12:38 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

‘ಭಾರತ್ ಜೋಡೋ ಯಾತ್ರೆ’ ಇಂದು ಕರ್ನಾಟಕ ಪ್ರವೇಶ: ರಾಜ್ಯಕ್ಕೆ ಸೋನಿಯಾ, ಪ್ರಿಯಾಂಕಾ?

30/09/2022, 09:53

ಬೆಂಗಳೂರು(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತನ್ನ 21 ದಿನಗಳ ಭಾರತ ಜೋಡೋ ಯಾತ್ರೆ ಇಂದು ಕರ್ನಾಟಕ ಪ್ರವೇಶಿಸಲಿದ್ದು, ತೆಲಂಗಾಣವನ್ನು ಪ್ರವೇಶಿಸುವ ಮೊದಲು ರಾಜ್ಯದ 7 ಜಿಲ್ಲೆಗಳಲ್ಲಿ 511 ಕಿಲೋಮೀಟರ್ ಕಾಲ್ನಡಿಗೆಯಲ್ಲಿ ಪ್ರಯಾಣಿಸಲಿದ್ದಾರೆ.

ಯಾತ್ರೆಯು ಶುಕ್ರವಾರ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯನ್ನು ಪ್ರವೇಶಿಸಲಿದೆ. ಮೈಸೂರು, ಮಂಡ್ಯ, ತುಮಕೂರು, ಚಿತ್ರದುರ್ಗ, ಬಳ್ಳಾರಿ ಮತ್ತು ರಾಯಚೂರು ಜಿಲ್ಲೆಗಳ ಮೂಲಕ ಸಾಗಲಿದೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬಳ್ಳಾರಿಯಲ್ಲಿ ಬೃಹತ್ ರ್ಯಾಲಿಯಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಮಂಡ್ಯ ಜಿಲ್ಲೆಯ ಮಹಿಳೆಯರೊಂದಿಗೆ ಸಂವಾದ ನಡೆಸುವ ಸಾಧ್ಯತೆಯಿದೆ.

ಗಾಂಧಿ ಜಯಂತಿಯಂದು (ಅಕ್ಟೋಬರ್ 2) ರಾಹುಲ್ ಗಾಂಧಿ ಅವರು ಒಂದು ಕಾಲದಲ್ಲಿ ಖಾದಿ ಉದ್ಯಮಕ್ಕೆ ಹೆಸರುವಾಸಿಯಾಗಿದ್ದ ಮೈಸೂರು ಜಿಲ್ಲೆಯ ಬದನವಾಳು ಗ್ರಾಮದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಮಹಾತ್ಮ ಗಾಂಧಿಯವರು 1927 ಮತ್ತು 1932ರಲ್ಲಿ ಎರಡು ಬಾರಿ ಖಾದಿ ಉತ್ಪಾದನಾ ಕೇಂದ್ರಕ್ಕೆ ಭೇಟಿ ನೀಡಿದ್ದರು.

ಕಾಂಗ್ರೆಸ್ ರಾಜ್ಯ ಘಟಕವು ತನ್ನ ಸದಸ್ಯರನ್ನು ಹುರಿದುಂಬಿಸಲು ಮತ್ತು ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಸಾರ್ವಜನಿಕರಲ್ಲಿ ಬೆಂಬಲವನ್ನು ಸಂಗ್ರಹಿಸಲು ಈ ಯಾತ್ರೆಯನ್ನು ಸಂಪೂರ್ಣ ಬಳಕೆ ಮಾಡಲು ಎದುರು ನೋಡುತ್ತಿದ್ದು, ಯಾತ್ರೆಯನ್ನು ಸ್ವಾಗತಿಸಲು ಸಜ್ಜಾಗಿ ನಿಂತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು