9:39 PM Wednesday10 - June 2026
ಬ್ರೇಕಿಂಗ್ ನ್ಯೂಸ್
ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ… ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ…

ಇತ್ತೀಚಿನ ಸುದ್ದಿ

ಭಾರತ ಮಾನವೀಯ ಮೌಲ್ಯ, ಶಾಂತಿ- ಅಹಿಂಸೆಯ ಮಹತ್ವ ಇಡೀ ಜಗತ್ತಿಗೆ ಸಾರಿದೆ: ಮೂಡುಬಿದರೆಯಲ್ಲಿ ರಾಜ್ಯಪಾಲ ಗೆಹ್ಲೋಟ್

14/03/2022, 20:37

ಮೂಡುಬಿದರೆ(reporterkarnataka.com): ವಿಶ್ವಕ್ಕೆ ಶಾಂತಿ ಹಾಗೂ ಅಹಿಂಸೆಯ ಸಂದೇಶ ಸಾರಿದ ಭಾರತದ ಕೀರ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ನಾವೆಲ್ಲರೂ ಕೈಜೋಡಿಸಬೇಕೆಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕರೆ ನೀಡಿದರು.


ಅವರು ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪಟ್ಟಣದ 18 ಜೈನ ದೇವಾಲಯಗಳಲ್ಲಿ ಪ್ರಮುಖವಾದ ಸಾವಿರ ಕಂಬಗಳ ಬಸದಿಯಾದ ತ್ರಿಭುವನ ತಿಲಕ ಚೂಡಾಮಣಿ ದೇವಾಲಯಕ್ಕೆ ಸೋಮವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ನಂತರ ಮಾತನಾಡಿದ ಅವರು, ನಮ್ಮ ದೇಶ ಮಾನವೀಯ ಮೌಲ್ಯಗಳು, ಶಾಂತಿ, ಅಹಿಂಸೆಯ ಮಹತ್ವ ಮತ್ತು ಸಹೋದರತ್ವವನ್ನು ಇಡೀ ಜಗತ್ತಿಗೆ ತೋರಿಸಿದೆ. ಭಾರತದ ಸಂಸ್ಕೃತಿ ವಿಶ್ವಕ್ಕೆ ಪ್ರೇರಣೆ ನೀಡಿದೆ. ಭಾರತ ಜಗತ್ತಿಗೆ ಶಾಂತಿ, ಅಹಿಂಸೆ ಮತ್ತು ಸೇವೆಗೆ ಸ್ಫೂರ್ತಿಯನ್ನು ನಿರಂತರವಾಗಿ ನೀಡಲಿದೆ ಎಂಬ ಭರವಸೆ ಇದೆ  ಎಂದರು.

ಜೈನ ಮಠದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರು ರಾಜ್ಯಪಾಲರನ್ನು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಮೂಡಬಿದರೆ ಪುರಸಭೆ ಅಧ್ಯಕ್ಷ ಪ್ರಸಾದ್, ಮಾಜಿ ಸಚಿವ ಅಭಯಚಂದ್ರ ಜೈನ್, ಮಠದ ಪದಾಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು