6:02 AM Tuesday28 - July 2026
ಬ್ರೇಕಿಂಗ್ ನ್ಯೂಸ್
Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ…

ಇತ್ತೀಚಿನ ಸುದ್ದಿ

ಭಾರತ ಮಾನವೀಯ ಮೌಲ್ಯ, ಶಾಂತಿ- ಅಹಿಂಸೆಯ ಮಹತ್ವ ಇಡೀ ಜಗತ್ತಿಗೆ ಸಾರಿದೆ: ಮೂಡುಬಿದರೆಯಲ್ಲಿ ರಾಜ್ಯಪಾಲ ಗೆಹ್ಲೋಟ್

14/03/2022, 20:37

ಮೂಡುಬಿದರೆ(reporterkarnataka.com): ವಿಶ್ವಕ್ಕೆ ಶಾಂತಿ ಹಾಗೂ ಅಹಿಂಸೆಯ ಸಂದೇಶ ಸಾರಿದ ಭಾರತದ ಕೀರ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ನಾವೆಲ್ಲರೂ ಕೈಜೋಡಿಸಬೇಕೆಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕರೆ ನೀಡಿದರು.


ಅವರು ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪಟ್ಟಣದ 18 ಜೈನ ದೇವಾಲಯಗಳಲ್ಲಿ ಪ್ರಮುಖವಾದ ಸಾವಿರ ಕಂಬಗಳ ಬಸದಿಯಾದ ತ್ರಿಭುವನ ತಿಲಕ ಚೂಡಾಮಣಿ ದೇವಾಲಯಕ್ಕೆ ಸೋಮವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ನಂತರ ಮಾತನಾಡಿದ ಅವರು, ನಮ್ಮ ದೇಶ ಮಾನವೀಯ ಮೌಲ್ಯಗಳು, ಶಾಂತಿ, ಅಹಿಂಸೆಯ ಮಹತ್ವ ಮತ್ತು ಸಹೋದರತ್ವವನ್ನು ಇಡೀ ಜಗತ್ತಿಗೆ ತೋರಿಸಿದೆ. ಭಾರತದ ಸಂಸ್ಕೃತಿ ವಿಶ್ವಕ್ಕೆ ಪ್ರೇರಣೆ ನೀಡಿದೆ. ಭಾರತ ಜಗತ್ತಿಗೆ ಶಾಂತಿ, ಅಹಿಂಸೆ ಮತ್ತು ಸೇವೆಗೆ ಸ್ಫೂರ್ತಿಯನ್ನು ನಿರಂತರವಾಗಿ ನೀಡಲಿದೆ ಎಂಬ ಭರವಸೆ ಇದೆ  ಎಂದರು.

ಜೈನ ಮಠದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರು ರಾಜ್ಯಪಾಲರನ್ನು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಮೂಡಬಿದರೆ ಪುರಸಭೆ ಅಧ್ಯಕ್ಷ ಪ್ರಸಾದ್, ಮಾಜಿ ಸಚಿವ ಅಭಯಚಂದ್ರ ಜೈನ್, ಮಠದ ಪದಾಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು