3:16 AM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ಭಾರತೀಯ ಭಾಷೆಗಳ ಬಗ್ಗೆ ಪ್ರೀತಿ, ಗೌರವ, ಅಭಿಮಾನವಿರಲಿ: ಪರಶುರಾಮ್ ಜಿ. ಮಾಳಗೆ

09/12/2022, 23:26

ಮಂಗಳೂರು(reporterkarnata.com): ಭಾರತೀಯ ಭಾಷಾ ದಿವಸದ ಅಂಗವಾಗಿ ಕೆನರಾ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಹಿಂದಿ ಮತ್ತು ಸಂಸ್ಕೃತ ಸಂಘಗಳ ಜಂಟಿ ಆಶ್ರಯದಲ್ಲಿ “ಭಾರತೀಯ ಭಾಷೆ – ಮಹತ್ವ”ದ ಕುರಿತಾಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಮುಖ್ಯ ಅತಿಥಿಯಾಗಿದ್ದ ಬೆಸೆಂಟ್ ಮಹಿಳಾ ಮಹಾವಿದ್ಯಾಲಯದ ಡಾ. ಪರಶುರಾಮ್ ಜಿ. ಮಾಳಗೆ ಅವರು ಮಾತನಾಡಿ, ವಿವಿಧ ಭಾಷೆಗಳನ್ನು ಆಡುವ, ವಿವಿಧ ಆಚಾರ, ವಿಚಾರ ಸಂಪ್ರದಾಯಗಳಿದ್ದರೂ ನಾವೆಲ್ಲರೂ ಒಂದೇ, ನಾವೆಲ್ಲರೂ ಭಾರತೀಯರು. ಭಾಷೆ ಯಾವುದೇ ಇರಲಿ, ಪ್ರತಿಯೊಂದು ಭಾಷೆಯಲ್ಲಿ ಪ್ರೀತಿ, ಗೌರವವನ್ನು ಇಟ್ಟುಕೊಂಡು ಮುನ್ನಡೆದಲ್ಲಿ ವ್ಯಕ್ತಿತ್ವವು ವಿಕಸನಗೊಳ್ಳುವುದು. ಭಾಷೆಯು ನಮ್ಮ ಮನಸ್ಸಿನ ಭಾವನೆಗಳನ್ನು ಪರಸ್ಪರ ವ್ಯಕ್ತಪಡಿಸುವ ಒಂದು ಒಳ್ಳೆಯ ಸಾಧನವಾಗಿರುವುದು ಎಂದು ನುಡಿದರು. ಕಾಲೇಜಿನ ಪ್ರಾಂಶುಪಾಲೆ ಡಾ. ಪ್ರೇಮಲತಾ ವಿ. ಅವರು ಅಧ್ಯಕ್ಷತೆ ವಹಿಸಿದ್ದು ಭಾಷೆ ಯಾವುದೇ ಇರಲಿ ಅದರ ಬಗ್ಗೆ ಪ್ರೀತಿ, ಅಭಿಮಾನ, ಗೌರವವನ್ನು ಇಟ್ಟುಕೊಳ್ಳುವ ಅಗತ್ಯತೆ ಇದೆ ಎಂದರು.

ಕಲ್ಪೇಶ್ ತೆಂಡಲ್ ಅತಿಥಿಗಳನ್ನು ಪರಿಚಯಿಸಿ, ಸ್ವಾಗತಿಸಿದರು.
ಮನಸ್ವಿ ಮತ್ತು ಸೊನಾಲಿ ಪ್ರಾರ್ಥಿಸಿದರು. ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ಕಲ್ಪನಾ ಪ್ರಭು, ಹಿಂದಿ ಸಂಘದ ಸಂಯೋಜಕಿ ಸುಜಾತಾ ಜಿ. ನಾಯಕ್ ಹಾಗೂ ಸಂಸ್ಕೃತ ವಿಭಾಗದ ಮುಖ್ಯಸ್ಥೆ ಹಾಗೂ ಸಂಸ್ಕೃತ ಸಂಘದ ಸಂಯೋಜಕಿ ಚೇತನಾ, ಸ್ವಾತಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಅನುಶ್ರೀ ವಂದಿಸಿ, ಶೃಜನ್ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು