಕಾರ್ಮಿಕರು, ಬಂದ್ ನಲ್ಲಿ ಭಾಗವಹಿಸಿ ಯಶಸ್ವಿ ಗೊಳಿಸಬೇಕೆಂದು  ಅವರು ಮನವಿ ಮಾಡಿದರು.

ಎಂ. ಬಸವರಾಜ, ಕಾರ್ಮಿಕ ಮುಖಂಡ ಹಾಗೂ ವಕೀಲರಾದ ಸಿ.ವಿರುಪಾಕ್ಷಪ್ಪ.ರೈತ ಸಂಘದ ಮುಖಂಡರಾದ ವಿ ನಾಗರಾಜ,ಎಸ್.ಭಾಷಾ ಸಾಬ್, ಕಾರ್ಯಾಧ್ಯಕ್ಷ ಕೆ.ಕೃಷ್ಣ,ಬಿ.ಚನ್ನಬಸಪ್ಪ ಹಾಗೂ ಹಾಲಸ್ವಾಮಿ ಮತ್ತು ಕಾರ್ಮಿಕ ಮುಖಂಡರಾದ ಗುನ್ನಳ್ಳಿ ರಾಘವೇಂದ್ರ, ದೇವದಾಸಿ ವಿಮೋಚನ ಸಂಘದ ಅಧ್ಯಕ್ಷೆ ಕೆ.ವೆಂಕಮ್ಮ,ರೈತ ಸಂಘದ ಕಾರ್ಯಕರ್ತರಾದ ಭಾಷಾಸಾಬ್ ಕೆ., ಶೇಷಪ್ಪ,ಉಲುವತ್ತಿ ಸೋಮಣ್ಣ ಹಾಗೂ ಮತ್ತಿತರರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು