4:10 AM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

‘ಭಾರತ್ ಜೋಡೋ ಯಾತ್ರೆ’ ಇಂದು ಕರ್ನಾಟಕ ಪ್ರವೇಶ: ರಾಜ್ಯಕ್ಕೆ ಸೋನಿಯಾ, ಪ್ರಿಯಾಂಕಾ?

30/09/2022, 09:53

ಬೆಂಗಳೂರು(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತನ್ನ 21 ದಿನಗಳ ಭಾರತ ಜೋಡೋ ಯಾತ್ರೆ ಇಂದು ಕರ್ನಾಟಕ ಪ್ರವೇಶಿಸಲಿದ್ದು, ತೆಲಂಗಾಣವನ್ನು ಪ್ರವೇಶಿಸುವ ಮೊದಲು ರಾಜ್ಯದ 7 ಜಿಲ್ಲೆಗಳಲ್ಲಿ 511 ಕಿಲೋಮೀಟರ್ ಕಾಲ್ನಡಿಗೆಯಲ್ಲಿ ಪ್ರಯಾಣಿಸಲಿದ್ದಾರೆ.

ಯಾತ್ರೆಯು ಶುಕ್ರವಾರ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯನ್ನು ಪ್ರವೇಶಿಸಲಿದೆ. ಮೈಸೂರು, ಮಂಡ್ಯ, ತುಮಕೂರು, ಚಿತ್ರದುರ್ಗ, ಬಳ್ಳಾರಿ ಮತ್ತು ರಾಯಚೂರು ಜಿಲ್ಲೆಗಳ ಮೂಲಕ ಸಾಗಲಿದೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬಳ್ಳಾರಿಯಲ್ಲಿ ಬೃಹತ್ ರ್ಯಾಲಿಯಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಮಂಡ್ಯ ಜಿಲ್ಲೆಯ ಮಹಿಳೆಯರೊಂದಿಗೆ ಸಂವಾದ ನಡೆಸುವ ಸಾಧ್ಯತೆಯಿದೆ.

ಗಾಂಧಿ ಜಯಂತಿಯಂದು (ಅಕ್ಟೋಬರ್ 2) ರಾಹುಲ್ ಗಾಂಧಿ ಅವರು ಒಂದು ಕಾಲದಲ್ಲಿ ಖಾದಿ ಉದ್ಯಮಕ್ಕೆ ಹೆಸರುವಾಸಿಯಾಗಿದ್ದ ಮೈಸೂರು ಜಿಲ್ಲೆಯ ಬದನವಾಳು ಗ್ರಾಮದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಮಹಾತ್ಮ ಗಾಂಧಿಯವರು 1927 ಮತ್ತು 1932ರಲ್ಲಿ ಎರಡು ಬಾರಿ ಖಾದಿ ಉತ್ಪಾದನಾ ಕೇಂದ್ರಕ್ಕೆ ಭೇಟಿ ನೀಡಿದ್ದರು.

ಕಾಂಗ್ರೆಸ್ ರಾಜ್ಯ ಘಟಕವು ತನ್ನ ಸದಸ್ಯರನ್ನು ಹುರಿದುಂಬಿಸಲು ಮತ್ತು ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಸಾರ್ವಜನಿಕರಲ್ಲಿ ಬೆಂಬಲವನ್ನು ಸಂಗ್ರಹಿಸಲು ಈ ಯಾತ್ರೆಯನ್ನು ಸಂಪೂರ್ಣ ಬಳಕೆ ಮಾಡಲು ಎದುರು ನೋಡುತ್ತಿದ್ದು, ಯಾತ್ರೆಯನ್ನು ಸ್ವಾಗತಿಸಲು ಸಜ್ಜಾಗಿ ನಿಂತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು