7:45 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

‘ಭಾರತ್ ಜೋಡೋ ಯಾತ್ರೆ’ ಇಂದು ಕರ್ನಾಟಕ ಪ್ರವೇಶ: ರಾಜ್ಯಕ್ಕೆ ಸೋನಿಯಾ, ಪ್ರಿಯಾಂಕಾ?

30/09/2022, 09:53

ಬೆಂಗಳೂರು(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತನ್ನ 21 ದಿನಗಳ ಭಾರತ ಜೋಡೋ ಯಾತ್ರೆ ಇಂದು ಕರ್ನಾಟಕ ಪ್ರವೇಶಿಸಲಿದ್ದು, ತೆಲಂಗಾಣವನ್ನು ಪ್ರವೇಶಿಸುವ ಮೊದಲು ರಾಜ್ಯದ 7 ಜಿಲ್ಲೆಗಳಲ್ಲಿ 511 ಕಿಲೋಮೀಟರ್ ಕಾಲ್ನಡಿಗೆಯಲ್ಲಿ ಪ್ರಯಾಣಿಸಲಿದ್ದಾರೆ.

ಯಾತ್ರೆಯು ಶುಕ್ರವಾರ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯನ್ನು ಪ್ರವೇಶಿಸಲಿದೆ. ಮೈಸೂರು, ಮಂಡ್ಯ, ತುಮಕೂರು, ಚಿತ್ರದುರ್ಗ, ಬಳ್ಳಾರಿ ಮತ್ತು ರಾಯಚೂರು ಜಿಲ್ಲೆಗಳ ಮೂಲಕ ಸಾಗಲಿದೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬಳ್ಳಾರಿಯಲ್ಲಿ ಬೃಹತ್ ರ್ಯಾಲಿಯಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಮಂಡ್ಯ ಜಿಲ್ಲೆಯ ಮಹಿಳೆಯರೊಂದಿಗೆ ಸಂವಾದ ನಡೆಸುವ ಸಾಧ್ಯತೆಯಿದೆ.

ಗಾಂಧಿ ಜಯಂತಿಯಂದು (ಅಕ್ಟೋಬರ್ 2) ರಾಹುಲ್ ಗಾಂಧಿ ಅವರು ಒಂದು ಕಾಲದಲ್ಲಿ ಖಾದಿ ಉದ್ಯಮಕ್ಕೆ ಹೆಸರುವಾಸಿಯಾಗಿದ್ದ ಮೈಸೂರು ಜಿಲ್ಲೆಯ ಬದನವಾಳು ಗ್ರಾಮದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಮಹಾತ್ಮ ಗಾಂಧಿಯವರು 1927 ಮತ್ತು 1932ರಲ್ಲಿ ಎರಡು ಬಾರಿ ಖಾದಿ ಉತ್ಪಾದನಾ ಕೇಂದ್ರಕ್ಕೆ ಭೇಟಿ ನೀಡಿದ್ದರು.

ಕಾಂಗ್ರೆಸ್ ರಾಜ್ಯ ಘಟಕವು ತನ್ನ ಸದಸ್ಯರನ್ನು ಹುರಿದುಂಬಿಸಲು ಮತ್ತು ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಸಾರ್ವಜನಿಕರಲ್ಲಿ ಬೆಂಬಲವನ್ನು ಸಂಗ್ರಹಿಸಲು ಈ ಯಾತ್ರೆಯನ್ನು ಸಂಪೂರ್ಣ ಬಳಕೆ ಮಾಡಲು ಎದುರು ನೋಡುತ್ತಿದ್ದು, ಯಾತ್ರೆಯನ್ನು ಸ್ವಾಗತಿಸಲು ಸಜ್ಜಾಗಿ ನಿಂತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು