12:00 AM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಭಾರತೀಯ ಭಾಷೆಗಳ ಬಗ್ಗೆ ಪ್ರೀತಿ, ಗೌರವ, ಅಭಿಮಾನವಿರಲಿ: ಪರಶುರಾಮ್ ಜಿ. ಮಾಳಗೆ

09/12/2022, 23:26

ಮಂಗಳೂರು(reporterkarnata.com): ಭಾರತೀಯ ಭಾಷಾ ದಿವಸದ ಅಂಗವಾಗಿ ಕೆನರಾ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಹಿಂದಿ ಮತ್ತು ಸಂಸ್ಕೃತ ಸಂಘಗಳ ಜಂಟಿ ಆಶ್ರಯದಲ್ಲಿ “ಭಾರತೀಯ ಭಾಷೆ – ಮಹತ್ವ”ದ ಕುರಿತಾಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಮುಖ್ಯ ಅತಿಥಿಯಾಗಿದ್ದ ಬೆಸೆಂಟ್ ಮಹಿಳಾ ಮಹಾವಿದ್ಯಾಲಯದ ಡಾ. ಪರಶುರಾಮ್ ಜಿ. ಮಾಳಗೆ ಅವರು ಮಾತನಾಡಿ, ವಿವಿಧ ಭಾಷೆಗಳನ್ನು ಆಡುವ, ವಿವಿಧ ಆಚಾರ, ವಿಚಾರ ಸಂಪ್ರದಾಯಗಳಿದ್ದರೂ ನಾವೆಲ್ಲರೂ ಒಂದೇ, ನಾವೆಲ್ಲರೂ ಭಾರತೀಯರು. ಭಾಷೆ ಯಾವುದೇ ಇರಲಿ, ಪ್ರತಿಯೊಂದು ಭಾಷೆಯಲ್ಲಿ ಪ್ರೀತಿ, ಗೌರವವನ್ನು ಇಟ್ಟುಕೊಂಡು ಮುನ್ನಡೆದಲ್ಲಿ ವ್ಯಕ್ತಿತ್ವವು ವಿಕಸನಗೊಳ್ಳುವುದು. ಭಾಷೆಯು ನಮ್ಮ ಮನಸ್ಸಿನ ಭಾವನೆಗಳನ್ನು ಪರಸ್ಪರ ವ್ಯಕ್ತಪಡಿಸುವ ಒಂದು ಒಳ್ಳೆಯ ಸಾಧನವಾಗಿರುವುದು ಎಂದು ನುಡಿದರು. ಕಾಲೇಜಿನ ಪ್ರಾಂಶುಪಾಲೆ ಡಾ. ಪ್ರೇಮಲತಾ ವಿ. ಅವರು ಅಧ್ಯಕ್ಷತೆ ವಹಿಸಿದ್ದು ಭಾಷೆ ಯಾವುದೇ ಇರಲಿ ಅದರ ಬಗ್ಗೆ ಪ್ರೀತಿ, ಅಭಿಮಾನ, ಗೌರವವನ್ನು ಇಟ್ಟುಕೊಳ್ಳುವ ಅಗತ್ಯತೆ ಇದೆ ಎಂದರು.

ಕಲ್ಪೇಶ್ ತೆಂಡಲ್ ಅತಿಥಿಗಳನ್ನು ಪರಿಚಯಿಸಿ, ಸ್ವಾಗತಿಸಿದರು.
ಮನಸ್ವಿ ಮತ್ತು ಸೊನಾಲಿ ಪ್ರಾರ್ಥಿಸಿದರು. ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ಕಲ್ಪನಾ ಪ್ರಭು, ಹಿಂದಿ ಸಂಘದ ಸಂಯೋಜಕಿ ಸುಜಾತಾ ಜಿ. ನಾಯಕ್ ಹಾಗೂ ಸಂಸ್ಕೃತ ವಿಭಾಗದ ಮುಖ್ಯಸ್ಥೆ ಹಾಗೂ ಸಂಸ್ಕೃತ ಸಂಘದ ಸಂಯೋಜಕಿ ಚೇತನಾ, ಸ್ವಾತಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಅನುಶ್ರೀ ವಂದಿಸಿ, ಶೃಜನ್ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು