8:06 AM Saturday2 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

‘ಭಾರತ್ ಜೋಡೋ ಯಾತ್ರೆ’ ಇಂದು ಕರ್ನಾಟಕ ಪ್ರವೇಶ: ರಾಜ್ಯಕ್ಕೆ ಸೋನಿಯಾ, ಪ್ರಿಯಾಂಕಾ?

30/09/2022, 09:53

ಬೆಂಗಳೂರು(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತನ್ನ 21 ದಿನಗಳ ಭಾರತ ಜೋಡೋ ಯಾತ್ರೆ ಇಂದು ಕರ್ನಾಟಕ ಪ್ರವೇಶಿಸಲಿದ್ದು, ತೆಲಂಗಾಣವನ್ನು ಪ್ರವೇಶಿಸುವ ಮೊದಲು ರಾಜ್ಯದ 7 ಜಿಲ್ಲೆಗಳಲ್ಲಿ 511 ಕಿಲೋಮೀಟರ್ ಕಾಲ್ನಡಿಗೆಯಲ್ಲಿ ಪ್ರಯಾಣಿಸಲಿದ್ದಾರೆ.

ಯಾತ್ರೆಯು ಶುಕ್ರವಾರ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯನ್ನು ಪ್ರವೇಶಿಸಲಿದೆ. ಮೈಸೂರು, ಮಂಡ್ಯ, ತುಮಕೂರು, ಚಿತ್ರದುರ್ಗ, ಬಳ್ಳಾರಿ ಮತ್ತು ರಾಯಚೂರು ಜಿಲ್ಲೆಗಳ ಮೂಲಕ ಸಾಗಲಿದೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬಳ್ಳಾರಿಯಲ್ಲಿ ಬೃಹತ್ ರ್ಯಾಲಿಯಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಮಂಡ್ಯ ಜಿಲ್ಲೆಯ ಮಹಿಳೆಯರೊಂದಿಗೆ ಸಂವಾದ ನಡೆಸುವ ಸಾಧ್ಯತೆಯಿದೆ.

ಗಾಂಧಿ ಜಯಂತಿಯಂದು (ಅಕ್ಟೋಬರ್ 2) ರಾಹುಲ್ ಗಾಂಧಿ ಅವರು ಒಂದು ಕಾಲದಲ್ಲಿ ಖಾದಿ ಉದ್ಯಮಕ್ಕೆ ಹೆಸರುವಾಸಿಯಾಗಿದ್ದ ಮೈಸೂರು ಜಿಲ್ಲೆಯ ಬದನವಾಳು ಗ್ರಾಮದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಮಹಾತ್ಮ ಗಾಂಧಿಯವರು 1927 ಮತ್ತು 1932ರಲ್ಲಿ ಎರಡು ಬಾರಿ ಖಾದಿ ಉತ್ಪಾದನಾ ಕೇಂದ್ರಕ್ಕೆ ಭೇಟಿ ನೀಡಿದ್ದರು.

ಕಾಂಗ್ರೆಸ್ ರಾಜ್ಯ ಘಟಕವು ತನ್ನ ಸದಸ್ಯರನ್ನು ಹುರಿದುಂಬಿಸಲು ಮತ್ತು ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಸಾರ್ವಜನಿಕರಲ್ಲಿ ಬೆಂಬಲವನ್ನು ಸಂಗ್ರಹಿಸಲು ಈ ಯಾತ್ರೆಯನ್ನು ಸಂಪೂರ್ಣ ಬಳಕೆ ಮಾಡಲು ಎದುರು ನೋಡುತ್ತಿದ್ದು, ಯಾತ್ರೆಯನ್ನು ಸ್ವಾಗತಿಸಲು ಸಜ್ಜಾಗಿ ನಿಂತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು