1:29 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

‘ಭಾರತ್ ಜೋಡೋ ಯಾತ್ರೆ’ ಇಂದು ಕರ್ನಾಟಕ ಪ್ರವೇಶ: ರಾಜ್ಯಕ್ಕೆ ಸೋನಿಯಾ, ಪ್ರಿಯಾಂಕಾ?

30/09/2022, 09:53

ಬೆಂಗಳೂರು(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತನ್ನ 21 ದಿನಗಳ ಭಾರತ ಜೋಡೋ ಯಾತ್ರೆ ಇಂದು ಕರ್ನಾಟಕ ಪ್ರವೇಶಿಸಲಿದ್ದು, ತೆಲಂಗಾಣವನ್ನು ಪ್ರವೇಶಿಸುವ ಮೊದಲು ರಾಜ್ಯದ 7 ಜಿಲ್ಲೆಗಳಲ್ಲಿ 511 ಕಿಲೋಮೀಟರ್ ಕಾಲ್ನಡಿಗೆಯಲ್ಲಿ ಪ್ರಯಾಣಿಸಲಿದ್ದಾರೆ.

ಯಾತ್ರೆಯು ಶುಕ್ರವಾರ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯನ್ನು ಪ್ರವೇಶಿಸಲಿದೆ. ಮೈಸೂರು, ಮಂಡ್ಯ, ತುಮಕೂರು, ಚಿತ್ರದುರ್ಗ, ಬಳ್ಳಾರಿ ಮತ್ತು ರಾಯಚೂರು ಜಿಲ್ಲೆಗಳ ಮೂಲಕ ಸಾಗಲಿದೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬಳ್ಳಾರಿಯಲ್ಲಿ ಬೃಹತ್ ರ್ಯಾಲಿಯಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಮಂಡ್ಯ ಜಿಲ್ಲೆಯ ಮಹಿಳೆಯರೊಂದಿಗೆ ಸಂವಾದ ನಡೆಸುವ ಸಾಧ್ಯತೆಯಿದೆ.

ಗಾಂಧಿ ಜಯಂತಿಯಂದು (ಅಕ್ಟೋಬರ್ 2) ರಾಹುಲ್ ಗಾಂಧಿ ಅವರು ಒಂದು ಕಾಲದಲ್ಲಿ ಖಾದಿ ಉದ್ಯಮಕ್ಕೆ ಹೆಸರುವಾಸಿಯಾಗಿದ್ದ ಮೈಸೂರು ಜಿಲ್ಲೆಯ ಬದನವಾಳು ಗ್ರಾಮದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಮಹಾತ್ಮ ಗಾಂಧಿಯವರು 1927 ಮತ್ತು 1932ರಲ್ಲಿ ಎರಡು ಬಾರಿ ಖಾದಿ ಉತ್ಪಾದನಾ ಕೇಂದ್ರಕ್ಕೆ ಭೇಟಿ ನೀಡಿದ್ದರು.

ಕಾಂಗ್ರೆಸ್ ರಾಜ್ಯ ಘಟಕವು ತನ್ನ ಸದಸ್ಯರನ್ನು ಹುರಿದುಂಬಿಸಲು ಮತ್ತು ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಸಾರ್ವಜನಿಕರಲ್ಲಿ ಬೆಂಬಲವನ್ನು ಸಂಗ್ರಹಿಸಲು ಈ ಯಾತ್ರೆಯನ್ನು ಸಂಪೂರ್ಣ ಬಳಕೆ ಮಾಡಲು ಎದುರು ನೋಡುತ್ತಿದ್ದು, ಯಾತ್ರೆಯನ್ನು ಸ್ವಾಗತಿಸಲು ಸಜ್ಜಾಗಿ ನಿಂತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು